<p><strong>ಬೆಂಗಳೂರು</strong>: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ, ಅಕ್ರಮ ಆಸ್ತಿ ವಿವರವನ್ನು ತೆರೆದ ನ್ಯಾಯಾಲಯದಲ್ಲಿ ವಿವರಿಸಲು ಮುಂದಾದ ಸಿಬಿಐ ಬಾಯಿ ಮುಚ್ಚಿಸಿದ ಪ್ರಸಂಗಕ್ಕೆ ಹೈಕೋರ್ಟ್ ಸಾಕ್ಷಿಯಾಯಿತು.</p>.<p>ಆದಾಯ ಮೀರಿದ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದ ಎಫ್.ಐ.ಆರ್ ರದ್ದುಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ಶಿವಕುಮಾರ್ ಅವರು ಎಷ್ಟು ಕೋಟಿ ಹಣ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ವಿವರಿಸಲು ಮುಂದಾದರು.</p>.<p>ಅದರೆ, ನ್ಯಾಯಮೂರ್ತಿ ಕೆ.ನಟರಾಜನ್ ಅವರು ಪ್ರಸನ್ನ ಕುಮಾರ್ ಬಾಯಿ ಕಟ್ಟಿ ಹಾಕಿದರಲ್ಲದೆ, ‘ನೀವು ಈ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ನೀಡಿದ್ದೀರಿ. ಇದರ ಮುಖ್ಯಾಂಶದ ಪ್ಯಾರಾ ಸಂಖ್ಯೆ 3.15ರಲ್ಲಿ ಏನಿದೆ ಎಂಬುದು ಗೋಪ್ಯ ಅಲ್ಲವೇ?’ ಎಂದು ಪ್ರಶ್ನಿಸಿದರು.</p>.<p><strong>ಏನಿದೆ?:</strong> </p><p>ಮುಚ್ಚಿದ ಲಕೋಟೆಯಲ್ಲಿ, ‘ಹೈಕೋರ್ಟ್ ತನಿಖೆಗೆ ತಡೆ ನೀಡುವವರೆಗಿನ ತನಕ ಎಷ್ಟಿದೆ. ಈ ಅವಧಿಯಲ್ಲಿ ಫಾರಂ 1ರಿಂದ 6ರ ಕಾಲಂ ಅನುಸಾರದ ಹೇಳಿಕೆಯನ್ನು 11 ಸಂಪುಟಗಳಲ್ಲಿ ಸಲ್ಲಿಸಲಾಗಿದೆ. 2,412 ಪುಟಗಳ ಈ ದಾಖಲೆ ಪರಿಶೀಲನೆ ನಡೆಯುತ್ತಿದೆ’ ಎಂದು ಸಿಬಿಐ ವಕೀಲರು ತಿಳಿಸಿದರು.</p>.<p>‘ದಾಖಲೆ ಪರಿಶೀಲನೆ ಹೊರತಾಗಿ 596 ದಾಖಲೆ ಸಂಗ್ರಹ ಮಾಡಿದ್ದೇವೆ. 84 ಜನ ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ’ ಎಂದು ವಿವರಿಸಿದರು.</p>.<p><strong>ಪ್ರಕರಣವೇನು?</strong></p><p>ಶಿವಕುಮಾರ್ ಅವರು 2013ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿದ ಸಂಪತ್ತು ಗಳಿಸಿದ್ದಾರೆ ಎಂದು ಆರೋಪಿಸಿ ಸಿಬಿಐ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ, ಅಕ್ರಮ ಆಸ್ತಿ ವಿವರವನ್ನು ತೆರೆದ ನ್ಯಾಯಾಲಯದಲ್ಲಿ ವಿವರಿಸಲು ಮುಂದಾದ ಸಿಬಿಐ ಬಾಯಿ ಮುಚ್ಚಿಸಿದ ಪ್ರಸಂಗಕ್ಕೆ ಹೈಕೋರ್ಟ್ ಸಾಕ್ಷಿಯಾಯಿತು.</p>.<p>ಆದಾಯ ಮೀರಿದ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದ ಎಫ್.ಐ.ಆರ್ ರದ್ದುಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ಶಿವಕುಮಾರ್ ಅವರು ಎಷ್ಟು ಕೋಟಿ ಹಣ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ವಿವರಿಸಲು ಮುಂದಾದರು.</p>.<p>ಅದರೆ, ನ್ಯಾಯಮೂರ್ತಿ ಕೆ.ನಟರಾಜನ್ ಅವರು ಪ್ರಸನ್ನ ಕುಮಾರ್ ಬಾಯಿ ಕಟ್ಟಿ ಹಾಕಿದರಲ್ಲದೆ, ‘ನೀವು ಈ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ನೀಡಿದ್ದೀರಿ. ಇದರ ಮುಖ್ಯಾಂಶದ ಪ್ಯಾರಾ ಸಂಖ್ಯೆ 3.15ರಲ್ಲಿ ಏನಿದೆ ಎಂಬುದು ಗೋಪ್ಯ ಅಲ್ಲವೇ?’ ಎಂದು ಪ್ರಶ್ನಿಸಿದರು.</p>.<p><strong>ಏನಿದೆ?:</strong> </p><p>ಮುಚ್ಚಿದ ಲಕೋಟೆಯಲ್ಲಿ, ‘ಹೈಕೋರ್ಟ್ ತನಿಖೆಗೆ ತಡೆ ನೀಡುವವರೆಗಿನ ತನಕ ಎಷ್ಟಿದೆ. ಈ ಅವಧಿಯಲ್ಲಿ ಫಾರಂ 1ರಿಂದ 6ರ ಕಾಲಂ ಅನುಸಾರದ ಹೇಳಿಕೆಯನ್ನು 11 ಸಂಪುಟಗಳಲ್ಲಿ ಸಲ್ಲಿಸಲಾಗಿದೆ. 2,412 ಪುಟಗಳ ಈ ದಾಖಲೆ ಪರಿಶೀಲನೆ ನಡೆಯುತ್ತಿದೆ’ ಎಂದು ಸಿಬಿಐ ವಕೀಲರು ತಿಳಿಸಿದರು.</p>.<p>‘ದಾಖಲೆ ಪರಿಶೀಲನೆ ಹೊರತಾಗಿ 596 ದಾಖಲೆ ಸಂಗ್ರಹ ಮಾಡಿದ್ದೇವೆ. 84 ಜನ ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ’ ಎಂದು ವಿವರಿಸಿದರು.</p>.<p><strong>ಪ್ರಕರಣವೇನು?</strong></p><p>ಶಿವಕುಮಾರ್ ಅವರು 2013ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿದ ಸಂಪತ್ತು ಗಳಿಸಿದ್ದಾರೆ ಎಂದು ಆರೋಪಿಸಿ ಸಿಬಿಐ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಪ್ರಕರಣ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>