<p><strong>ಬೆಂಗಳೂರು:</strong> ದೂರಸಂಪರ್ಕ ಇಲಾಖೆ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಯೊಬ್ಬರಿಗೆ ಕರೆ ಮಾಡಿ ₹30 ಲಕ್ಷ ವಂಚಿಸಲಾಗಿದ್ದು, ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇದುವರೆಗೂ ಫೆಡೆಕ್ಸ್ ಹಾಗೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಸೋಗಿನಲ್ಲಿ ವಂಚಿಸುತ್ತಿದ್ದ ಸೈಬರ್ ವಂಚಕರು ಈಗ ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ.</p>.<p>ಈಗ ದೂರಸಂಪರ್ಕ ಇಲಾಖೆ ಅಧಿಕಾರಿಗಳೆಂದು ಹೇಳಿಕೊಂಡು ವಂಚಿಸುವ ಜಾಲ ಸೃಷ್ಟಿಯಾಗಿದೆ. ನಿದಾ (ಹೆಸರು ಬದಲಾಯಿಸಲಾಗಿದೆ) ಎಂಬುವರು ಹಣ ಕಳೆದುಕೊಂಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<p>ಏಪ್ರಿಲ್ 8ರಂದು ದೂರಸಂಪರ್ಕ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಮಹಿಳೆಗೆ ಕರೆ ಮಾಡಿದ್ದ ವಂಚಕರು, ‘ನಿಮ್ಮ ಆಧಾರ್ ಬಯೋಮೆಟ್ರಿಕ್ ದುರ್ಬಳಕೆಯಾಗಿದೆ. ಬ್ಯಾಂಕ್ ಖಾತೆ ಪರಿಶೀಲಿಸಬೇಕಿದೆ ಎಂದು ವಂಚಕರು ಹೇಳಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಮುಂಬೈನಲ್ಲಿ ಸಿಮ್ ಕಾರ್ಡ್ ಖರೀದಿಸಲು ತಮ್ಮ ಆಧಾರ್ ಬಯೋಮೆಟ್ರಿಕ್ ಬಳಕೆ ಮಾಡಿಕೊಳ್ಳಲಾಗುತ್ತದೆ. ಆ ಸಿಮ್ ಕಾರ್ಡ್ ಅನ್ನು ಕಾನೂನುಬಾಹಿರ ಜಾಹೀರಾತುಗಳನ್ನು ಪ್ರಚಾರ ಮಾಡಲು ಮತ್ತು ಅಪರಾಧ ಚಟುವಟಿಕೆ ನಡೆಸಲು ಬಳಸಲಾಗುತ್ತಿದೆ ಎಂದು ಆಕೆಗೆ ವಂಚಕರು ತಿಳಿಸಿದ್ದರು. ಇದರಿಂದ ಮಹಿಳೆ ಗಾಬರಿಗೊಂಡಿದ್ದರು. ಬಳಿಕ ಬೇರೊಂದು ನಂಬರ್ ನೀಡಿ, ಸಂಪರ್ಕಿಸುವಂತೆ ವಂಚಕರು ತಿಳಿಸಿದ್ದರು. ಆ ನಂಬರ್ಗೆ ಕರೆ ಮಾಡಿದಾಗ ಆತ ತಾನು ಮುಂಬೈನ ಅಂಧೇರಿಯ ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಈ ವಿಷಯವನ್ನೂ ಯಾರಿಗೂ ತಿಳಿಸಬಾರದು. ತಿಳಿಸಿದರೆ ಸಮಸ್ಯೆ ಆಗಲಿದೆಯೆಂದೂ ಭಯ ಹುಟ್ಟಿಸಲಾಗಿತ್ತು. ಅದಾದ ಮೇಲೆ ಬ್ಯಾಂಕ್ ಖಾತೆಗಳ ಪರಿಶೀಲನೆ ಸೇರಿದಂತೆ ವಿವಿಧ ರೀತಿಯಲ್ಲಿ ₹30 ಲಕ್ಷದಷ್ಟು ಹಣ ಪಡೆದು ವಂಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೂರಸಂಪರ್ಕ ಇಲಾಖೆ ಅಧಿಕಾರಿಗಳೆಂದು ಹೇಳಿಕೊಂಡು ಮಹಿಳೆಯೊಬ್ಬರಿಗೆ ಕರೆ ಮಾಡಿ ₹30 ಲಕ್ಷ ವಂಚಿಸಲಾಗಿದ್ದು, ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಇದುವರೆಗೂ ಫೆಡೆಕ್ಸ್ ಹಾಗೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಸೋಗಿನಲ್ಲಿ ವಂಚಿಸುತ್ತಿದ್ದ ಸೈಬರ್ ವಂಚಕರು ಈಗ ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ.</p>.<p>ಈಗ ದೂರಸಂಪರ್ಕ ಇಲಾಖೆ ಅಧಿಕಾರಿಗಳೆಂದು ಹೇಳಿಕೊಂಡು ವಂಚಿಸುವ ಜಾಲ ಸೃಷ್ಟಿಯಾಗಿದೆ. ನಿದಾ (ಹೆಸರು ಬದಲಾಯಿಸಲಾಗಿದೆ) ಎಂಬುವರು ಹಣ ಕಳೆದುಕೊಂಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<p>ಏಪ್ರಿಲ್ 8ರಂದು ದೂರಸಂಪರ್ಕ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಮಹಿಳೆಗೆ ಕರೆ ಮಾಡಿದ್ದ ವಂಚಕರು, ‘ನಿಮ್ಮ ಆಧಾರ್ ಬಯೋಮೆಟ್ರಿಕ್ ದುರ್ಬಳಕೆಯಾಗಿದೆ. ಬ್ಯಾಂಕ್ ಖಾತೆ ಪರಿಶೀಲಿಸಬೇಕಿದೆ ಎಂದು ವಂಚಕರು ಹೇಳಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಮುಂಬೈನಲ್ಲಿ ಸಿಮ್ ಕಾರ್ಡ್ ಖರೀದಿಸಲು ತಮ್ಮ ಆಧಾರ್ ಬಯೋಮೆಟ್ರಿಕ್ ಬಳಕೆ ಮಾಡಿಕೊಳ್ಳಲಾಗುತ್ತದೆ. ಆ ಸಿಮ್ ಕಾರ್ಡ್ ಅನ್ನು ಕಾನೂನುಬಾಹಿರ ಜಾಹೀರಾತುಗಳನ್ನು ಪ್ರಚಾರ ಮಾಡಲು ಮತ್ತು ಅಪರಾಧ ಚಟುವಟಿಕೆ ನಡೆಸಲು ಬಳಸಲಾಗುತ್ತಿದೆ ಎಂದು ಆಕೆಗೆ ವಂಚಕರು ತಿಳಿಸಿದ್ದರು. ಇದರಿಂದ ಮಹಿಳೆ ಗಾಬರಿಗೊಂಡಿದ್ದರು. ಬಳಿಕ ಬೇರೊಂದು ನಂಬರ್ ನೀಡಿ, ಸಂಪರ್ಕಿಸುವಂತೆ ವಂಚಕರು ತಿಳಿಸಿದ್ದರು. ಆ ನಂಬರ್ಗೆ ಕರೆ ಮಾಡಿದಾಗ ಆತ ತಾನು ಮುಂಬೈನ ಅಂಧೇರಿಯ ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಈ ವಿಷಯವನ್ನೂ ಯಾರಿಗೂ ತಿಳಿಸಬಾರದು. ತಿಳಿಸಿದರೆ ಸಮಸ್ಯೆ ಆಗಲಿದೆಯೆಂದೂ ಭಯ ಹುಟ್ಟಿಸಲಾಗಿತ್ತು. ಅದಾದ ಮೇಲೆ ಬ್ಯಾಂಕ್ ಖಾತೆಗಳ ಪರಿಶೀಲನೆ ಸೇರಿದಂತೆ ವಿವಿಧ ರೀತಿಯಲ್ಲಿ ₹30 ಲಕ್ಷದಷ್ಟು ಹಣ ಪಡೆದು ವಂಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>