<p><strong>ಬೆಂಗಳೂರು</strong>: ‘ಬಿಟ್ ಕಾಯಿನ್ ವರ್ಗಾವಣೆ, ಹ್ಯಾಕಿಂಗ್ ಮತ್ತು ಪಾಸ್ವರ್ಡ್ ಬದಲಾಯಿಸಿದ ಆರೋಪದಡಿ ತಲೆ ಮರೆಸಿಕೊಂಡಿರುವ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಎಸ್ಪಿ ಶ್ರೀಧರ್ ಕೆ. ಪೂಜಾರ್ ಮತ್ತು ಯಲಹಂಕ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಆರ್. ಚಂದ್ರಧರ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p>.<p>ಮತ್ತೊಬ್ಬ ಪೊಲೀಸ್ ಇನ್ಸ್ಪೆಕ್ಟರ್ ಡಿ.ಎಂ. ಪ್ರಶಾಂತ್ ಬಾಬು ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.</p>.<p>ಪೂಜಾರ್ ಮತ್ತು ಚಂದ್ರಧರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರ ಏಕಸದಸ್ಯ ನ್ಯಾಯಪೀಠ ಏಪ್ರಿಲ್ 1ರಂದು ವಿಚಾರಣೆ ನಡೆಸಲಿದೆ.</p>.<p>ಎಫ್ಐಆರ್ ರದ್ದು ಕೋರಿ ಡಿ.ಎಂ.ಪ್ರಶಾಂತ್ ಬಾಬು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠ ಏಪ್ರಿಲ್ 18ಕ್ಕೆ ವಿಚಾರಣೆ ನಡೆಸಲಿದೆ.</p>.<p>‘ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿದ್ದ ಶ್ರೀಧರ್ ಪೂಜಾರ್, ಚಂದ್ರಧರ, <br>ಲಕ್ಷ್ಮಿಕಾಂತಯ್ಯ, ಪ್ರಶಾಂತ್ ಬಾಬು ಸೇರಿದಂತೆ ಕೆಲವು ಅಧಿಕಾರಿಗಳು ಆರೋಪಿಗಳಾದ ಶ್ರೀಕೃಷ್ಣ <br>ಅಲಿಯಾಸ್ ಶ್ರೀಕಿ ಮತ್ತು ರಾಬಿನ್ ಖಂಡೇಲ್ವಾಲ ಅವರನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡು ಜಿಸಿಐಡಿ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂತೋಷ್ ಕುಮಾರ್ ನೆರವಿನಿಂದ ಹ್ಯಾಕಿಂಗ್, ಬಿಟ್ ಕಾಯಿನ್ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ ಮಾಡಿದ್ದಾರೆ’ ಎಂಬ ಆರೋಪ ಎದುರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಿಟ್ ಕಾಯಿನ್ ವರ್ಗಾವಣೆ, ಹ್ಯಾಕಿಂಗ್ ಮತ್ತು ಪಾಸ್ವರ್ಡ್ ಬದಲಾಯಿಸಿದ ಆರೋಪದಡಿ ತಲೆ ಮರೆಸಿಕೊಂಡಿರುವ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಎಸ್ಪಿ ಶ್ರೀಧರ್ ಕೆ. ಪೂಜಾರ್ ಮತ್ತು ಯಲಹಂಕ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಆರ್. ಚಂದ್ರಧರ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.</p>.<p>ಮತ್ತೊಬ್ಬ ಪೊಲೀಸ್ ಇನ್ಸ್ಪೆಕ್ಟರ್ ಡಿ.ಎಂ. ಪ್ರಶಾಂತ್ ಬಾಬು ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.</p>.<p>ಪೂಜಾರ್ ಮತ್ತು ಚಂದ್ರಧರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರ ಏಕಸದಸ್ಯ ನ್ಯಾಯಪೀಠ ಏಪ್ರಿಲ್ 1ರಂದು ವಿಚಾರಣೆ ನಡೆಸಲಿದೆ.</p>.<p>ಎಫ್ಐಆರ್ ರದ್ದು ಕೋರಿ ಡಿ.ಎಂ.ಪ್ರಶಾಂತ್ ಬಾಬು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠ ಏಪ್ರಿಲ್ 18ಕ್ಕೆ ವಿಚಾರಣೆ ನಡೆಸಲಿದೆ.</p>.<p>‘ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿದ್ದ ಶ್ರೀಧರ್ ಪೂಜಾರ್, ಚಂದ್ರಧರ, <br>ಲಕ್ಷ್ಮಿಕಾಂತಯ್ಯ, ಪ್ರಶಾಂತ್ ಬಾಬು ಸೇರಿದಂತೆ ಕೆಲವು ಅಧಿಕಾರಿಗಳು ಆರೋಪಿಗಳಾದ ಶ್ರೀಕೃಷ್ಣ <br>ಅಲಿಯಾಸ್ ಶ್ರೀಕಿ ಮತ್ತು ರಾಬಿನ್ ಖಂಡೇಲ್ವಾಲ ಅವರನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡು ಜಿಸಿಐಡಿ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂತೋಷ್ ಕುಮಾರ್ ನೆರವಿನಿಂದ ಹ್ಯಾಕಿಂಗ್, ಬಿಟ್ ಕಾಯಿನ್ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ ಮಾಡಿದ್ದಾರೆ’ ಎಂಬ ಆರೋಪ ಎದುರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>