ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರಿನ ಕಮಲಾನಗರದಲ್ಲಿ ಕುಸಿಯುವ ಹಂತದ ಕಟ್ಟಡ ನೆಲಸಮ: ಕಣ್ಣೀರಿಟ್ಟ ನಿವಾಸಿಗಳು

ಫಾಲೋ ಮಾಡಿ
Comments

ಬೆಂಗಳೂರು: ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕಮಲಾನಗರದ ಶಂಕರ್‌ನಾಗ್ ಬಸ್ ನಿಲ್ದಾಣದ ಸನಿಹ ಕುಸಿಯುವ ಹಂತದಲ್ಲಿದ್ದ ಮೂರು ಮಹಡಿಯ ಕಟ್ಟಡವನ್ನು ಬಿಬಿಎಂಪಿ ಅಧಿಕಾರಿಗಳು ಬುಧವಾರ ನೆಲಸಮಗೊಳಿಸಿದರು.

ಅಧಿಕಾರಿಗಳು ಹಿಟಾಚಿಯ ನೆರವಿನಿಂದ ಕಟ್ಟಡ ಕೆಡವಲು ಮುಂದಾದಾಗ ನಿವಾಸಿಗಳು ಕಣ್ಣೀರಿಡುತ್ತಿದ್ದ ದೃಶ್ಯ ಕಂಡುಬಂತು.

ಮನೆಯಲ್ಲಿದ್ದ ಸಾಮಾನು ಸರಂಜಾಮು, ಬಟ್ಟೆ, ಪೀಠೋಪಕರಣಗಳು ಹಾಗೂ ಕಾಗದ ಪತ್ರಗಳನ್ನು ತೆಗೆದುಕೊಳ್ಳಲು ಅವರಿಗೆ ಆಗಲಿಲ್ಲ. ಕಟ್ಟಡದ ತಾರಸಿ ಹಾಗೂ ಕಾರಿಡಾರ್‌ನಲ್ಲಿ ಒಣಗಿಸಿದ್ದ ಬಟ್ಟೆಗಳು ಹಾಗೇ ನೇತಾಡುತ್ತಿದ್ದವು.

ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಸುತ್ತಲಿನ ರಸ್ತೆಗಳನ್ನು ಬಂದ್ ಮಾಡಿದ್ದರು. ಸ್ಥಳೀಯರನ್ನು ದೂರ ಕಳಿಸುವ ಕಾರ್ಯದಲ್ಲೂ ಮಗ್ನರಾಗಿದ್ದರು.

ಹಿಟಾಚಿ ಸಹಾಯದಿಂದ ಬಹಳ ಯೋಜನಾಬದ್ಧವಾಗಿ ಗೋಡೆಗಳನ್ನು ಕೆಡವಿದ ಅಧಿಕಾರಿಗಳು ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗದ ಹಾಗೆ ಕಟ್ಟಡವನ್ನು ಎಡಭಾಗಕ್ಕೆ ಬೀಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT