ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪತ್ರಕರ್ತ ಜಿ.ಗಣೇಶ್ (41) ಅವರು ಗುರುವಾರ ನಿಧನರಾದರು. ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.
ಕುಣಿಗಲ್ ಸಮೀಪದ ತಾಳೆಕೆರೆ ಗ್ರಾಮದ ಗಣೇಶ್ ಅವರು ಕಳೆದ 20 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರು. ಪ್ರಸ್ತುತ ಟಿವಿ–5 ವಾಹಿನಿಯಲ್ಲಿ ಔಟ್ಪುಟ್ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರೆಸ್ಕ್ಲಬ್ ಆಫ್ ಬೆಂಗಳೂರಿನ ಖಜಾಂಚಿ ಆಗಿಯೂ ಕೆಲಸ ಮಾಡುತ್ತಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಜೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಸಂಜೆ ತಾಳೆಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.