<p>ಬೆಂಗಳೂರು: ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಾಗ್ರಹ ಸಿಟಿಜನ್ಶಿಪ್ ಆ್ಯಂಡ್ ಡೆಮಾಕ್ರಸಿ ಹೊರತಂದಿರುವ ‘ನನ್ನ ನಗರ, ನನ್ನ ಜವಾಬ್ದಾರಿ’ ಕೈಪಿಡಿಯ ಕರ್ನಾಟಕ ಆವೃತ್ತಿಯನ್ನು ಗಣ್ಯರು ಬಿಡುಗಡೆ ಮಾಡಿದರು.</p>.<p>ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲ, ಬಿಬಿಎಂಪಿ ಮಾಜಿ ಸದಸ್ಯ ಅಬ್ದುಲ್ ವಾಜಿದ್, ಶಿವಮೊಗ್ಗ ನಗರ ಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ಅವರು ಕೈಪಿಡಿಯನ್ನು ಬಿಡುಗಡೆ ಮಾಡಿದರು.</p>.<p>ಜನಾಗ್ರಹದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ್ ವಿಶ್ವನಾಥನ್ ಮಾತನಾಡಿ, ‘ವಾರ್ಡ್ ಸಮಿತಿ ಸಭೆ ಹಾಗೂ ಸೇವಾ ವಿತರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಮಾತ್ರ ನಗರಗಳಲ್ಲಿ ಜೀವನಮಟ್ಟ ಸುಧಾರಣೆ ಮಾಡಲು ಸಾಧ್ಯವಾಗಲಿದೆ’ ಎಂದು ಹೇಳಿದರು.</p>.<p>ಜನಾಗ್ರಹದ ನಾಗರಿಕ ಸಹಭಾಗಿತ್ವ ಕಾರ್ಯಕ್ರಮದ ಮುಖ್ಯಸ್ಥ ಸಂತೋಷ್ ನರಗುಂದ ಮಾತನಾಡಿ, ‘ಈ ಕೈಪಿಡಿ ಮೂಲಕ ಕರ್ನಾಟಕದ 315 ಸಣ್ಣ ಮತ್ತು ದೊಡ್ಡ ಪಟ್ಟಣಗಳು ಮತ್ತು 7 ಸಾವಿರ ವಾರ್ಡ್ಗಳಲ್ಲಿನ ಸಮಸ್ಯೆ ಪರಿಹರಿಸುವ ಗುರಿ ಹೊಂದಿದ್ದೇವೆ’ ಎಂದರು.</p>.<p>ಉದ್ಘಾಟನೆ ನಂತರ ‘ನಾಗರಿಕರ ಸಹಭಾಗಿತ್ವದೊಂದಿಗೆ ಸಮಾನ ಮತ್ತು ಸುಸ್ಥಿರ ನಗರಗಳ ನಿರ್ಮಾಣ’ ಎಂಬ ವಿಷಯದ ಕುರಿತು ಸಂವಾದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಾಗ್ರಹ ಸಿಟಿಜನ್ಶಿಪ್ ಆ್ಯಂಡ್ ಡೆಮಾಕ್ರಸಿ ಹೊರತಂದಿರುವ ‘ನನ್ನ ನಗರ, ನನ್ನ ಜವಾಬ್ದಾರಿ’ ಕೈಪಿಡಿಯ ಕರ್ನಾಟಕ ಆವೃತ್ತಿಯನ್ನು ಗಣ್ಯರು ಬಿಡುಗಡೆ ಮಾಡಿದರು.</p>.<p>ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲ, ಬಿಬಿಎಂಪಿ ಮಾಜಿ ಸದಸ್ಯ ಅಬ್ದುಲ್ ವಾಜಿದ್, ಶಿವಮೊಗ್ಗ ನಗರ ಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ಅವರು ಕೈಪಿಡಿಯನ್ನು ಬಿಡುಗಡೆ ಮಾಡಿದರು.</p>.<p>ಜನಾಗ್ರಹದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ್ ವಿಶ್ವನಾಥನ್ ಮಾತನಾಡಿ, ‘ವಾರ್ಡ್ ಸಮಿತಿ ಸಭೆ ಹಾಗೂ ಸೇವಾ ವಿತರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಮಾತ್ರ ನಗರಗಳಲ್ಲಿ ಜೀವನಮಟ್ಟ ಸುಧಾರಣೆ ಮಾಡಲು ಸಾಧ್ಯವಾಗಲಿದೆ’ ಎಂದು ಹೇಳಿದರು.</p>.<p>ಜನಾಗ್ರಹದ ನಾಗರಿಕ ಸಹಭಾಗಿತ್ವ ಕಾರ್ಯಕ್ರಮದ ಮುಖ್ಯಸ್ಥ ಸಂತೋಷ್ ನರಗುಂದ ಮಾತನಾಡಿ, ‘ಈ ಕೈಪಿಡಿ ಮೂಲಕ ಕರ್ನಾಟಕದ 315 ಸಣ್ಣ ಮತ್ತು ದೊಡ್ಡ ಪಟ್ಟಣಗಳು ಮತ್ತು 7 ಸಾವಿರ ವಾರ್ಡ್ಗಳಲ್ಲಿನ ಸಮಸ್ಯೆ ಪರಿಹರಿಸುವ ಗುರಿ ಹೊಂದಿದ್ದೇವೆ’ ಎಂದರು.</p>.<p>ಉದ್ಘಾಟನೆ ನಂತರ ‘ನಾಗರಿಕರ ಸಹಭಾಗಿತ್ವದೊಂದಿಗೆ ಸಮಾನ ಮತ್ತು ಸುಸ್ಥಿರ ನಗರಗಳ ನಿರ್ಮಾಣ’ ಎಂಬ ವಿಷಯದ ಕುರಿತು ಸಂವಾದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>