<p><strong>ಬೆಂಗಳೂರು:</strong> ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಸಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಜಾನ್ ಮೋಸಸ್ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು, ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’ (ಕೋಕಾ) ಪ್ರಯೋಗಿಸಿದ್ದಾರೆ.</p>.<p>ಸ್ವತ್ತಿನ ಸಂಬಂಧ ನಕಲಿ ದಾಖಲೆ ಸೃಷ್ಟಿಸಿ, ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಡಿಕ್ರಿ ಪಡೆದುಕೊಂಡಿದ್ದ ಆರೋಪದ ಮೇರೆಗೆ ಲಘು ವ್ಯವಹಾರಗಳ ನ್ಯಾಯಾಲಯದ ರಿಜಿಸ್ಟ್ರಾರ್ 2020ರಲ್ಲಿ ಜಾನ್ ಮೋಸಸ್ ಹಾಗೂ ಸಹಚರರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದಿರುವುದು ಪತ್ತೆಯಾದ ಮೇಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು.</p>.<p>ಸಿಐಡಿ ತನಿಖೆ ವೇಳೆ ಈ ತಂಡದ ವಿರುದ್ಧ 100ಕ್ಕೂ ಅಧಿಕ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಎಲ್ಲ ಪ್ರಕರಣಗಳನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. 51 ಪ್ರಕರಣಗಳ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಖಾರಿಗಳು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಉಳಿದ ಪ್ರಕರಣಗಳು ತನಿಖೆ ಹಂತದಲ್ಲಿವೆ.</p>.<p>ಹೇಗೆ ವಂಚನೆ: ವಂಚಕರ ತಂಡವು ಸಂಘಟಿತ ತಂಡ ಕಟ್ಟಿಕೊಂಡು ಬಡವರ ಜಮೀನು, ನಿವೇಶನ ಹಾಗೂ ಮನೆಗಳನ್ನು ಕಬಳಿಸಿರುವುದು, ಮೂಲ ಮಾಲೀಕರನ್ನು ಬೆದರಿಸಿ, ಕೋಟ್ಯಂತರ ರೂಪಾಯಿ ಸುಲಿಗೆ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿತ್ತು. ವಿವಾದಿತ ಅಥವಾ ಖಾಲಿ ಜಮೀನನನ್ನು ಹುಡುಕಿ ಆರೋಪಿಗಳು ವಂಚನೆ ಎಸಗುತ್ತಿದ್ದರು. ವಂಚಕ ತಂಡದ ವಿರುದ್ಧ ಈಗ ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆ ಪ್ರಯೋಗಿಸಿದ್ದಾರೆ.</p>.<p><strong>ಸಿಐಡಿ ವಶದಲ್ಲಿ ಆರೋಪಿ:</strong></p>.<p>ವಂಚಕರ ತಂಡದ ಮುಖ್ಯಸ್ಥ ಜಾನ್ ಮೋಸಸ್ ಸಿಐಡಿ ವಶದಲ್ಲಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಲ್ಯಾಣ ನಗರ ನಿವಾಸಿ ಆಗಿರುವ ಜಾನ್ ಮೋಸನ್ 16 ಜನರ ತಂಡ ಕಟ್ಟಿಕೊಂಡು ವಂಚನೆ ಎಸಗುತ್ತಿದ್ದ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಸಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಜಾನ್ ಮೋಸಸ್ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು, ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’ (ಕೋಕಾ) ಪ್ರಯೋಗಿಸಿದ್ದಾರೆ.</p>.<p>ಸ್ವತ್ತಿನ ಸಂಬಂಧ ನಕಲಿ ದಾಖಲೆ ಸೃಷ್ಟಿಸಿ, ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಡಿಕ್ರಿ ಪಡೆದುಕೊಂಡಿದ್ದ ಆರೋಪದ ಮೇರೆಗೆ ಲಘು ವ್ಯವಹಾರಗಳ ನ್ಯಾಯಾಲಯದ ರಿಜಿಸ್ಟ್ರಾರ್ 2020ರಲ್ಲಿ ಜಾನ್ ಮೋಸಸ್ ಹಾಗೂ ಸಹಚರರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದಿರುವುದು ಪತ್ತೆಯಾದ ಮೇಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು.</p>.<p>ಸಿಐಡಿ ತನಿಖೆ ವೇಳೆ ಈ ತಂಡದ ವಿರುದ್ಧ 100ಕ್ಕೂ ಅಧಿಕ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಎಲ್ಲ ಪ್ರಕರಣಗಳನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. 51 ಪ್ರಕರಣಗಳ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಖಾರಿಗಳು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಉಳಿದ ಪ್ರಕರಣಗಳು ತನಿಖೆ ಹಂತದಲ್ಲಿವೆ.</p>.<p>ಹೇಗೆ ವಂಚನೆ: ವಂಚಕರ ತಂಡವು ಸಂಘಟಿತ ತಂಡ ಕಟ್ಟಿಕೊಂಡು ಬಡವರ ಜಮೀನು, ನಿವೇಶನ ಹಾಗೂ ಮನೆಗಳನ್ನು ಕಬಳಿಸಿರುವುದು, ಮೂಲ ಮಾಲೀಕರನ್ನು ಬೆದರಿಸಿ, ಕೋಟ್ಯಂತರ ರೂಪಾಯಿ ಸುಲಿಗೆ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿತ್ತು. ವಿವಾದಿತ ಅಥವಾ ಖಾಲಿ ಜಮೀನನನ್ನು ಹುಡುಕಿ ಆರೋಪಿಗಳು ವಂಚನೆ ಎಸಗುತ್ತಿದ್ದರು. ವಂಚಕ ತಂಡದ ವಿರುದ್ಧ ಈಗ ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆ ಪ್ರಯೋಗಿಸಿದ್ದಾರೆ.</p>.<p><strong>ಸಿಐಡಿ ವಶದಲ್ಲಿ ಆರೋಪಿ:</strong></p>.<p>ವಂಚಕರ ತಂಡದ ಮುಖ್ಯಸ್ಥ ಜಾನ್ ಮೋಸಸ್ ಸಿಐಡಿ ವಶದಲ್ಲಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಲ್ಯಾಣ ನಗರ ನಿವಾಸಿ ಆಗಿರುವ ಜಾನ್ ಮೋಸನ್ 16 ಜನರ ತಂಡ ಕಟ್ಟಿಕೊಂಡು ವಂಚನೆ ಎಸಗುತ್ತಿದ್ದ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>