<p><strong>ಬೆಂಗಳೂರು</strong>: ರಾಜ್ಯದಲ್ಲಿ ಡೆಂಗಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ‘ವಾರ್ ರೂಮ್’ ಪ್ರಾರಂಭಿಸಿ, ಡೆಂಗಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕು ಎಂದು ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. </p>.<p>ಈ ಬಗ್ಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸುತ್ತೋಲೆ ಹೊರಡಿಸಿದ್ದಾರೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ (ಎನ್ವಿಬಿಡಿಸಿಪಿ) ವಿಭಾಗವು ರಾಜ್ಯಮಟ್ಟದ ‘ವಾರ್ ರೂಮ್’ ಉಸ್ತುವಾರಿ ಹೊಂದಿರಲಿದೆ.</p>.<p>ಎಲ್ಲ ಜಿಲ್ಲೆಗಳು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗಿ ಜ್ವರ ಪರಿಸ್ಥಿತಿ ಮೇಲ್ವಿಚಾರಣೆ ಹಾಗೂ ದತ್ತಾಂಶ ಸಂಗ್ರಹಣೆಗೆ ನಿಯಂತ್ರಣ ಕೊಠಡಿ ಅಥವಾ ‘ಡೆಂಗಿ ವಾರ್ ರೂಮ್’ ಸಕ್ರಿಯಗೊಳಿಸಬೇಕು. ನಿಗಾ ಇರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಬೇಕು. ಈ ಕಾರ್ಯಪಡೆ ವಾರಕ್ಕೊಮ್ಮೆ ಸಭೆ ನಡೆಸಿ, ಅಗತ್ಯ ಸಲಹೆ, ಸೂಚನೆಗಳನ್ನು ಸಂಬಂಧಪಟ್ಟವರಿಗೆ ನೀಡಬೇಕು. ಡೆಂಗಿ ಪೀಡಿತರಿಗೆ ಜ್ವರ ಲಕ್ಷಣಗಳು ಕಂಡುಬಂದ ದಿನದಿಂದ 14 ದಿನಗಳವರೆಗೆ ಅವರ ಮೇಲೆ ನಿಗಾ ಇಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. </p>.<p>ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ (ಹಾಟ್ಸ್ಪಾಟ್) ಗುರುತಿಸಿ, ವಿವರವನ್ನು ರಾಜ್ಯಮಟ್ಟದ ‘ವಾರ್ ರೂಮ್’ಗೆ ಸಲ್ಲಿಸಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಈ ಪ್ರದೇಶಗಳಲ್ಲಿ ಜ್ವರ ಕ್ಲಿನಿಕ್ಗಳನ್ನು ತುರ್ತಾಗಿ ಪ್ರಾರಂಭಿಸಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ನಿರೋಧಕ ಬೇವಿನ ಎಣ್ಣೆಯ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ.</p>.<p>ಹಾಸಿಗೆ ಮೀಸಲು: ಡೆಂಗಿ ಜ್ವರ ಪ್ರಕರಣಗಳ ಅಗತ್ಯ ನಿರ್ವಹಣೆಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಐದು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ ಹತ್ತು ಹಾಸಿಗೆಗಳನ್ನು ಮೀಸಲಿಡಬೇಕು. ಮೀಸಲು ಹಾಸಿಗೆಗಳಷ್ಟು ಡೆಂಗಿ ಪ್ರಕರಣಗಳು ಇರದಿದ್ದಲ್ಲಿ ಆ ಹಾಸಿಗೆಗಳನ್ನು ಇತರ ರೋಗಿಗಳ ಆರೈಕೆಗೆ ಬಳಸಬೇಕು. ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣೆ ಸೌಲಭ್ಯವನ್ನು ಇಲಾಖೆ ವ್ಯಾಪ್ತಿಯಲ್ಲಿನ ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಒದಗಿಸಬೇಕು ಎಂದು ತಿಳಿಸಿದ್ದಾರೆ.</p>.<p>ಎಲ್ಲ ವೈದ್ಯಕೀಯ ಸಂಸ್ಥೆಗಳಲ್ಲಿ ಪರೀಕ್ಷೆ ಕಿಟ್ಗಳು ಹಾಗೂ ಔಷಧ ದಾಸ್ತಾನು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಎಲ್ಲಾ ಮನೆಗಳು, ಶಾಲಾ–ಕಾಲೇಜು, ಕಚೇರಿಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಈಡಿಸ್ ಲಾರ್ವಾ ಸಮೀಕ್ಷೆ ನಡೆಸಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಡೆಂಗಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ‘ವಾರ್ ರೂಮ್’ ಪ್ರಾರಂಭಿಸಿ, ಡೆಂಗಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕು ಎಂದು ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. </p>.