<p><strong>ಬೆಂಗಳೂರು:</strong> ‘ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನೇ ಕೊಲ್ಲುವ ಪ್ರಯತ್ನ ನಡೆಸುತ್ತಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆ.ಪಿ.ಸಿ.ಸಿ) ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ ಬಾಬು ಆಪಾದಿಸಿದರು.</p>.<p>ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಗರಿಕ ಸಮಾಜ ವೇದಿಕೆಯು ಹೊರತಂದಿರುವ ಲೋಕಸಭೆ ಚುನಾವಣೆ–2024ರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಒಕ್ಕೂಟ ವ್ಯವಸ್ಥೆ ದಮನವಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವೇ ಇರುವುದಿಲ್ಲ. ಪ್ರಾದೇಶಿಕ ಭಾವನೆಗಳು ಉಳಿಯಬೇಕು. ಯಾವುದೇ ಸರ್ಕಾರ ಇರಲಿ; ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಏಕಧರ್ಮ, ಏಕ ಜಾತಿ ಇರುವಂತೆ ಮಾಡುತ್ತೇವೆ ಎಂಬುದು ಸರಿಯಾದ ಕ್ರಮವಲ್ಲ. ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಪ್ರತಿಯೊಂದು ಜಾತಿ ಹಾಗೂ ಧರ್ಮಗಳೂ ಉಳಿಯಬೇಕು’ ಎಂದು ಪ್ರತಿಪಾದಿಸಿದರು.</p>.<p>‘ದೇಶಕ್ಕೆ ಮಾದಕ ವಸ್ತುಗಳ ಮಾರಾಟವು ಶಾಪವಾಗಿ ಪರಿಣಮಿಸಿದೆ. ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು. ಈ ಸಂಬಂಧ ಮುಖ್ಯಮಂತ್ರಿಗೂ ಪತ್ರ ಬರೆದಿದ್ದೆ. ಸಭೆ ನಡೆಸಿ, ಡ್ರಗ್ಸ್ ಮಾರಾಟ ಜಾಲಕ್ಕೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಯವರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದರು. ಆದರೆ, ಪೊಲೀಸರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ‘ ಎಂದು ಆಪಾದಿಸಿದರು.</p>.<p>‘ನಾಗರಿಕ ಸಮಾಜ ವೇದಿಕೆ ಹೊರತಂದಿರುವ ಪ್ರಣಾಳಿಕೆಯನ್ನು ಎಐಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಪಿ.ಚಿದಂಬರಂ ಅವರಿಗೆ ಸಲ್ಲಿಸಲಾಗುವುದು. ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಪ್ರಣಾಳಿಕೆಗಳು ಸಿದ್ಧವಾಗಬೇಕು’ ಎಂದು ಹೇಳಿದರು.</p>.<p>ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ‘ಚುನಾವಣೆ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುತ್ತವೆ. ಆದರೆ, ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ’ ಎಂದು ಆಪಾದಿಸಿದರು.</p>.