<p><strong>ಬೆಂಗಳೂರು</strong>: ನಗರದಲ್ಲಿರುವ 40 ಐಟಿ ಪಾರ್ಕ್ಗಳಿಂದ ‘ಝೀರೊ ಬ್ಯಾಕ್ಟೀರಿಯಲ್’ ನೀರಿಗೆ ಬೇಡಿಕೆ ಬಂದಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದರು.</p>.<p>ಐಐಎಸ್ಸಿ ವಿಜ್ಞಾನಿಗಳ ಸಹಯೋಗದಲ್ಲಿ ಬೆಂಗಳೂರು ಜಲಮಂಡಳಿಯ ಎಂಜಿನಿಯರ್ಗಳು ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ದೇಶೀಯ ತಂತ್ರಜ್ಞಾನವನ್ನು ರೂಪಿಸಿ, ಅಳವಡಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ಪ್ರಾರಂಭಿಸಲಾದ ಈ ಯೋಜನೆಯ ಮೂಲಕ ಪ್ರತಿದಿನ ಸುಮಾರು 1 ಕೋಟಿ ಲೀಟರ್ನಷ್ಟು ‘ಝೀರೊ ಬ್ಯಾಕ್ಟೀರಿಯಲ್’ ಸಂಸ್ಕರಿಸಿದ ನೀರು ಉತ್ಪಾದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ವಿಪ್ರೊ ಕಂಪನಿ ಕೆಲವು ದಿನಗಳ ಹಿಂದೆ ಸಂಸ್ಕರಿಸಿದ ನೀರು ಸರಬರಾಜು ಮಾಡುವಂತೆ ಜಲಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ‘ಝೀರೊ ಬ್ಯಾಕ್ಟೀರಿಯಲ್’ ಉತ್ತಮ ಗುಣಮಟ್ಟದ ಸಂಸ್ಕರಿಸಿದ ನೀರನ್ನು ಗುರುವಾರದಿಂದ ಸರಬರಾಜು ಮಾಡಲಾಗುತ್ತಿದೆ. ಪ್ರತಿ ದಿನ 3 ಲಕ್ಷ ಲೀಟರ್ ನೀರು ಪೂರೈಸಲಾಗುತ್ತದೆ ಎಂದರು.</p>.<p>ಜಲಮಂಡಳಿ ನಿರ್ವಹಣಾ ವಿಭಾಗದ ಮುಖ್ಯ ಎಂಜಿನಿಯರ್ ಕುಮಾರ್ ನಾಯ್ಕ್, ಕಾರ್ಯನಿರ್ವಾಹಕ ಎಂಜಿನಿಯರ್ಗಳಾದ ನಾಗರಾಜ್, ರಾಹುಲ್ ಪ್ರಿಯದರ್ಶಿ, ಕೃಷ್ಣಕುಮಾರ್ ಉಪಸ್ಥಿತರಿದ್ದರು.</p>.<p> ಜಲಮಂಡಳಿ ಅಧ್ಯಕ್ಷರ ಫೋನ್ ಇನ್ ಇಂದು ಬೆಂಗಳೂರು: ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್ಪ್ರಸಾತ್ ಮನೋಹರ್ ಅವರೊಂದಿಗೆ ಮೇ 3ರಂದು ಶುಕ್ರವಾರ ಬೆಳಿಗ್ಗೆ 9.30ರಿಂದ 10:30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ ಜಲಮಾಪನ ಹಾಗೂ ನೀರಿನ ಬಿಲ್ನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಬಗೆಹರಿಸಿಕೊಳ್ಳಬಹುದು. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್. ಸಂಖ್ಯೆಯನ್ನು ತಿಳಿಸಿ ದೂರು ನೀಡಬಹುದಾಗಿದೆ. ದೂರವಾಣಿ 080-22945119 ಮತ್ತು 080-22229639.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿರುವ 40 ಐಟಿ ಪಾರ್ಕ್ಗಳಿಂದ ‘ಝೀರೊ ಬ್ಯಾಕ್ಟೀರಿಯಲ್’ ನೀರಿಗೆ ಬೇಡಿಕೆ ಬಂದಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್ಪ್ರಸಾತ್ ಮನೋಹರ್ ತಿಳಿಸಿದರು.</p>.<p>ಐಐಎಸ್ಸಿ ವಿಜ್ಞಾನಿಗಳ ಸಹಯೋಗದಲ್ಲಿ ಬೆಂಗಳೂರು ಜಲಮಂಡಳಿಯ ಎಂಜಿನಿಯರ್ಗಳು ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ದೇಶೀಯ ತಂತ್ರಜ್ಞಾನವನ್ನು ರೂಪಿಸಿ, ಅಳವಡಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ಪ್ರಾರಂಭಿಸಲಾದ ಈ ಯೋಜನೆಯ ಮೂಲಕ ಪ್ರತಿದಿನ ಸುಮಾರು 1 ಕೋಟಿ ಲೀಟರ್ನಷ್ಟು ‘ಝೀರೊ ಬ್ಯಾಕ್ಟೀರಿಯಲ್’ ಸಂಸ್ಕರಿಸಿದ ನೀರು ಉತ್ಪಾದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ವಿಪ್ರೊ ಕಂಪನಿ ಕೆಲವು ದಿನಗಳ ಹಿಂದೆ ಸಂಸ್ಕರಿಸಿದ ನೀರು ಸರಬರಾಜು ಮಾಡುವಂತೆ ಜಲಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ‘ಝೀರೊ ಬ್ಯಾಕ್ಟೀರಿಯಲ್’ ಉತ್ತಮ ಗುಣಮಟ್ಟದ ಸಂಸ್ಕರಿಸಿದ ನೀರನ್ನು ಗುರುವಾರದಿಂದ ಸರಬರಾಜು ಮಾಡಲಾಗುತ್ತಿದೆ. ಪ್ರತಿ ದಿನ 3 ಲಕ್ಷ ಲೀಟರ್ ನೀರು ಪೂರೈಸಲಾಗುತ್ತದೆ ಎಂದರು.</p>.<p>ಜಲಮಂಡಳಿ ನಿರ್ವಹಣಾ ವಿಭಾಗದ ಮುಖ್ಯ ಎಂಜಿನಿಯರ್ ಕುಮಾರ್ ನಾಯ್ಕ್, ಕಾರ್ಯನಿರ್ವಾಹಕ ಎಂಜಿನಿಯರ್ಗಳಾದ ನಾಗರಾಜ್, ರಾಹುಲ್ ಪ್ರಿಯದರ್ಶಿ, ಕೃಷ್ಣಕುಮಾರ್ ಉಪಸ್ಥಿತರಿದ್ದರು.</p>.<p> ಜಲಮಂಡಳಿ ಅಧ್ಯಕ್ಷರ ಫೋನ್ ಇನ್ ಇಂದು ಬೆಂಗಳೂರು: ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್ಪ್ರಸಾತ್ ಮನೋಹರ್ ಅವರೊಂದಿಗೆ ಮೇ 3ರಂದು ಶುಕ್ರವಾರ ಬೆಳಿಗ್ಗೆ 9.30ರಿಂದ 10:30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ ಜಲಮಾಪನ ಹಾಗೂ ನೀರಿನ ಬಿಲ್ನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಬಗೆಹರಿಸಿಕೊಳ್ಳಬಹುದು. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್. ಸಂಖ್ಯೆಯನ್ನು ತಿಳಿಸಿ ದೂರು ನೀಡಬಹುದಾಗಿದೆ. ದೂರವಾಣಿ 080-22945119 ಮತ್ತು 080-22229639.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>