<p><strong>ಯಲಹಂಕ</strong>: ‘ತಾಯಿ ಹೆಸರಿನಲ್ಲಿ ಒಂದು ಗಿಡ’ (‘ಏಕ್ ಪೇಡ್ ಮಾ ಕೆ ನಾಮ್’) ಘೋಷವಾಕ್ಯದೊಂದಿಗೆ ಇಲ್ಲಿನ ಗಡಿಭದ್ರತಾ ಪಡೆ (ಎಸ್ಟಿಸಿ) ಬಿಎಸ್ಎಫ್ ತರಬೇತಿ ಕೇಂದ್ರ ವತಿಯಿಂದ ಕಾರಹಳ್ಳಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.</p>.<p>ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಜೀವನ್ ಮುಕ್ತಿ ಫೌಂಡೇಶನ್ ಹಾಗೂ ಎಚ್ಎಸ್ಆರ್ ನಾಗರಿಕರ ವೇದಿಕೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಎಸ್ಟಿಸಿ, ಬಿಎಸ್ಎಫ್ ಬೆಂಗಳೂರು ಕೇಂದ್ರದ ಐಜಿ ಸುಧೀಂದ್ರಕುಮಾರ್ ಸಿಂಗ್ ಮಾತನಾಡಿ, ‘ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿರುವ ಎಲ್ಲ ಬಿಎಸ್ಎಫ್ ಕೇಂದ್ರಗಳ ಆವರಣದಲ್ಲಿ 21 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡುವ ಗುರಿ ಇದೆ’ ಎಂದು ತಿಳಿಸಿದರು.</p>.<p>ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಪ್ರಧಾನ ವ್ಯವಸ್ಥಾಪಕ ಬಿ.ಎನ್.ಎಸ್. ರತ್ನಾಕರ್ ಮಾತನಾಡಿ, ‘ಫಲಕೊಡುವ ಸಸಿಗಳನ್ನು ನೆಡಲಾಗುತ್ತಿದೆ. ನೆಟ್ಟರೆ ಸಾಲದು, ಪೋಷಣೆ ಮಾಡುವ ಜವಾಬ್ದಾರಿಯೂ ಇರಬೇಕು’ ಎಂದು ಹೇಳಿದರು.</p>.<p>‘ಗಿಡ ನೆಡುವ ಅಭಿಯಾನದಡಿಯಲ್ಲಿ ಮೂರು ವರ್ಷಗಳಿಂದ ಮುಂಬೈ, ಹುಬ್ಬಳ್ಳಿ, ತುಮಕೂರು, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ 3.20 ಲಕ್ಷ ಗಿಡಗಳನ್ನು ನೆಡಲಾಗಿದೆ. ಇಂದು ಬಿಎಸ್ಎಫ್ ಕೇಂದ್ರದ ಆವರಣದಲ್ಲಿ 38 ವಿವಿಧ ತಳಿಯ 400ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ನೆಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥ ಪಾರ್ಥಸಾರಥಿ ನಾಯ್ಡು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ‘ತಾಯಿ ಹೆಸರಿನಲ್ಲಿ ಒಂದು ಗಿಡ’ (‘ಏಕ್ ಪೇಡ್ ಮಾ ಕೆ ನಾಮ್’) ಘೋಷವಾಕ್ಯದೊಂದಿಗೆ ಇಲ್ಲಿನ ಗಡಿಭದ್ರತಾ ಪಡೆ (ಎಸ್ಟಿಸಿ) ಬಿಎಸ್ಎಫ್ ತರಬೇತಿ ಕೇಂದ್ರ ವತಿಯಿಂದ ಕಾರಹಳ್ಳಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.</p>.<p>ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಜೀವನ್ ಮುಕ್ತಿ ಫೌಂಡೇಶನ್ ಹಾಗೂ ಎಚ್ಎಸ್ಆರ್ ನಾಗರಿಕರ ವೇದಿಕೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಎಸ್ಟಿಸಿ, ಬಿಎಸ್ಎಫ್ ಬೆಂಗಳೂರು ಕೇಂದ್ರದ ಐಜಿ ಸುಧೀಂದ್ರಕುಮಾರ್ ಸಿಂಗ್ ಮಾತನಾಡಿ, ‘ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿರುವ ಎಲ್ಲ ಬಿಎಸ್ಎಫ್ ಕೇಂದ್ರಗಳ ಆವರಣದಲ್ಲಿ 21 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡುವ ಗುರಿ ಇದೆ’ ಎಂದು ತಿಳಿಸಿದರು.</p>.<p>ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಪ್ರಧಾನ ವ್ಯವಸ್ಥಾಪಕ ಬಿ.ಎನ್.ಎಸ್. ರತ್ನಾಕರ್ ಮಾತನಾಡಿ, ‘ಫಲಕೊಡುವ ಸಸಿಗಳನ್ನು ನೆಡಲಾಗುತ್ತಿದೆ. ನೆಟ್ಟರೆ ಸಾಲದು, ಪೋಷಣೆ ಮಾಡುವ ಜವಾಬ್ದಾರಿಯೂ ಇರಬೇಕು’ ಎಂದು ಹೇಳಿದರು.</p>.<p>‘ಗಿಡ ನೆಡುವ ಅಭಿಯಾನದಡಿಯಲ್ಲಿ ಮೂರು ವರ್ಷಗಳಿಂದ ಮುಂಬೈ, ಹುಬ್ಬಳ್ಳಿ, ತುಮಕೂರು, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ 3.20 ಲಕ್ಷ ಗಿಡಗಳನ್ನು ನೆಡಲಾಗಿದೆ. ಇಂದು ಬಿಎಸ್ಎಫ್ ಕೇಂದ್ರದ ಆವರಣದಲ್ಲಿ 38 ವಿವಿಧ ತಳಿಯ 400ಕ್ಕೂ ಹೆಚ್ಚು ಹಲಸಿನ ಗಿಡಗಳನ್ನು ನೆಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥ ಪಾರ್ಥಸಾರಥಿ ನಾಯ್ಡು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>