<p>‘ಧರ್ಮ, ವೈಯಕ್ತಿಕ ವಿಚಾರಗಳನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬಡವರಿಗೆ ನ್ಯಾಯಾಂಗದಿಂದ ನ್ಯಾಯ ಸಿಗುತ್ತಿಲ್ಲ. ಮಾಧ್ಯಮಗಳು ವ್ಯಾಪಾರೀಕರಣಗೊಂಡಿವೆ. ಮಾಧ್ಯಮದಿಂದಲೂ ನ್ಯಾಯ ದೊರೆಯುತ್ತಿಲ್ಲ’ ಎಂದು ಹೇಳಿದರು.</p>.<p>‘ಯಾರೂ ಉಚಿತ ಕೊಡುಗೆಗಳನ್ನೂ ದೂಷಿಸುತ್ತಿಲ್ಲ. ಉಚಿತ ಕೊಡುಗೆಗಳಿಗೆ ಆದ್ಯತೆ ಮುಖ್ಯ. ಶಿಕ್ಷಣ ಹಾಗೂ ಆರೋಗ್ಯ ಸೇವೆಯೂ ಉಚಿತವಾಗಿ ದೊರೆತರೆ ಜನರಿಗೆ ಹೆಚ್ಚು ಅನುಕೂಲ’ ಎಂದು ಪ್ರತಿಪಾದಿಸಿದರು.</p>.<p>ಬಿಜೆಪಿ ವಕ್ತಾರೆ ಸುರಭಿ ಪಾಲ್ಗೊಂಡಿದ್ದರು.</p>.<p>ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬರಗಾಲಕ್ಕೆ ಅನುದಾನ ಕೊಟ್ಟಿಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದರು. ಈಗ ಅವರೇ ಪಿ.ಎಂ ಆಗಿದ್ದು ಒಕ್ಕೂಟ ವ್ಯವಸ್ಥೆಗೆ ಅನ್ಯಾಯ ಮಾಡುತ್ತಿದ್ದಾರೆ.</p><p>- ‘ಮುಖ್ಯಮಂತ್ರಿ‘ ಚಂದ್ರು ಅಧ್ಯಕ್ಷ ಎಎಪಿ</p>.<p><strong>ಪ್ರಣಾಳಿಕೆಯ ಪ್ರಮುಖಾಂಶಗಳು</strong> </p><p>* ರೈತರ ಕನಿಷ್ಠ ಬೆಂಬಲ ಬೆಲೆ ಖಾತರಿ ಹಕ್ಕು ಮಸೂದೆ–2018 ಅನ್ನು ಜಾರಿಗೆ ತರಬೇಕು. </p><p>* ಕೃಷಿಯನ್ನು ಖಾಸಗಿ ಕ್ಷೇತ್ರಕ್ಕೆ ವಹಿಸುವ ಯಾವುದೇ ಪ್ರಯತ್ನ ಮಾಡಬಾರದು. </p><p>* ದಲಿತರು ಹಾಗೂ ಬುಡಕಟ್ಟು ಜನರನ್ನು ಬಲವಂತದಿಂದ ಸ್ಥಳಾಂತರ ಮಾಡಬಾರದು. </p><p>* ಪ್ರತಿ ರಾಜ್ಯದಲ್ಲಿ ವಲಸೆ ಕಾರ್ಮಿಕರ ಮಂಡಳಿಯನ್ನು ಕಡ್ಡಾಯವಾಗಿ ರಚಿಸಬೇಕು. </p><p>* ಕೊಳೆಗೇರಿ ನಿವಾಸಿಗಳಿಗೆ ಆಸ್ತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು. </p><p>* ಕುಡಿಯುವ ನೀರಿನ ಹಕ್ಕು ಆರೋಗ್ಯದ ಹಕ್ಕು ಹಾಗೂ ಶಿಕ್ಷಣದ ಹಕ್ಕು ಎಲ್ಲರಿಗೂ ದೊರೆಯಬೇಕು. </p><p>* ಶೇ 33ರಷ್ಟು ಮಹಿಳಾ ಮೀಸಲಾತಿಯನ್ನು ಹೊಸ ಜನಗಣತಿ ಹಾಗೂ ಕ್ಷೇತ್ರಗಳ ಪುನರ್ ವಿಂಗಡಣೆಗೂ ಮೊದಲು ಜಾರಿಗೆ ತರಬೇಕು. </p><p>* ಅರಣ್ಯ ಹಕ್ಕು ಕಾಯ್ದೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು. </p><p>* ಅಂಗವಿಕಲರ ಕಲ್ಯಾಣಕ್ಕೆ ಶೇ 5ರಷ್ಟು ಅನುದಾನ ಮೀಸಲಿಡಬೇಕು. ಶೇ 3ರಷ್ಟು ಕ್ಷೇತ್ರಗಳಲ್ಲಿ ಅಂಗವಿಕಲರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು.</p><p>* ಎಲ್ಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ತಮ್ಮ ಭಾಷಣದಲ್ಲಿ ದ್ವೇಷ ಬಿತ್ತುವುದು ಜನಾಂಗೀಯ ಹತ್ಯೆಗಳಿಗೆ ಕರೆ ನೀಡುವುದು ಜಾತಿ–ಧರ್ಮಗಳ ಹೆಸರಿನಲ್ಲಿ ಮತಯಾಚನೆ ಮಾಡಿದರೆ ಕ್ರಮ ಕೈಗೊಳ್ಳಬೇಕು. * ಕ್ರಿಮಿನಲ್ ಆರೋಪಗಳನ್ನು ಹೊತ್ತಿರುವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನೇ ಕೊಲ್ಲುವ ಪ್ರಯತ್ನ ನಡೆಸುತ್ತಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆ.