<p><strong>ಬೆಳಗಾವಿ</strong>: ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ (ಎಬಿ–ಎಆರ್ಕೆ) ಫಲಾನುಭವಿಗಳಿಗೆ ವಿತರಿಸಲು ಆರೋಗ್ಯ ಇಲಾಖೆ ರೂಪಿಸಿರುವ ನೂತನ ಕಾರ್ಡ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದರು.</p>.<p>ಹೊಸ ಕಾರ್ಡ್ಗಳಿಗೆ ‘ಆಯುಷ್ಮಾನ್ ಭಾರತ್– ಪ್ರಧಾನಮಂತ್ರಿ ಜನಾರೋಗ್ಯ– ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಕಾರ್ಡ್ ಎಂದು ಹೆಸರಿಸಲಾಗಿದೆ. ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ಗುರುತಿನ ಚೀಟಿಯೊಂದಿಗೆ ಜೋಡಿಸಲಾಗುತ್ತದೆ.</p>.<p>ಹೊಸ ಕಾರ್ಡ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಕಾರ್ಡ್ನಲ್ಲಿ ಕೆಲವು ಬದಲಾವಣೆ ತರಲಾಗಿದೆ. ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್ಗಳನ್ನು ವಿತರಿಸುವ ಗುರಿ ಇದೆ’ ಎಂದರು.</p>.<p>ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.</p>.<p>ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ₹ 5 ಲಕ್ಷದವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೂ ಈ ಯೋಜನೆಯಡಿ ಸೌಲಭ್ಯ ಒದಗಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಎಪಿಎಲ್ ಕುಟುಂಬಗಳ ಫಲಾನುಭವಿಗಳು ಚಿಕಿತ್ಸಾ ವೆಚ್ಚದ ಶೇ 70ರಷ್ಟನ್ನು ಭರಿಸಿದರೆ, ರಾಜ್ಯ ಸರ್ಕಾರ ಶೇ 30ರಷ್ಟನ್ನು ನೀಡುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ (ಎಬಿ–ಎಆರ್ಕೆ) ಫಲಾನುಭವಿಗಳಿಗೆ ವಿತರಿಸಲು ಆರೋಗ್ಯ ಇಲಾಖೆ ರೂಪಿಸಿರುವ ನೂತನ ಕಾರ್ಡ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದರು.</p>.<p>ಹೊಸ ಕಾರ್ಡ್ಗಳಿಗೆ ‘ಆಯುಷ್ಮಾನ್ ಭಾರತ್– ಪ್ರಧಾನಮಂತ್ರಿ ಜನಾರೋಗ್ಯ– ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಕಾರ್ಡ್ ಎಂದು ಹೆಸರಿಸಲಾಗಿದೆ. ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ಗುರುತಿನ ಚೀಟಿಯೊಂದಿಗೆ ಜೋಡಿಸಲಾಗುತ್ತದೆ.</p>.<p>ಹೊಸ ಕಾರ್ಡ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಕಾರ್ಡ್ನಲ್ಲಿ ಕೆಲವು ಬದಲಾವಣೆ ತರಲಾಗಿದೆ. ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್ಗಳನ್ನು ವಿತರಿಸುವ ಗುರಿ ಇದೆ’ ಎಂದರು.</p>.<p>ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.</p>.<p>ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ₹ 5 ಲಕ್ಷದವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೂ ಈ ಯೋಜನೆಯಡಿ ಸೌಲಭ್ಯ ಒದಗಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಎಪಿಎಲ್ ಕುಟುಂಬಗಳ ಫಲಾನುಭವಿಗಳು ಚಿಕಿತ್ಸಾ ವೆಚ್ಚದ ಶೇ 70ರಷ್ಟನ್ನು ಭರಿಸಿದರೆ, ರಾಜ್ಯ ಸರ್ಕಾರ ಶೇ 30ರಷ್ಟನ್ನು ನೀಡುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>