ನೇರಳೆ ಮಾರ್ಗದಲ್ಲಿನ ವಿಸ್ತರಿತ ಕಾಮಗಾರಿ ಇದಾಗಿದ್ದು, ಬೈಯಪ್ಪನಹಳ್ಳಿ–ಕೆ.ಆರ್. ಪುರ ನಡುವೆ 2.5 ಕಿಲೋಮೀಟರ್ ಹಾಗೂ ಕೆಂಗೇರಿ–ಚಲ್ಲಘಟ್ಟದ ನಡುವೆ 1.9 ಕಿ.ಮೀ ಕಾಮಗಾರಿ ಬಾಕಿ ಉಳಿದಿತ್ತು. ಎರಡೂ ಕಡೆಗಳಲ್ಲಿ ಕಾಮಗಾರಿ ಮುಗಿದಿದೆ. ಕೆಲವು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಸಿ, ಎಲ್ಲ ತಾಂತ್ರಿಕ ತೊಂದರೆಗಳು ಬಗೆಹರಿದ ಬಳಿಕ ಆಗಸ್ಟ್ ಅಂತ್ಯದ ಒಳಗೆ ವಾಣಿಜ್ಯ ಸಂಚಾರ ಆರಂಭಿಸಲಾಗುವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.