ಪಿ.ಸಿ.ಸಿ) ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ ಬಾಬು ಆಪಾದಿಸಿದರು.</p>.<p>ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಗರಿಕ ಸಮಾಜ ವೇದಿಕೆಯು ಹೊರತಂದಿರುವ ಲೋಕಸಭೆ ಚುನಾವಣೆ–2024ರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಒಕ್ಕೂಟ ವ್ಯವಸ್ಥೆ ದಮನವಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವೇ ಇರುವುದಿಲ್ಲ. ಪ್ರಾದೇಶಿಕ ಭಾವನೆಗಳು ಉಳಿಯಬೇಕು. ಯಾವುದೇ ಸರ್ಕಾರ ಇರಲಿ; ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಏಕಧರ್ಮ, ಏಕ ಜಾತಿ ಇರುವಂತೆ ಮಾಡುತ್ತೇವೆ ಎಂಬುದು ಸರಿಯಾದ ಕ್ರಮವಲ್ಲ. ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಪ್ರತಿಯೊಂದು ಜಾತಿ ಹಾಗೂ ಧರ್ಮಗಳೂ ಉಳಿಯಬೇಕು’ ಎಂದು ಪ್ರತಿಪಾದಿಸಿದರು.</p>.<p>‘ದೇಶಕ್ಕೆ ಮಾದಕ ವಸ್ತುಗಳ ಮಾರಾಟವು ಶಾಪವಾಗಿ ಪರಿಣಮಿಸಿದೆ. ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು. ಈ ಸಂಬಂಧ ಮುಖ್ಯಮಂತ್ರಿಗೂ ಪತ್ರ ಬರೆದಿದ್ದೆ. ಸಭೆ ನಡೆಸಿ, ಡ್ರಗ್ಸ್ ಮಾರಾಟ ಜಾಲಕ್ಕೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಯವರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದರು. ಆದರೆ, ಪೊಲೀಸರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ‘ ಎಂದು ಆಪಾದಿಸಿದರು.</p>.<p>‘ನಾಗರಿಕ ಸಮಾಜ ವೇದಿಕೆ ಹೊರತಂದಿರುವ ಪ್ರಣಾಳಿಕೆಯನ್ನು ಎಐಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಪಿ.ಚಿದಂಬರಂ ಅವರಿಗೆ ಸಲ್ಲಿಸಲಾಗುವುದು. ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಪ್ರಣಾಳಿಕೆಗಳು ಸಿದ್ಧವಾಗಬೇಕು’ ಎಂದು ಹೇಳಿದರು.</p>.<p>ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ‘ಚುನಾವಣೆ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುತ್ತವೆ. ಆದರೆ, ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ’ ಎಂದು ಆಪಾದಿಸಿದರು.</p>.<p>‘ಧರ್ಮ, ವೈಯಕ್ತಿಕ ವಿಚಾರಗಳನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬಡವರಿಗೆ ನ್ಯಾಯಾಂಗದಿಂದ ನ್ಯಾಯ ಸಿಗುತ್ತಿಲ್ಲ. ಮಾಧ್ಯಮಗಳು ವ್ಯಾಪಾರೀಕರಣಗೊಂಡಿವೆ. ಮಾಧ್ಯಮದಿಂದಲೂ ನ್ಯಾಯ ದೊರೆಯುತ್ತಿಲ್ಲ’ ಎಂದು ಹೇಳಿದರು.