<p><strong>ಬೆಂಗಳೂರು</strong>: ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲ್ಸೇತುವೆ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಶವ ಮಂಗಳವಾರ ಪತ್ತೆಯಾಗಿದೆ.</p>.<p>ಉತ್ತರ ಪ್ರದೇಶದ ಗೋರಕ್ಪುರದ ಅಖಿಲೇಶ್ ಸಹಾನಿ ಅವರ ಮೃತದೇಹ ಅದು ಎಂದು ಗುರುತಿಸಲಾಗಿದ್ದು, ಯಶವಂತಪುರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.</p>.<p>ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಶನಿವಾರ ಹೈದರಾಬಾದ್ನಿಂದ ನಗರಕ್ಕೆ ಬಂದಿದ್ದ ಅಖಿಲೇಶ್ ಸಹಾನಿ ಅವರು ಬಳಿಕ ದೊಡ್ಡಬಳ್ಳಾಪುರಕ್ಕೆ ತೆರಳಿದ್ದರು. ಅಲ್ಲಿಂದ ಸೋಮವಾರ ಮಧ್ಯಾಹ್ನ ನಗರಕ್ಕೆ ವಾಪಸ್ ಬಂದಿದ್ದರು. ಅದಕ್ಕೆ ಸಂಬಂಧಿಸಿದ ಬಸ್ ಪ್ರಯಾಣದ ಟಿಕೆಟ್ಗಳು ಅವರ ಜೇಬಿನಲ್ಲಿ ಇದ್ದವು. ಜೇಬಿನಲ್ಲಿ ಗುರುತಿನ ಚೀಟಿ ಸಹ ಪತ್ತೆಯಾಗಿದ್ದು, ಗೋರಕ್ಪುರದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ’ ಎಂದು ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅದಾವತ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲ್ಸೇತುವೆ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಶವ ಮಂಗಳವಾರ ಪತ್ತೆಯಾಗಿದೆ.</p>.<p>ಉತ್ತರ ಪ್ರದೇಶದ ಗೋರಕ್ಪುರದ ಅಖಿಲೇಶ್ ಸಹಾನಿ ಅವರ ಮೃತದೇಹ ಅದು ಎಂದು ಗುರುತಿಸಲಾಗಿದ್ದು, ಯಶವಂತಪುರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.</p>.<p>ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಶನಿವಾರ ಹೈದರಾಬಾದ್ನಿಂದ ನಗರಕ್ಕೆ ಬಂದಿದ್ದ ಅಖಿಲೇಶ್ ಸಹಾನಿ ಅವರು ಬಳಿಕ ದೊಡ್ಡಬಳ್ಳಾಪುರಕ್ಕೆ ತೆರಳಿದ್ದರು. ಅಲ್ಲಿಂದ ಸೋಮವಾರ ಮಧ್ಯಾಹ್ನ ನಗರಕ್ಕೆ ವಾಪಸ್ ಬಂದಿದ್ದರು. ಅದಕ್ಕೆ ಸಂಬಂಧಿಸಿದ ಬಸ್ ಪ್ರಯಾಣದ ಟಿಕೆಟ್ಗಳು ಅವರ ಜೇಬಿನಲ್ಲಿ ಇದ್ದವು. ಜೇಬಿನಲ್ಲಿ ಗುರುತಿನ ಚೀಟಿ ಸಹ ಪತ್ತೆಯಾಗಿದ್ದು, ಗೋರಕ್ಪುರದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ’ ಎಂದು ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅದಾವತ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>