<p><strong>ಬೆಂಗಳೂರು</strong>: ನಗರ ಹಾಗೂ ಹೊರ ವಲಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಬಿಎಂಟಿಸಿಯು ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸಂಚಾರವನ್ನು ಆರಂಭಿಸಿದೆ. </p>.<p>ಸರ್ಜಾಪುರದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ಸರ್ಜಾಪುರ, ದೊಡ್ಡಕನ್ನಲ್ಲಿ, ಬೆಳ್ಳಂದೂರು ಗೇಟ್, ಸರ್ಜಾಪುರ ರಸ್ತೆ ಜಂಕ್ಷನ್, ಮಾರತ್ಹಳ್ಳಿ ಸೇತುವೆ, ಹೆಬ್ಬಾಳ ಮಾರ್ಗವಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿತ್ಯ ನಾಲ್ಕು ವಾಯುವಜ್ರ ಬಸ್ಗಳು 14 ಟ್ರಿಪ್ ಸಂಚರಿಸಲಿವೆ.</p>.<p>ಸರ್ಜಾಪುರದಿಂದ ದೊಡ್ಡಕನ್ನಲ್ಲಿ, ಬೆಳ್ಳಂದೂರು ಗೇಟ್, ಸರ್ಜಾಪುರ ರಸ್ತೆ ಜಂಕ್ಷನ್, ಮಾರತ್ಹಳ್ಳಿ ಬ್ರಿಡ್ಜ್ ಮಾರ್ಗವಾಗಿ ಹೆಬ್ಬಾಳಕ್ಕೆ 4 ವಜ್ರ ಬಸ್ಗಳು ನಿತ್ಯ 16 ಟ್ರಿಪ್ ಹಾಗೂ ಶಿವಾಜಿನಗರದಿಂದ ಶಾಂತಿನಗರ, ಹುಳಿಮಾವು ಮಾರ್ಗವಾಗಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ 4 ವಜ್ರ ಬಸ್ಗಳು ನಿತ್ಯ 30 ಟ್ರಿಪ್ ಸಂಚರಿಸಲಿವೆ.</p>.<p>ಸಾಮಾನ್ಯ ಸಾರಿಗೆ ಬಸ್ಗಳು ಸರ್ಜಾಪುರ ಬಸ್ ನಿಲ್ದಾಣ ಹೆಬ್ಬಾಳ, ದೊಮ್ಮಸಂದ್ರ, ಕೊಡತಿ ಗೇಟ್, ದೊಡ್ಡಕನ್ನಲ್ಲಿ, ಕಾಡುಬೀಸನಹಳ್ಳಿ, ಮಾರತ್ಹಳ್ಳಿ ಬ್ರಿಡ್ಜ್ ಹಾಗೂ ಶಿವಾಜಿನಗರ ಬಸ್ ನಿಲ್ದಾಣ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಶಾಂತಿನಗರ ಟಿಟಿಎಂಸಿ, ಡೈರಿ ಸರ್ಕಲ್, ಗುರಪ್ಪನಪಾಳ್ಯ, ಗೊಟ್ಟಿಗೆರೆ ಮಾರ್ಗದಲ್ಲಿ ಸಂಚರಿಸಲಿವೆ.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಹೊಸ ಮಾರ್ಗಗಳಿಗೆ ಮಂಗಳವಾರ ಚಾಲನೆ ನೀಡಿದರು. ಬಿಎಂಟಿಸಿ ಅಧ್ಯಕ್ಷ ಬಿ.ಶಿವಣ್ಣ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್., ನಿರ್ದೇಶಕಿ ಶಿಲ್ಪಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರ ಹಾಗೂ ಹೊರ ವಲಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಬಿಎಂಟಿಸಿಯು ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸಂಚಾರವನ್ನು ಆರಂಭಿಸಿದೆ. </p>.<p>ಸರ್ಜಾಪುರದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ಸರ್ಜಾಪುರ, ದೊಡ್ಡಕನ್ನಲ್ಲಿ, ಬೆಳ್ಳಂದೂರು ಗೇಟ್, ಸರ್ಜಾಪುರ ರಸ್ತೆ ಜಂಕ್ಷನ್, ಮಾರತ್ಹಳ್ಳಿ ಸೇತುವೆ, ಹೆಬ್ಬಾಳ ಮಾರ್ಗವಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿತ್ಯ ನಾಲ್ಕು ವಾಯುವಜ್ರ ಬಸ್ಗಳು 14 ಟ್ರಿಪ್ ಸಂಚರಿಸಲಿವೆ.</p>.<p>ಸರ್ಜಾಪುರದಿಂದ ದೊಡ್ಡಕನ್ನಲ್ಲಿ, ಬೆಳ್ಳಂದೂರು ಗೇಟ್, ಸರ್ಜಾಪುರ ರಸ್ತೆ ಜಂಕ್ಷನ್, ಮಾರತ್ಹಳ್ಳಿ ಬ್ರಿಡ್ಜ್ ಮಾರ್ಗವಾಗಿ ಹೆಬ್ಬಾಳಕ್ಕೆ 4 ವಜ್ರ ಬಸ್ಗಳು ನಿತ್ಯ 16 ಟ್ರಿಪ್ ಹಾಗೂ ಶಿವಾಜಿನಗರದಿಂದ ಶಾಂತಿನಗರ, ಹುಳಿಮಾವು ಮಾರ್ಗವಾಗಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ 4 ವಜ್ರ ಬಸ್ಗಳು ನಿತ್ಯ 30 ಟ್ರಿಪ್ ಸಂಚರಿಸಲಿವೆ.</p>.<p>ಸಾಮಾನ್ಯ ಸಾರಿಗೆ ಬಸ್ಗಳು ಸರ್ಜಾಪುರ ಬಸ್ ನಿಲ್ದಾಣ ಹೆಬ್ಬಾಳ, ದೊಮ್ಮಸಂದ್ರ, ಕೊಡತಿ ಗೇಟ್, ದೊಡ್ಡಕನ್ನಲ್ಲಿ, ಕಾಡುಬೀಸನಹಳ್ಳಿ, ಮಾರತ್ಹಳ್ಳಿ ಬ್ರಿಡ್ಜ್ ಹಾಗೂ ಶಿವಾಜಿನಗರ ಬಸ್ ನಿಲ್ದಾಣ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಶಾಂತಿನಗರ ಟಿಟಿಎಂಸಿ, ಡೈರಿ ಸರ್ಕಲ್, ಗುರಪ್ಪನಪಾಳ್ಯ, ಗೊಟ್ಟಿಗೆರೆ ಮಾರ್ಗದಲ್ಲಿ ಸಂಚರಿಸಲಿವೆ.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಹೊಸ ಮಾರ್ಗಗಳಿಗೆ ಮಂಗಳವಾರ ಚಾಲನೆ ನೀಡಿದರು. ಬಿಎಂಟಿಸಿ ಅಧ್ಯಕ್ಷ ಬಿ.ಶಿವಣ್ಣ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್., ನಿರ್ದೇಶಕಿ ಶಿಲ್ಪಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>