<p><strong>ಬೆಂಗಳೂರು:</strong> ಬೆಳ್ಳಂದೂರು ಕೆರೆಗೆ ಸಂಸ್ಕರಣೆಯಾಗದೆ ನೇರವಾಗಿ ತ್ಯಾಜ್ಯ ಜಲ ಹರಿಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ದಂಡ ವಿಧಿಸಿದ್ದು, ಈ ವರ್ಷಾಂತ್ಯದೊಳಗೆ ಎಸ್ಟಿಪಿ ನಿರ್ಮಿಸಬೇಕಿದ್ದರೂ ವಿಳಂಬ ಆಗುತ್ತಿರುವುದಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜೌಗು ಭೂಮಿ ಪ್ರಾಧಿಕಾರದ ಅನೌಪಚಾರಿಕ ಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಈ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದು ಕಾಮಗಾರಿ ತ್ವರಿತಗೊಳಿಸುವಂತೆ ತಿಳಿಸಲು ಸೂಚಿಸಿದರು.</p>.<p>‘ಬೆಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ನೀರಿನ ತೀವ್ರ ಸಮಸ್ಯೆ ಎದುರಾಗಲಿದ್ದು, ಜಲಮೂಲಗಳನ್ನು ಮತ್ತು ಕೆರೆ, ಕಟ್ಟೆಗಳನ್ನು ಸಂರಕ್ಷಣೆ ಮಾಡಬೇಕಾದ ಅನಿವಾರ್ಯ ಇದೆ. ನೇರವಾಗಿ ಸಂಸ್ಕರಣೆ ಮಾಡದೆ ತ್ಯಾಜ್ಯ ಹರಿಸುತ್ತಿರುವುದರಿಂದ ಕೆರೆಗಳ ನೀರು ಕಲುಷಿತವಾಗಿ ನೊರೆ ಹೊರಹೊಮ್ಮುವ ಸ್ಥಿತಿ ನಿರ್ಮಾಣವಾಗಿದೆ. ಅಂತರ್ಜಲವೂ ಕಲುಷಿತವಾಗುತ್ತಿದೆ. ಈ ಪ್ರಕರಣವನ್ನು ಎನ್ಜಿಟಿ ಗಂಭೀರವಾಗಿ ಪರಿಗಣಿಸಿ, ದಂಡ ವಿಧಿಸಿದ್ದರೂ ಸಂಸ್ಕರಣಾ ಘಟಕ ನಿರ್ಮಾಣದಲ್ಲಿ ವಿಳಂಬ ಆಗುತ್ತಿರುವುದು ಸರಿಯಲ್ಲ’ ಎಂದರು.</p>.<p>ಸಭೆಯಲ್ಲಿ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೇಶ್ ದೀಕ್ಷಿತ್, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ.ಪಿ. ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಳ್ಳಂದೂರು ಕೆರೆಗೆ ಸಂಸ್ಕರಣೆಯಾಗದೆ ನೇರವಾಗಿ ತ್ಯಾಜ್ಯ ಜಲ ಹರಿಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ದಂಡ ವಿಧಿಸಿದ್ದು, ಈ ವರ್ಷಾಂತ್ಯದೊಳಗೆ ಎಸ್ಟಿಪಿ ನಿರ್ಮಿಸಬೇಕಿದ್ದರೂ ವಿಳಂಬ ಆಗುತ್ತಿರುವುದಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜೌಗು ಭೂಮಿ ಪ್ರಾಧಿಕಾರದ ಅನೌಪಚಾರಿಕ ಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಈ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದು ಕಾಮಗಾರಿ ತ್ವರಿತಗೊಳಿಸುವಂತೆ ತಿಳಿಸಲು ಸೂಚಿಸಿದರು.</p>.<p>‘ಬೆಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ನೀರಿನ ತೀವ್ರ ಸಮಸ್ಯೆ ಎದುರಾಗಲಿದ್ದು, ಜಲಮೂಲಗಳನ್ನು ಮತ್ತು ಕೆರೆ, ಕಟ್ಟೆಗಳನ್ನು ಸಂರಕ್ಷಣೆ ಮಾಡಬೇಕಾದ ಅನಿವಾರ್ಯ ಇದೆ. ನೇರವಾಗಿ ಸಂಸ್ಕರಣೆ ಮಾಡದೆ ತ್ಯಾಜ್ಯ ಹರಿಸುತ್ತಿರುವುದರಿಂದ ಕೆರೆಗಳ ನೀರು ಕಲುಷಿತವಾಗಿ ನೊರೆ ಹೊರಹೊಮ್ಮುವ ಸ್ಥಿತಿ ನಿರ್ಮಾಣವಾಗಿದೆ. ಅಂತರ್ಜಲವೂ ಕಲುಷಿತವಾಗುತ್ತಿದೆ. ಈ ಪ್ರಕರಣವನ್ನು ಎನ್ಜಿಟಿ ಗಂಭೀರವಾಗಿ ಪರಿಗಣಿಸಿ, ದಂಡ ವಿಧಿಸಿದ್ದರೂ ಸಂಸ್ಕರಣಾ ಘಟಕ ನಿರ್ಮಾಣದಲ್ಲಿ ವಿಳಂಬ ಆಗುತ್ತಿರುವುದು ಸರಿಯಲ್ಲ’ ಎಂದರು.</p>.<p>ಸಭೆಯಲ್ಲಿ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೇಶ್ ದೀಕ್ಷಿತ್, ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ.ಪಿ. ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>