ಬೆಂಗಳೂರು: ಬಿಟ್ಕಾಯಿನ್ ಹಗರಣದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಸಿಐಡಿಯ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಡಿವೈಎಸ್ಪಿ ಶ್ರೀಧರ್ ಪೂಜಾರ ಬಂಧಿತ ಆರೋಪಿ.
ವಿಚಾರಣೆಗೆಂದು ಸಿಐಡಿ ಕಚೇರಿಗೆ ಶ್ರೀಧರ್ ಬಂದಿದ್ದರು. ಆಗ ಅವರನ್ನು ಬಂಧಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಕಾಟನ್ಪೇಟೆ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣದ ಸಂಬಂಧ ಡಿವೈಎಸ್ಪಿಯನ್ನು ಬಂಧಿಸಲಾಗಿದೆ. ಈವರೆಗೂ ನಾಲ್ವರು ಪೊಲೀಸರು ಅಧಿಕಾರಿಗಳು ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾರೆ.