<p><strong>ಬೆಂಗಳೂರು:</strong> ಹಣಕಾಸು ವ್ಯವಹಾರದಲ್ಲಿ ಉಂಟಾದ ದ್ವೇಷದಿಂದ ಮಹಿಳೆಯೊಬ್ಬರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮೀಪ ಚಾಕುವಿನಿಂದ ಇರಿಯಲಾಗಿದ್ದು, ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶೇಷಾದ್ರಿಪುರದ ನಿವಾಸಿ ಜೆ.ವಿ.ಜಯರಾಮ್ರೆಡ್ಡಿ ಬಂಧಿತ. ಮಲ್ಲೇಶ್ವರದ ವಿಮಲಾ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಮಹಿಳೆ ಈ ಹಿಂದೆ ವಕೀಲರಾಗಿದ್ದು, ಇತ್ತೀಚೆಗೆ ವಕಾಲತ್ತು ನಡೆಸುವುದನ್ನು ನಿಲ್ಲಿಸಿದ್ದರು.</p>.<p>‘ಇರಿತಕ್ಕೊಳಗಾದ ವಿಮಲಾ ಹಾಗೂ ಆರೋಪಿ ಜಯರಾಮರೆಡ್ಡಿ ಅವರು ಒಂಬತ್ತು ವರ್ಷಗಳಿಂದ ಸ್ನೇಹಿತರು. ಪ್ರಕರಣವೊಂದರ ವಿಚಾರವಾಗಿ ವಿಮಲಾ ಅವರು ಶೇಷಾದ್ರಿಪುರ ಠಾಣೆಗೆ ದೂರು ನೀಡಿದ್ದರು. ಆ ಪ್ರಕರಣದ ವಿಚಾರಣೆಯು ಕೋರ್ಟ್ನಲ್ಲಿ ನಡೆಯುತ್ತಿತ್ತು. ಮಂಗಳವಾರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಬರುತ್ತಿದ್ದ ವೇಳೆ ಅಡ್ಡಗಟ್ಟಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಕೃತ್ಯ ಎಸಗಲು ಆರೋಪಿ ಚಾಕುವನ್ನು ಜತೆಗೆ ತಂದಿದ್ದ’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆ ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಣಕಾಸು ವ್ಯವಹಾರದಲ್ಲಿ ಉಂಟಾದ ದ್ವೇಷದಿಂದ ಮಹಿಳೆಯೊಬ್ಬರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮೀಪ ಚಾಕುವಿನಿಂದ ಇರಿಯಲಾಗಿದ್ದು, ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಶೇಷಾದ್ರಿಪುರದ ನಿವಾಸಿ ಜೆ.ವಿ.ಜಯರಾಮ್ರೆಡ್ಡಿ ಬಂಧಿತ. ಮಲ್ಲೇಶ್ವರದ ವಿಮಲಾ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಮಹಿಳೆ ಈ ಹಿಂದೆ ವಕೀಲರಾಗಿದ್ದು, ಇತ್ತೀಚೆಗೆ ವಕಾಲತ್ತು ನಡೆಸುವುದನ್ನು ನಿಲ್ಲಿಸಿದ್ದರು.</p>.<p>‘ಇರಿತಕ್ಕೊಳಗಾದ ವಿಮಲಾ ಹಾಗೂ ಆರೋಪಿ ಜಯರಾಮರೆಡ್ಡಿ ಅವರು ಒಂಬತ್ತು ವರ್ಷಗಳಿಂದ ಸ್ನೇಹಿತರು. ಪ್ರಕರಣವೊಂದರ ವಿಚಾರವಾಗಿ ವಿಮಲಾ ಅವರು ಶೇಷಾದ್ರಿಪುರ ಠಾಣೆಗೆ ದೂರು ನೀಡಿದ್ದರು. ಆ ಪ್ರಕರಣದ ವಿಚಾರಣೆಯು ಕೋರ್ಟ್ನಲ್ಲಿ ನಡೆಯುತ್ತಿತ್ತು. ಮಂಗಳವಾರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಬರುತ್ತಿದ್ದ ವೇಳೆ ಅಡ್ಡಗಟ್ಟಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಕೃತ್ಯ ಎಸಗಲು ಆರೋಪಿ ಚಾಕುವನ್ನು ಜತೆಗೆ ತಂದಿದ್ದ’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆ ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>