<p><strong>ಬೆಂಗಳೂರು</strong>: ಜಪಾನ್ನಿಂದ ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ತರಲು, ಈಗಾಗಲೇ ಹೂಡಿಕೆ ಮಾಡಿರುವ ಜಪಾನ್ ದೇಶದ ಕಂಪನಿಗಳೇ ಕರ್ನಾಟಕದ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.</p><p>ಇಲ್ಲಿನ ಜಪಾನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡ ಸ್ಟ್ರೀಸ್ (ಜೆಸಿಸಿಐ) ಏರ್ಪಡಿಸಿದ್ದ, ರಾಜ್ಯದಲ್ಲಿನ ಜಪಾನ್ ಉದ್ಯಮ ಸಂಸ್ಥೆಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ ಹೇಗೆ ಹೂಡಿಕೆ ಸ್ನೇಹಿ, ಇಲ್ಲಿ ಲಭ್ಯ ಇರುವ ಮಾನವ ಸಂಪನ್ಮೂಲ, ಕಾನೂನು ಸುವ್ಯವಸ್ಥೆ, ಹವಾಮಾನ ಇತ್ಯಾದಿ ವಿಷಯಗಳ ಬಗ್ಗೆ ತಮ್ಮ ದೇಶದ ಇತರ ಕಂಪನಿಗಳಿಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ಜಪಾನ್ ಉದ್ಯಮಿಗಳಿಗೆ ಕರೆ ನೀಡಿದರು.</p><p>ಈಚೆಗೆ ತಮ್ಮ ನೇತೃತ್ವದ ನಿಯೋಗವು ಜಪಾನ್ಗೆ ಭೇಟಿ ನೀಡಿದ್ದಾಗ, ಜಪಾನ್ ಮತ್ತು ಕರ್ನಾಟಕಕ್ಕೆ ಪರಸ್ಪರ ಲಾಭವರುವ ಹಲವು ಅಂಶಗಳನ್ನು ಗಮನಿಸಲಾಯಿತು. ಅಲ್ಲಿನ ಸಾರಿಗೆ ವ್ಯವಸ್ಥೆ ಅಚ್ಚರಿ ಮೂಡಿಸಿತು ಎಂದು ಅವರು ಹೇಳಿದರು.</p><p>ಮುಂದಿನ ಫೆಬ್ರುವರಿ 12ರಿಂದ 14ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಉದ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಪಾನ್ನಿಂದ ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ತರಲು, ಈಗಾಗಲೇ ಹೂಡಿಕೆ ಮಾಡಿರುವ ಜಪಾನ್ ದೇಶದ ಕಂಪನಿಗಳೇ ಕರ್ನಾಟಕದ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.</p><p>ಇಲ್ಲಿನ ಜಪಾನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡ ಸ್ಟ್ರೀಸ್ (ಜೆಸಿಸಿಐ) ಏರ್ಪಡಿಸಿದ್ದ, ರಾಜ್ಯದಲ್ಲಿನ ಜಪಾನ್ ಉದ್ಯಮ ಸಂಸ್ಥೆಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ ಹೇಗೆ ಹೂಡಿಕೆ ಸ್ನೇಹಿ, ಇಲ್ಲಿ ಲಭ್ಯ ಇರುವ ಮಾನವ ಸಂಪನ್ಮೂಲ, ಕಾನೂನು ಸುವ್ಯವಸ್ಥೆ, ಹವಾಮಾನ ಇತ್ಯಾದಿ ವಿಷಯಗಳ ಬಗ್ಗೆ ತಮ್ಮ ದೇಶದ ಇತರ ಕಂಪನಿಗಳಿಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ಜಪಾನ್ ಉದ್ಯಮಿಗಳಿಗೆ ಕರೆ ನೀಡಿದರು.</p><p>ಈಚೆಗೆ ತಮ್ಮ ನೇತೃತ್ವದ ನಿಯೋಗವು ಜಪಾನ್ಗೆ ಭೇಟಿ ನೀಡಿದ್ದಾಗ, ಜಪಾನ್ ಮತ್ತು ಕರ್ನಾಟಕಕ್ಕೆ ಪರಸ್ಪರ ಲಾಭವರುವ ಹಲವು ಅಂಶಗಳನ್ನು ಗಮನಿಸಲಾಯಿತು. ಅಲ್ಲಿನ ಸಾರಿಗೆ ವ್ಯವಸ್ಥೆ ಅಚ್ಚರಿ ಮೂಡಿಸಿತು ಎಂದು ಅವರು ಹೇಳಿದರು.</p><p>ಮುಂದಿನ ಫೆಬ್ರುವರಿ 12ರಿಂದ 14ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಉದ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>