<p><strong>ಬೆಂಗಳೂರು</strong>: ವೈಟ್ಫೀಲ್ಡ್ ವಿಭಾಗದ ವಿವಿಧ ಬಡಾವಣೆಗಳಲ್ಲಿ ಮನೆ ಎದುರು ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ಬೈಕ್ಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕಾರ್ಯಾಚರಣೆ ನಡೆಸಿದ ಮಾರತ್ತಹಳ್ಳಿ ಠಾಣೆ ಪೊಲೀಸರು, ಆಂಧ್ರಪ್ರದೇಶದ ಆನಂದ್(32) ಮತ್ತು ಸೇಠ್ ಮಿಲ್ ವಾಲಿ(35) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>‘ಆರೋಪಿಗಳಿಂದ ₹35 ಲಕ್ಷ ಮೌಲ್ಯದ 40 ಬೈಕ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳ ಬಂಧನದಿಂದ ಮಾರತ್ತಹಳ್ಳಿ 3, ಮಹದೇವಪುರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣ ಪತ್ತೆಯಾಗಿದೆ. ಕಳವು ಮಾಡಿದ ಬೈಕ್ಗಳನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದರು.</p>.<p>ಮತ್ತೊಂದು ಪ್ರಕರಣದಲ್ಲಿ ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ತಮಿಳುನಾಡಿನ ಶರತ್ ಬಾಬು(40) ಬಂಧಿತ ಆರೋಪಿ.</p>.<p>‘ಆರೋಪಿಯಿಂದ ₹8 ಲಕ್ಷ ಮೌಲ್ಯದ 19 ಬೈಕ್ ಜಪ್ತಿ ಮಾಡಲಾಗಿದೆ. ಈತನ ಬಂಧನದಿಂದ ಕಾಡುಗೋಡಿ 6, ವೈಟ್ಫೀಲ್ಡ್ 1 ಮತ್ತು ಸರ್ಜಾಪುರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವೈಟ್ಫೀಲ್ಡ್ ವಿಭಾಗದ ವಿವಿಧ ಬಡಾವಣೆಗಳಲ್ಲಿ ಮನೆ ಎದುರು ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ಬೈಕ್ಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕಾರ್ಯಾಚರಣೆ ನಡೆಸಿದ ಮಾರತ್ತಹಳ್ಳಿ ಠಾಣೆ ಪೊಲೀಸರು, ಆಂಧ್ರಪ್ರದೇಶದ ಆನಂದ್(32) ಮತ್ತು ಸೇಠ್ ಮಿಲ್ ವಾಲಿ(35) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>‘ಆರೋಪಿಗಳಿಂದ ₹35 ಲಕ್ಷ ಮೌಲ್ಯದ 40 ಬೈಕ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳ ಬಂಧನದಿಂದ ಮಾರತ್ತಹಳ್ಳಿ 3, ಮಹದೇವಪುರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣ ಪತ್ತೆಯಾಗಿದೆ. ಕಳವು ಮಾಡಿದ ಬೈಕ್ಗಳನ್ನು ಕಡಿಮೆ ಮೊತ್ತಕ್ಕೆ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದರು.</p>.<p>ಮತ್ತೊಂದು ಪ್ರಕರಣದಲ್ಲಿ ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ತಮಿಳುನಾಡಿನ ಶರತ್ ಬಾಬು(40) ಬಂಧಿತ ಆರೋಪಿ.</p>.<p>‘ಆರೋಪಿಯಿಂದ ₹8 ಲಕ್ಷ ಮೌಲ್ಯದ 19 ಬೈಕ್ ಜಪ್ತಿ ಮಾಡಲಾಗಿದೆ. ಈತನ ಬಂಧನದಿಂದ ಕಾಡುಗೋಡಿ 6, ವೈಟ್ಫೀಲ್ಡ್ 1 ಮತ್ತು ಸರ್ಜಾಪುರ ಠಾಣೆಯಲ್ಲಿ ದಾಖಲಾಗಿದ್ದ 1 ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>