<p><strong>ಬೆಂಗಳೂರು</strong>: ‘ಕಲಾ, ಮಾನವಿಕ ಶಾಸ್ತ್ರ ಮತ್ತು ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ವಿಷಯಗಳಿಗೆ ಬೇಡಿಕೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಆಗುತ್ತಿದ್ದು, ಈ ಕುರಿತು ಚಿಂತನೆ ನಡೆಸುವ ಅಗತ್ಯವಿದೆ‘ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ ಹೇಳಿದರು.</p>.<p>ಬೆಂಗಳೂರು ನಗರ ವಿಶ್ವವಿದ್ಯಾಲಯ ಸೋಮವಾರ ಆಯೋಜಿಸಿದ್ದ ‘ಇತಿಹಾಸ ಅಧ್ಯಾಪಕರಿಗೆ ಇಂಟರ್ನ್ಶಿಪ್’ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಾನವಿಕ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಅಧ್ಯಯನ ಮಾಡುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕಿದೆ. ವಿದ್ಯಾರ್ಥಿಗಳಲ್ಲಿ ಉದ್ಯೋಗ ಅರ್ಹತೆ ಪಡೆಯಲು ಶಿಕ್ಷಣದ ಜೊತೆಗೆ ವೃತ್ತಿಗೆ ಸಂಬಂಧಿಸಿದ ಕೌಶಲಗಳ ತರಬೇತಿ ನೀಡುವ ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಪದವಿಯ 6ನೇ ಸೆಮಿಸ್ಟರ್ನಲ್ಲಿ ಇಂಟರ್ನ್ಶಿಪ್ ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ಬೋಧಕರಾಗಲಿ ಅಥವಾ ವಿದ್ಯಾರ್ಥಿಗಳಾಗಲಿ ಆತಂಕ ಪಡಬೇಕಿಲ್ಲ. ಬೆಂಗಳೂರು ನಗರ ವಿಶ್ವವಿದ್ಯಾಲಯ ಈಗಾಗಲೇ ಈ ಕುರಿತು ಮಾರ್ಗಸೂಚಿಗಳು ಸೇರಿದಂತೆ ಮೌಲ್ಯಮಾಪನ ವಿಧಾನಗಳನ್ನು ತಿಳಿಸುವ ಸುತ್ತೋಲೆ ಹೊರಡಿಸಿದೆ’ ಎಂದು ತಿಳಿಸಿದರು. </p>.<p>‘ವಿದ್ಯಾರ್ಥಿಗಳು ಸ್ವಯಂ ಉದ್ಯೋಗ, ಉದ್ಯಮಶೀಲತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಬೇಕು’ ಎಂದರು.</p>.<p>ಇತಿಹಾಸ ಅಧ್ಯಯನ ಮಂಡಳಿ ಅಧ್ಯಕ್ಷ ಎಸ್. ನಾಗರತ್ನಮ್ಮ, ಪ್ರಾಧ್ಯಾಪಕರಾದ ಎಚ್.ಜಿ. ನಾರಾಯಣ, ಅನುರಾಧ. ವಿ., ಆನಂದ ಎಸ್., ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪಿ.ಟಿ. ಶ್ರೀನಿವಾಸ ನಾಯಕ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಲಾ, ಮಾನವಿಕ ಶಾಸ್ತ್ರ ಮತ್ತು ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ವಿಷಯಗಳಿಗೆ ಬೇಡಿಕೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಆಗುತ್ತಿದ್ದು, ಈ ಕುರಿತು ಚಿಂತನೆ ನಡೆಸುವ ಅಗತ್ಯವಿದೆ‘ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ ಹೇಳಿದರು.</p>.<p>ಬೆಂಗಳೂರು ನಗರ ವಿಶ್ವವಿದ್ಯಾಲಯ ಸೋಮವಾರ ಆಯೋಜಿಸಿದ್ದ ‘ಇತಿಹಾಸ ಅಧ್ಯಾಪಕರಿಗೆ ಇಂಟರ್ನ್ಶಿಪ್’ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಾನವಿಕ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಅಧ್ಯಯನ ಮಾಡುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕಿದೆ. ವಿದ್ಯಾರ್ಥಿಗಳಲ್ಲಿ ಉದ್ಯೋಗ ಅರ್ಹತೆ ಪಡೆಯಲು ಶಿಕ್ಷಣದ ಜೊತೆಗೆ ವೃತ್ತಿಗೆ ಸಂಬಂಧಿಸಿದ ಕೌಶಲಗಳ ತರಬೇತಿ ನೀಡುವ ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಪದವಿಯ 6ನೇ ಸೆಮಿಸ್ಟರ್ನಲ್ಲಿ ಇಂಟರ್ನ್ಶಿಪ್ ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ಬೋಧಕರಾಗಲಿ ಅಥವಾ ವಿದ್ಯಾರ್ಥಿಗಳಾಗಲಿ ಆತಂಕ ಪಡಬೇಕಿಲ್ಲ. ಬೆಂಗಳೂರು ನಗರ ವಿಶ್ವವಿದ್ಯಾಲಯ ಈಗಾಗಲೇ ಈ ಕುರಿತು ಮಾರ್ಗಸೂಚಿಗಳು ಸೇರಿದಂತೆ ಮೌಲ್ಯಮಾಪನ ವಿಧಾನಗಳನ್ನು ತಿಳಿಸುವ ಸುತ್ತೋಲೆ ಹೊರಡಿಸಿದೆ’ ಎಂದು ತಿಳಿಸಿದರು. </p>.<p>‘ವಿದ್ಯಾರ್ಥಿಗಳು ಸ್ವಯಂ ಉದ್ಯೋಗ, ಉದ್ಯಮಶೀಲತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಬೇಕು’ ಎಂದರು.</p>.<p>ಇತಿಹಾಸ ಅಧ್ಯಯನ ಮಂಡಳಿ ಅಧ್ಯಕ್ಷ ಎಸ್. ನಾಗರತ್ನಮ್ಮ, ಪ್ರಾಧ್ಯಾಪಕರಾದ ಎಚ್.ಜಿ. ನಾರಾಯಣ, ಅನುರಾಧ. ವಿ., ಆನಂದ ಎಸ್., ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪಿ.ಟಿ. ಶ್ರೀನಿವಾಸ ನಾಯಕ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>