<p><strong>ಬೆಂಗಳೂರು:</strong> ಹಲವು ವರ್ಷಗಳಿಂದ ಸಾಹಿತ್ಯ ಕೃಷಿ ಮಾಡುತ್ತಿರುವ ಜನಪರ, ಜೀವಪರ ಸಾಹಿತಿ ಬಿ.ಟಿ. ಲಲಿತಾ ನಾಯಕ್ ಅವರಿಗೆ ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನವನ್ನು ನೀಡಬೇಕು ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದ ಸ್ವಾಮಿ ಆಗ್ರಹಿಸಿದರು.</p>.<p>ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಲಲಿತಾ ನಾಯಕ್ ಅವರು ಕಥೆ, ಕಾದಂಬರಿ, ನಾಟಕಗಳನ್ನು ಬರೆದಿದ್ದಾರೆ. ಅವರಿಗೆ 80 ವರ್ಷಗಳಾಗಿವೆ. ಇಂದಿಗೂ ಸಾಮಾಜಿಕ ಕಳಕಳಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಜಾತಿ, ಧರ್ಮಗಳ ಆಧಾರದಲ್ಲಿ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವ ಬದಲು ಇಂಥ ಹಿರಿಯರಿಗೆ ಅವಕಾಶ ನೀಡಬೇಕು’ ಎಂದು ತಿಳಿಸಿದರು.</p>.<p>ಬಂಜಾರ ಮ್ಯೂಸಿಯಂ ಸ್ಥಾಪನೆ, ಬಂಜಾರ ಮಾದರಿ ತಾಂಡಾ ನಿರ್ಮಾಣ ಸೇರಿದಂತೆ ನೂರಾರು ಯೋಜನೆಗಳಿವೆ. ಆದರೆ, ಅನುದಾನ ಬಹಳ ಕಡಿಮೆ ಇದೆ ಎಂದು ಹೇಳಿದರು.</p>.<p>15ಕ್ಕೆ ಗೋರ್ಮಾಟಿ ಪ್ರದರ್ಶನ: ರಂಗಾಯಣ ಮೈಸೂರು, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ತಾಂಡಾ ಅಭಿವೃದ್ಧಿ ನಿಗಮ, ಬಿ.ವಿ. ಕಾರಂತ ಇಂಡಿಯನ್ ಆ್ಯಕ್ಟಿಂಗ್ ಅಕಾಡೆಮಿ ಸಹಯೋಗದಲ್ಲಿ ‘ಗೋರ್ಮಾಟಿ’ ನಾಟಕವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 15ರಂದು ಸಂಜೆ 6.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಬಂಜಾರ ಜನಾಂಗದ ಕಲೆ, ಸಂಸ್ಕೃತಿ, ಬದುಕು–ಬವಣೆಗಳನ್ನು ತೋರಿಸುವ ಈ ನಾಟಕವನ್ನು ಸಿ. ಬಸವಲಿಂಗಯ್ಯ ನಿರ್ದೇಶಿಸಿದ್ದಾರೆ. ಪ್ರದರ್ಶನ ಉಚಿತವಾಗಿದ್ದು, ಸಮುದಾಯದ ಎಲ್ಲರೂ ನಾಟಕ ವೀಕ್ಷಿಸಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಲವು ವರ್ಷಗಳಿಂದ ಸಾಹಿತ್ಯ ಕೃಷಿ ಮಾಡುತ್ತಿರುವ ಜನಪರ, ಜೀವಪರ ಸಾಹಿತಿ ಬಿ.ಟಿ. ಲಲಿತಾ ನಾಯಕ್ ಅವರಿಗೆ ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನವನ್ನು ನೀಡಬೇಕು ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದ ಸ್ವಾಮಿ ಆಗ್ರಹಿಸಿದರು.</p>.<p>ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಲಲಿತಾ ನಾಯಕ್ ಅವರು ಕಥೆ, ಕಾದಂಬರಿ, ನಾಟಕಗಳನ್ನು ಬರೆದಿದ್ದಾರೆ. ಅವರಿಗೆ 80 ವರ್ಷಗಳಾಗಿವೆ. ಇಂದಿಗೂ ಸಾಮಾಜಿಕ ಕಳಕಳಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಜಾತಿ, ಧರ್ಮಗಳ ಆಧಾರದಲ್ಲಿ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವ ಬದಲು ಇಂಥ ಹಿರಿಯರಿಗೆ ಅವಕಾಶ ನೀಡಬೇಕು’ ಎಂದು ತಿಳಿಸಿದರು.</p>.<p>ಬಂಜಾರ ಮ್ಯೂಸಿಯಂ ಸ್ಥಾಪನೆ, ಬಂಜಾರ ಮಾದರಿ ತಾಂಡಾ ನಿರ್ಮಾಣ ಸೇರಿದಂತೆ ನೂರಾರು ಯೋಜನೆಗಳಿವೆ. ಆದರೆ, ಅನುದಾನ ಬಹಳ ಕಡಿಮೆ ಇದೆ ಎಂದು ಹೇಳಿದರು.</p>.<p>15ಕ್ಕೆ ಗೋರ್ಮಾಟಿ ಪ್ರದರ್ಶನ: ರಂಗಾಯಣ ಮೈಸೂರು, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ತಾಂಡಾ ಅಭಿವೃದ್ಧಿ ನಿಗಮ, ಬಿ.ವಿ. ಕಾರಂತ ಇಂಡಿಯನ್ ಆ್ಯಕ್ಟಿಂಗ್ ಅಕಾಡೆಮಿ ಸಹಯೋಗದಲ್ಲಿ ‘ಗೋರ್ಮಾಟಿ’ ನಾಟಕವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 15ರಂದು ಸಂಜೆ 6.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಬಂಜಾರ ಜನಾಂಗದ ಕಲೆ, ಸಂಸ್ಕೃತಿ, ಬದುಕು–ಬವಣೆಗಳನ್ನು ತೋರಿಸುವ ಈ ನಾಟಕವನ್ನು ಸಿ. ಬಸವಲಿಂಗಯ್ಯ ನಿರ್ದೇಶಿಸಿದ್ದಾರೆ. ಪ್ರದರ್ಶನ ಉಚಿತವಾಗಿದ್ದು, ಸಮುದಾಯದ ಎಲ್ಲರೂ ನಾಟಕ ವೀಕ್ಷಿಸಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>