‘ಅಲ್ಲಾಹುವಿನ ಶತ್ರುಗಳನ್ನು ಬಿಡುವುದಿಲ್ಲ’
‘ಶಾಲಾ ಮೈದಾನದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ. ನ.26ರಂದು ಅಲ್ಲಾಹುವಿನ ಮಾರ್ಗದಲ್ಲಿ ನಮ್ಮ ಹುತಾತ್ಮರು ನೂರಾರು ಮೂರ್ತಿ ಪೂಜಕರನ್ನು ಹತ್ಯೆ ಮಾಡಿದ್ದಾರೆ. ನೂರಾರು ಮುಜಾಹಿದ್ಗಳು ಅಲ್ಲಾಹುವಿನ ಮಾರ್ಗದಲ್ಲಿ ಹೋರಾಟ ನಡೆಸಲು ಈಗ ಸಜ್ಜಾಗಿದ್ದೇವೆ. ನೀವು ಅಲ್ಲಾಹುವಿನ ಶತ್ರುಗಳು. ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಬಿಡುವುದಿಲ್ಲ’ ಎಂದು ಇ– ಮೇಲ್ನಲ್ಲಿ ಪ್ರಸ್ತಾಪಿಸಲಾಗಿದೆ. ‘ನೀವೆಲ್ಲರೂ ನಮ್ಮ ಗುಲಾಮರಾಗದೆ ಬೇರೆ ಆಯ್ಕೆಗಳೇ ಇಲ್ಲ. ಅಲ್ಲಾಹುವಿನ ನೈಜ ಧರ್ಮವನ್ನು ಸ್ವೀಕರಿಸಿ. ನಿಮ್ಮ ದೇವಸ್ಥಾನಗಳು, ನಿಮ್ಮ ಮೂರ್ತಿಗಳು, ಬುದ್ಧನಿಂದ ಅನಂತತ್ವದವರೆಗಿನ ನಿಮ್ಮ ನಂಬಿಕೆಗಳೆಲ್ಲವನ್ನೂ ಸ್ಪೋಟಿಸಲಿದ್ದೇವೆ. ಇಸ್ಲಾಂಗೆ ಎಲ್ಲರೂ ಮತಾಂತರಗೊಳ್ಳಬೇಕು. ಇಲ್ಲವೇ ಇಸ್ಲಾಂನ ಹರಿತವಾದ ಖಡ್ಗಕ್ಕೆ ಸಿಲುಕಿ ಸಾಯಿರಿ’ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ಉಲ್ಲೇಖಿಸಿ ಇ- ಮೇಲ್ ಮಾಡಲಾಗಿದೆ.