</p>.<p>‘ಯಾರೂ ಉಚಿತ ಕೊಡುಗೆಗಳನ್ನೂ ದೂಷಿಸುತ್ತಿಲ್ಲ. ಉಚಿತ ಕೊಡುಗೆಗಳಿಗೆ ಆದ್ಯತೆ ಮುಖ್ಯ. ಶಿಕ್ಷಣ ಹಾಗೂ ಆರೋಗ್ಯ ಸೇವೆಯೂ ಉಚಿತವಾಗಿ ದೊರೆತರೆ ಜನರಿಗೆ ಹೆಚ್ಚು ಅನುಕೂಲ’ ಎಂದು ಪ್ರತಿಪಾದಿಸಿದರು.</p>.<p>ಬಿಜೆಪಿ ವಕ್ತಾರೆ ಸುರಭಿ ಪಾಲ್ಗೊಂಡಿದ್ದರು.</p>.<p>ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬರಗಾಲಕ್ಕೆ ಅನುದಾನ ಕೊಟ್ಟಿಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದರು. ಈಗ ಅವರೇ ಪಿ.ಎಂ ಆಗಿದ್ದು ಒಕ್ಕೂಟ ವ್ಯವಸ್ಥೆಗೆ ಅನ್ಯಾಯ ಮಾಡುತ್ತಿದ್ದಾರೆ.</p><p>- ‘ಮುಖ್ಯಮಂತ್ರಿ‘ ಚಂದ್ರು ಅಧ್ಯಕ್ಷ ಎಎಪಿ</p>.<p><strong>ಪ್ರಣಾಳಿಕೆಯ ಪ್ರಮುಖಾಂಶಗಳು</strong> </p><p>* ರೈತರ ಕನಿಷ್ಠ ಬೆಂಬಲ ಬೆಲೆ ಖಾತರಿ ಹಕ್ಕು ಮಸೂದೆ–2018 ಅನ್ನು ಜಾರಿಗೆ ತರಬೇಕು. </p><p>* ಕೃಷಿಯನ್ನು ಖಾಸಗಿ ಕ್ಷೇತ್ರಕ್ಕೆ ವಹಿಸುವ ಯಾವುದೇ ಪ್ರಯತ್ನ ಮಾಡಬಾರದು. </p><p>* ದಲಿತರು ಹಾಗೂ ಬುಡಕಟ್ಟು ಜನರನ್ನು ಬಲವಂತದಿಂದ ಸ್ಥಳಾಂತರ ಮಾಡಬಾರದು. </p><p>* ಪ್ರತಿ ರಾಜ್ಯದಲ್ಲಿ ವಲಸೆ ಕಾರ್ಮಿಕರ ಮಂಡಳಿಯನ್ನು ಕಡ್ಡಾಯವಾಗಿ ರಚಿಸಬೇಕು. </p><p>* ಕೊಳೆಗೇರಿ ನಿವಾಸಿಗಳಿಗೆ ಆಸ್ತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು. </p><p>* ಕುಡಿಯುವ ನೀರಿನ ಹಕ್ಕು ಆರೋಗ್ಯದ ಹಕ್ಕು ಹಾಗೂ ಶಿಕ್ಷಣದ ಹಕ್ಕು ಎಲ್ಲರಿಗೂ ದೊರೆಯಬೇಕು. </p><p>* ಶೇ 33ರಷ್ಟು ಮಹಿಳಾ ಮೀಸಲಾತಿಯನ್ನು ಹೊಸ ಜನಗಣತಿ ಹಾಗೂ ಕ್ಷೇತ್ರಗಳ ಪುನರ್ ವಿಂಗಡಣೆಗೂ ಮೊದಲು ಜಾರಿಗೆ ತರಬೇಕು. </p><p>* ಅರಣ್ಯ ಹಕ್ಕು ಕಾಯ್ದೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು. </p><p>* ಅಂಗವಿಕಲರ ಕಲ್ಯಾಣಕ್ಕೆ ಶೇ 5ರಷ್ಟು ಅನುದಾನ ಮೀಸಲಿಡಬೇಕು. ಶೇ 3ರಷ್ಟು ಕ್ಷೇತ್ರಗಳಲ್ಲಿ ಅಂಗವಿಕಲರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು.</p><p>* ಎಲ್ಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ತಮ್ಮ ಭಾಷಣದಲ್ಲಿ ದ್ವೇಷ ಬಿತ್ತುವುದು ಜನಾಂಗೀಯ ಹತ್ಯೆಗಳಿಗೆ ಕರೆ ನೀಡುವುದು ಜಾತಿ–ಧರ್ಮಗಳ ಹೆಸರಿನಲ್ಲಿ ಮತಯಾಚನೆ ಮಾಡಿದರೆ ಕ್ರಮ ಕೈಗೊಳ್ಳಬೇಕು. * ಕ್ರಿಮಿನಲ್ ಆರೋಪಗಳನ್ನು ಹೊತ್ತಿರುವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>