<p><strong>ಬೆಂಗಳೂರು</strong>: ‘ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ ನೀಡುವಲ್ಲಿ ಇಪಿಎಫ್ಒ ವಿಳಂಬ ನೀತಿ ಅನುಸರಿಸುತ್ತಿದೆ‘ ಎಂದು ಆರೋಪಿಸಿ ಎನ್ಎಸಿ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿಯ ನಿವೃತ್ತ ನೌಕರರು ಸೋಮವಾರ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಿದರು.</p>.<p>ನೂರಾರು ನೌಕರರು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದು, ಬೇಡಿಕೆಗಳ ಮನವಿಪತ್ರವನ್ನು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಿಗೆ ನೀಡಲಾಯಿತು.</p>.<p>‘ಇಪಿಎಫ್ಒ, ಪಿಂಚಣಿದಾರರ ವಿಷಯದಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ. ಸುಪ್ರೀಂ ಕೋರ್ಟ್ನ ತೀರ್ಪನ್ನು ಜಾರಿಗೆ ತರಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಸರ್ಕಾರ ಮತ್ತು ನ್ಯಾಯಾಲಯಕ್ಕೆ ಪಿಂಚಣಿ ನಿಧಿಯ ವಾಸ್ತವ ಅಂಕಿಅಂಶಗಳನ್ನು ನೀಡದೇ, ಕನಿಷ್ಠ ಪಿಂಚಣಿ ಹೆಚ್ಚಿಸಲು ಇಪಿಎಫ್ಒ ಅಧಿಕಾರಿ ವರ್ಗ ಹಿಂದೇಟು ಹಾಕುತ್ತಿದೆ. ನ್ಯಾಯ ಸಿಗುವವರೆಗೂ ದೀರ್ಘ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.</p>.<p>‘ಹಿಂದಿನ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ, ಈಡೇರಿಸಲಿಲ್ಲ. ನಮ್ಮ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ಈ ಬಾರಿಯ ಚುನಾವಣೆಯಲ್ಲಿ ಆಯ್ಕೆಯಾಗುವ ಸಂಸದರ ಮನೆ ಹಾಗೂ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ತಿಳಿಸಿದರು.</p>.<p>ಪ್ರತಿಭಟನಾ ಸಭೆಯಲ್ಲಿ ಜಿ.ಎಸ್.ಎಂ. ಸ್ವಾಮಿ, ನಂಜುಂಡೇಗೌಡ, ಶಂಕರ್ ಕುಮಾರ್, ಸುಬ್ಬಣ್ಣ, ಹುಚ್ಚಪ್ಪ, ಶ್ರೀನಿವಾಸರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ ನೀಡುವಲ್ಲಿ ಇಪಿಎಫ್ಒ ವಿಳಂಬ ನೀತಿ ಅನುಸರಿಸುತ್ತಿದೆ‘ ಎಂದು ಆರೋಪಿಸಿ ಎನ್ಎಸಿ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿಯ ನಿವೃತ್ತ ನೌಕರರು ಸೋಮವಾರ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಿದರು.</p>.<p>ನೂರಾರು ನೌಕರರು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದು, ಬೇಡಿಕೆಗಳ ಮನವಿಪತ್ರವನ್ನು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಿಗೆ ನೀಡಲಾಯಿತು.</p>.<p>‘ಇಪಿಎಫ್ಒ, ಪಿಂಚಣಿದಾರರ ವಿಷಯದಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ. ಸುಪ್ರೀಂ ಕೋರ್ಟ್ನ ತೀರ್ಪನ್ನು ಜಾರಿಗೆ ತರಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಸರ್ಕಾರ ಮತ್ತು ನ್ಯಾಯಾಲಯಕ್ಕೆ ಪಿಂಚಣಿ ನಿಧಿಯ ವಾಸ್ತವ ಅಂಕಿಅಂಶಗಳನ್ನು ನೀಡದೇ, ಕನಿಷ್ಠ ಪಿಂಚಣಿ ಹೆಚ್ಚಿಸಲು ಇಪಿಎಫ್ಒ ಅಧಿಕಾರಿ ವರ್ಗ ಹಿಂದೇಟು ಹಾಕುತ್ತಿದೆ. ನ್ಯಾಯ ಸಿಗುವವರೆಗೂ ದೀರ್ಘ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.</p>.<p>‘ಹಿಂದಿನ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ, ಈಡೇರಿಸಲಿಲ್ಲ. ನಮ್ಮ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ಈ ಬಾರಿಯ ಚುನಾವಣೆಯಲ್ಲಿ ಆಯ್ಕೆಯಾಗುವ ಸಂಸದರ ಮನೆ ಹಾಗೂ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ತಿಳಿಸಿದರು.</p>.<p>ಪ್ರತಿಭಟನಾ ಸಭೆಯಲ್ಲಿ ಜಿ.ಎಸ್.ಎಂ. ಸ್ವಾಮಿ, ನಂಜುಂಡೇಗೌಡ, ಶಂಕರ್ ಕುಮಾರ್, ಸುಬ್ಬಣ್ಣ, ಹುಚ್ಚಪ್ಪ, ಶ್ರೀನಿವಾಸರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>