<p><strong>ಬೆಂಗಳೂರು</strong>: ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವ ಚಿನ್ನಾಭರಣವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹ 2 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ.</p>.<p>‘ಚಹಾ ಅಂಗಡಿ ಮಾಲೀಕರಾಗಿರುವ 44 ವರ್ಷದ ವ್ಯಕ್ತಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಮೊಹಮ್ಮದ್ ಸುಜ್ಜ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ವಿಮಾನ ನಿಲ್ದಾಣ ಠಾಣೆ ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರರ ಚಹಾ ಅಂಗಡಿಗೆ ಆಗಾಗ ಹೋಗಿ ಬರುತ್ತಿದ್ದ ಆರೋಪಿ, ವಿಮಾನ ನಿಲ್ದಾಣದಲ್ಲಿರುವ ಕಸ್ಟಮ್ಸ್ ಅಧಿಕಾರಿಗಳು ತನಗೆ ಆಪ್ತರೆಂದು ಹೇಳುತ್ತಿದ್ದ. ‘ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವ ಟಿ.ವಿ., ಮೊಬೈಲ್, ಚಿನ್ನಾಭರಣ ಹಾಗೂ ಇತರೆ ವಸ್ತುಗಳು ಕಡಿಮೆ ಬೆಲೆಗೆ ಮಾರಾಟಕ್ಕಿವೆ’ ಎಂಬುದಾಗಿ ಆರೋಪಿ ತಿಳಿಸಿದ್ದ.’</p>.<p>‘ಆರೋಪಿ ಮಾತು ನಂಬಿದ್ದ ದೂರುದಾರ, ತಮ್ಮ ಮಗನ ಮದುವೆಗೆ ಅಗತ್ಯವಿದ್ದ ಚಿನ್ನಾಭರಣ ಖರೀದಿಸಲು ಮುಂದಾಗಿದ್ದರು. ವಿಮಾನ ನಿಲ್ದಾಣದ 1ನೇ ಟರ್ಮಿನಲ್ ಬಳಿ ಹೋಗಿದ್ದ ದೂರುದಾರ, ಆರೋಪಿಗೆ ₹ 2 ಲಕ್ಷ ನೀಡಿದ್ದರು. ಕಸ್ಟಮ್ಸ್ ಕಚೇರಿಯಲ್ಲಿರುವ ಚಿನ್ನಾಭರಣ ನೋಡಲು ಪಾಸ್ ತರುವುದಾಗಿ ಹೇಳಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವ ಚಿನ್ನಾಭರಣವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹ 2 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ.</p>.<p>‘ಚಹಾ ಅಂಗಡಿ ಮಾಲೀಕರಾಗಿರುವ 44 ವರ್ಷದ ವ್ಯಕ್ತಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಮೊಹಮ್ಮದ್ ಸುಜ್ಜ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ವಿಮಾನ ನಿಲ್ದಾಣ ಠಾಣೆ ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರುದಾರರ ಚಹಾ ಅಂಗಡಿಗೆ ಆಗಾಗ ಹೋಗಿ ಬರುತ್ತಿದ್ದ ಆರೋಪಿ, ವಿಮಾನ ನಿಲ್ದಾಣದಲ್ಲಿರುವ ಕಸ್ಟಮ್ಸ್ ಅಧಿಕಾರಿಗಳು ತನಗೆ ಆಪ್ತರೆಂದು ಹೇಳುತ್ತಿದ್ದ. ‘ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವ ಟಿ.ವಿ., ಮೊಬೈಲ್, ಚಿನ್ನಾಭರಣ ಹಾಗೂ ಇತರೆ ವಸ್ತುಗಳು ಕಡಿಮೆ ಬೆಲೆಗೆ ಮಾರಾಟಕ್ಕಿವೆ’ ಎಂಬುದಾಗಿ ಆರೋಪಿ ತಿಳಿಸಿದ್ದ.’</p>.<p>‘ಆರೋಪಿ ಮಾತು ನಂಬಿದ್ದ ದೂರುದಾರ, ತಮ್ಮ ಮಗನ ಮದುವೆಗೆ ಅಗತ್ಯವಿದ್ದ ಚಿನ್ನಾಭರಣ ಖರೀದಿಸಲು ಮುಂದಾಗಿದ್ದರು. ವಿಮಾನ ನಿಲ್ದಾಣದ 1ನೇ ಟರ್ಮಿನಲ್ ಬಳಿ ಹೋಗಿದ್ದ ದೂರುದಾರ, ಆರೋಪಿಗೆ ₹ 2 ಲಕ್ಷ ನೀಡಿದ್ದರು. ಕಸ್ಟಮ್ಸ್ ಕಚೇರಿಯಲ್ಲಿರುವ ಚಿನ್ನಾಭರಣ ನೋಡಲು ಪಾಸ್ ತರುವುದಾಗಿ ಹೇಳಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>