<p>ಈ ಬಗ್ಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸುತ್ತೋಲೆ ಹೊರಡಿಸಿದ್ದಾರೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ (ಎನ್ವಿಬಿಡಿಸಿಪಿ) ವಿಭಾಗವು ರಾಜ್ಯಮಟ್ಟದ ‘ವಾರ್ ರೂಮ್’ ಉಸ್ತುವಾರಿ ಹೊಂದಿರಲಿದೆ.</p>.<p>ಎಲ್ಲ ಜಿಲ್ಲೆಗಳು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗಿ ಜ್ವರ ಪರಿಸ್ಥಿತಿ ಮೇಲ್ವಿಚಾರಣೆ ಹಾಗೂ ದತ್ತಾಂಶ ಸಂಗ್ರಹಣೆಗೆ ನಿಯಂತ್ರಣ ಕೊಠಡಿ ಅಥವಾ ‘ಡೆಂಗಿ ವಾರ್ ರೂಮ್’ ಸಕ್ರಿಯಗೊಳಿಸಬೇಕು. ನಿಗಾ ಇರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಬೇಕು. ಈ ಕಾರ್ಯಪಡೆ ವಾರಕ್ಕೊಮ್ಮೆ ಸಭೆ ನಡೆಸಿ, ಅಗತ್ಯ ಸಲಹೆ, ಸೂಚನೆಗಳನ್ನು ಸಂಬಂಧಪಟ್ಟವರಿಗೆ ನೀಡಬೇಕು. ಡೆಂಗಿ ಪೀಡಿತರಿಗೆ ಜ್ವರ ಲಕ್ಷಣಗಳು ಕಂಡುಬಂದ ದಿನದಿಂದ 14 ದಿನಗಳವರೆಗೆ ಅವರ ಮೇಲೆ ನಿಗಾ ಇಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. </p>.<p>ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ (ಹಾಟ್ಸ್ಪಾಟ್) ಗುರುತಿಸಿ, ವಿವರವನ್ನು ರಾಜ್ಯಮಟ್ಟದ ‘ವಾರ್ ರೂಮ್’ಗೆ ಸಲ್ಲಿಸಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಈ ಪ್ರದೇಶಗಳಲ್ಲಿ ಜ್ವರ ಕ್ಲಿನಿಕ್ಗಳನ್ನು ತುರ್ತಾಗಿ ಪ್ರಾರಂಭಿಸಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ನಿರೋಧಕ ಬೇವಿನ ಎಣ್ಣೆಯ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ.</p>.<p>ಹಾಸಿಗೆ ಮೀಸಲು: ಡೆಂಗಿ ಜ್ವರ ಪ್ರಕರಣಗಳ ಅಗತ್ಯ ನಿರ್ವಹಣೆಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಐದು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ತಲಾ ಹತ್ತು ಹಾಸಿಗೆಗಳನ್ನು ಮೀಸಲಿಡಬೇಕು. ಮೀಸಲು ಹಾಸಿಗೆಗಳಷ್ಟು ಡೆಂಗಿ ಪ್ರಕರಣಗಳು ಇರದಿದ್ದಲ್ಲಿ ಆ ಹಾಸಿಗೆಗಳನ್ನು ಇತರ ರೋಗಿಗಳ ಆರೈಕೆಗೆ ಬಳಸಬೇಕು. ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣೆ ಸೌಲಭ್ಯವನ್ನು ಇಲಾಖೆ ವ್ಯಾಪ್ತಿಯಲ್ಲಿನ ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಒದಗಿಸಬೇಕು ಎಂದು ತಿಳಿಸಿದ್ದಾರೆ.</p>.<p>ಎಲ್ಲ ವೈದ್ಯಕೀಯ ಸಂಸ್ಥೆಗಳಲ್ಲಿ ಪರೀಕ್ಷೆ ಕಿಟ್ಗಳು ಹಾಗೂ ಔಷಧ ದಾಸ್ತಾನು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಎಲ್ಲಾ ಮನೆಗಳು, ಶಾಲಾ–ಕಾಲೇಜು, ಕಚೇರಿಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಈಡಿಸ್ ಲಾರ್ವಾ ಸಮೀಕ್ಷೆ ನಡೆಸಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>