<p><strong>ಬೆಂಗಳೂರು:</strong> ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್ ಪಶ್ಚಿಮ) ಶಸ್ತ್ರಗಾರಕ್ಕೆ ನುಗ್ಗಿದ್ದ ಸುಮಾರು 70 ಮಂದಿ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿ ಬೆದರಿಕೆಯೊಡ್ಡಿದ್ದು, ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಸಿಎಆರ್ ಕಾನ್ಸ್ಟೆಬಲ್ ರುದ್ರೇಶ್ ನಾಯ್ಕ್ ಅವರು ದೂರು ನೀಡಿದ್ದಾರೆ. ಸುಮಾರು 70 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಉಲ್ಲಾಳ ಬಳಿ ಸಿಎಆರ್ ಘಟಕವಿದೆ. ಈ ಜಾಗ ಹಾಗೂ ಸುತ್ತಮುತ್ತಲಿನ ಜಾಗದ ಸಂಬಂಧ ವ್ಯಾಜ್ಯ ಇರುವ ಮಾಹಿತಿ ಇದೆ. ಜಾಗ ನಮ್ಮದೆಂದು ವಾದಿಸಿದ್ದ ಆರೋಪಿಗಳು, ಶಸ್ತ್ರಗಾರಕ್ಕೆ ನುಗ್ಗಿದ್ದರು. ಜಾಗ ಖಾಲಿ ಮಾಡುವಂತೆ ಪೊಲೀಸರಿಗೆ ಬೆದರಿಸಿದ್ದರು. ಸಮವಸ್ತ್ರ ಹಿಡಿದು ಎಳೆದಾಡಿದ್ದರು.’</p>.<p>‘ಜಾಗ ತೆರವು ಮಾಡುವ ಉದ್ದೇಶದಿಂದ ಸ್ಥಳಕ್ಕೆ ಬಂದಿದ್ದ ಆರೋಪಿಗಳು, ಜೆಸಿಬಿ ಯಂತ್ರ, ಕ್ಯಾಂಟರ್, ಲಾರಿ ಹಾಗೂ ನೀರಿನ ಟ್ಯಾಂಕರ್ ಸಹ ತಂದಿದ್ದರೆಂಬ ಮಾಹಿತಿ ಇದೆ. ಆರೋಪಿಗಳು ಯಾರು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್ ಪಶ್ಚಿಮ) ಶಸ್ತ್ರಗಾರಕ್ಕೆ ನುಗ್ಗಿದ್ದ ಸುಮಾರು 70 ಮಂದಿ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಿ ಬೆದರಿಕೆಯೊಡ್ಡಿದ್ದು, ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಸಿಎಆರ್ ಕಾನ್ಸ್ಟೆಬಲ್ ರುದ್ರೇಶ್ ನಾಯ್ಕ್ ಅವರು ದೂರು ನೀಡಿದ್ದಾರೆ. ಸುಮಾರು 70 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಉಲ್ಲಾಳ ಬಳಿ ಸಿಎಆರ್ ಘಟಕವಿದೆ. ಈ ಜಾಗ ಹಾಗೂ ಸುತ್ತಮುತ್ತಲಿನ ಜಾಗದ ಸಂಬಂಧ ವ್ಯಾಜ್ಯ ಇರುವ ಮಾಹಿತಿ ಇದೆ. ಜಾಗ ನಮ್ಮದೆಂದು ವಾದಿಸಿದ್ದ ಆರೋಪಿಗಳು, ಶಸ್ತ್ರಗಾರಕ್ಕೆ ನುಗ್ಗಿದ್ದರು. ಜಾಗ ಖಾಲಿ ಮಾಡುವಂತೆ ಪೊಲೀಸರಿಗೆ ಬೆದರಿಸಿದ್ದರು. ಸಮವಸ್ತ್ರ ಹಿಡಿದು ಎಳೆದಾಡಿದ್ದರು.’</p>.<p>‘ಜಾಗ ತೆರವು ಮಾಡುವ ಉದ್ದೇಶದಿಂದ ಸ್ಥಳಕ್ಕೆ ಬಂದಿದ್ದ ಆರೋಪಿಗಳು, ಜೆಸಿಬಿ ಯಂತ್ರ, ಕ್ಯಾಂಟರ್, ಲಾರಿ ಹಾಗೂ ನೀರಿನ ಟ್ಯಾಂಕರ್ ಸಹ ತಂದಿದ್ದರೆಂಬ ಮಾಹಿತಿ ಇದೆ. ಆರೋಪಿಗಳು ಯಾರು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>