<p><strong>ಯಲಹಂಕ:</strong> ಸಂದೀಪ್ ಉನ್ನಿಕೃಷ್ಣನ್ ವೃತ್ತದ ಬಳಿಯಿರುವ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವ ವಿದ್ಯಾಪೀಠ ಶಾಲೆಯ ಮಕ್ಕಳು, ಜಾಗೃತಿ ಮೂಡಿಸುವ ಹಲವು ಗೀತೆಗಳಿಗೆ ನೃತ್ಯ ಪ್ರಸ್ತುತಪಡಿಸಿದರು.</p>.<p>ವಿವಿಧ ವೇಷಭೂಷಣಗಳಿಂದ ಕಂಗೊಳಿಸುತ್ತಿದ್ದ ಮಕ್ಕಳು, ಭಾರತದ ಸಂಸ್ಕೃತಿ, ದೇಶಭಕ್ತಿ ಹಾಗೂ ಪರಿಸರ ಕುರಿತ ಗೀತೆಗಳಿಗೆ ನೃತ್ಯಮಾಡುವ ಮೂಲಕ ಜನರ ಗಮನ ಸೆಳೆದರು. ಭಾಷಣ ಮತ್ತು ಬೀದಿನಾಟಕದ ಜೊತೆಗೆ ರೈತರು ಹಾಗೂ ಸೈನಿಕರ ಸಮಸ್ಯೆಗಳನ್ನು ಹರಿಕಥೆಯ ಮೂಲಕ ಪ್ರಸ್ತುತಪಡಿಸಿದರು.</p>.<p>ಕನ್ನಡ ಶಿಕ್ಷಕಿ ಶಶಿಕಲಾ ಎಂ.ವಿ. ಮಾತನಾಡಿ, ‘ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ದೇಶಭಕ್ತಿ, ರೈತರ ಮತ್ತು ಸೈನಿಕರ ಸಮಸ್ಯೆಗಳು, ಭಾರತದ ಕಲೆ, ಸಂಸ್ಕೃತಿ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸಲು ಇಂತಹ ಗೀತೆಗಳನ್ನು ಆಯ್ಕೆಮಾಡಿಕೊಂಡು ನೃತ್ಯದ ಮೂಲಕ ಪ್ರಸ್ತುತಪಡಿಸಲಾಗಿದೆ’ ಎಂದು ತಿಳಿಸಿದರು.</p>.<p>ಶಾಲೆಯ ನಿರ್ದೇಶಕಿ ಸುಶೀಲ ಸಂತೋಷ್, ಪ್ರಾಂಶುಪಾಲರಾದ ರೂಪಾ, ಮುಖ್ಯಶಿಕ್ಷಕಿ ರಿಚಾ ಕಾರಬನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಸಂದೀಪ್ ಉನ್ನಿಕೃಷ್ಣನ್ ವೃತ್ತದ ಬಳಿಯಿರುವ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವ ವಿದ್ಯಾಪೀಠ ಶಾಲೆಯ ಮಕ್ಕಳು, ಜಾಗೃತಿ ಮೂಡಿಸುವ ಹಲವು ಗೀತೆಗಳಿಗೆ ನೃತ್ಯ ಪ್ರಸ್ತುತಪಡಿಸಿದರು.</p>.<p>ವಿವಿಧ ವೇಷಭೂಷಣಗಳಿಂದ ಕಂಗೊಳಿಸುತ್ತಿದ್ದ ಮಕ್ಕಳು, ಭಾರತದ ಸಂಸ್ಕೃತಿ, ದೇಶಭಕ್ತಿ ಹಾಗೂ ಪರಿಸರ ಕುರಿತ ಗೀತೆಗಳಿಗೆ ನೃತ್ಯಮಾಡುವ ಮೂಲಕ ಜನರ ಗಮನ ಸೆಳೆದರು. ಭಾಷಣ ಮತ್ತು ಬೀದಿನಾಟಕದ ಜೊತೆಗೆ ರೈತರು ಹಾಗೂ ಸೈನಿಕರ ಸಮಸ್ಯೆಗಳನ್ನು ಹರಿಕಥೆಯ ಮೂಲಕ ಪ್ರಸ್ತುತಪಡಿಸಿದರು.</p>.<p>ಕನ್ನಡ ಶಿಕ್ಷಕಿ ಶಶಿಕಲಾ ಎಂ.ವಿ. ಮಾತನಾಡಿ, ‘ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ದೇಶಭಕ್ತಿ, ರೈತರ ಮತ್ತು ಸೈನಿಕರ ಸಮಸ್ಯೆಗಳು, ಭಾರತದ ಕಲೆ, ಸಂಸ್ಕೃತಿ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸಲು ಇಂತಹ ಗೀತೆಗಳನ್ನು ಆಯ್ಕೆಮಾಡಿಕೊಂಡು ನೃತ್ಯದ ಮೂಲಕ ಪ್ರಸ್ತುತಪಡಿಸಲಾಗಿದೆ’ ಎಂದು ತಿಳಿಸಿದರು.</p>.<p>ಶಾಲೆಯ ನಿರ್ದೇಶಕಿ ಸುಶೀಲ ಸಂತೋಷ್, ಪ್ರಾಂಶುಪಾಲರಾದ ರೂಪಾ, ಮುಖ್ಯಶಿಕ್ಷಕಿ ರಿಚಾ ಕಾರಬನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>