<p><strong>ಬೆಂಗಳೂರು:</strong> ನಗರ ಕೇಂದ್ರ ವಲಯದ ಪೊಲೀಸ್ ಕಚೇರಿಗೆ ಸೇರಿದ ಜಾಗ ತಮ್ಮದೆಂದು ದಾಖಲೆ ಸೃಷ್ಟಿಸಿಕೊಂಡಿದ್ದ ಆರು ಮಂದಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಿದ್ಯಾರಣ್ಯಪುರದ ಎಂ.ಡಿ.ಹನೀಫ್, ವಿಜಯನಗರದ ರಾಜಶೇಖರ್, ಉಲ್ಲಾಳದ ಮಹಮ್ಮದ್ ನದೀಮ್, ಸಂಜಯನಗರದ ಮೋಹನ್ ಶೆಟ್ಟಿ, ಗಣಪತಿ ಹಾಗೂ ಜಹೀರ್ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>ಜಿಲ್ಲಾ ನಿಯಂತ್ರಣ ಕೊಠಡಿ ವೈರ್ಲೆಸ್ ವಿಭಾಗದ ಇನ್ಸ್ಪೆಕ್ಟರ್ ಸಂತೋಷ್ಗೌಡ ದೂರು ನೀಡಿದ್ದು ದೂರು ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಜೂನ್ 6ರಂದು ನಗರದಲ್ಲಿರುವ ಕೇಂದ್ರ ವಲಯ ಪೊಲೀಸ್ ಕಚೇರಿ ಹಾಗೂ ಗ್ರಾಮಾಂತರ ಜಿಲ್ಲಾ ಪೊಲೀಸ್ ಕಚೇರಿ ಆವರಣಕ್ಕೆ ನುಗ್ಗಿದ್ದ ಇಬ್ಬರು ಆರೋಪಿಗಳು ವಿಡಿಯೊ ಚಿತ್ರೀಕರಣ ಮಾಡುತ್ತಿದ್ದರು. ಜತೆಗೆ, ಫೋಟೊ ತೆಗೆಯುತ್ತಿದ್ದರು. ಅವರನ್ನು ಪ್ರಶ್ನಿಸಿದಾಗ ನನ್ನನ್ನು ಬೆದರಿಸಿದರು. ಅಲ್ಲದೇ ಈ ಜಾಗದ ದಾಖಲೆ ಮೋಹನ್ಶೆಟ್ಟಿ ಹಾಗೂ ರಾಜಶೇಖರ್ ಬಳಿಯಿದೆ ಎಂದೂ ಹೇಳಿದ್ದರು. ಅವರನ್ನು ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಜಹೀರ್ ಅಹಮದ್ ಸೇರಿ ಹಲವರು ಸ್ವತ್ತಿನ ಜಿಪಿಎ ಮಾಡಿಸಿಕೊಂಡಿರುವುದಾಗಿ ಬಾಯ್ಬಿಟ್ಟಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ಧಾರೆ.</p>.<p>‘ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನು ಮಾರಾಟ ಮಾಡುವ ದುರುದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡಿರುವುದು ಗೊತ್ತಾಗಿದೆ. ಅಲ್ಲದೇ ಆರೋಪಿಗಳು ಕಚೇರಿ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದರು. ಪ್ರಕರಣ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಕೇಂದ್ರ ವಲಯದ ಪೊಲೀಸ್ ಕಚೇರಿಗೆ ಸೇರಿದ ಜಾಗ ತಮ್ಮದೆಂದು ದಾಖಲೆ ಸೃಷ್ಟಿಸಿಕೊಂಡಿದ್ದ ಆರು ಮಂದಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಿದ್ಯಾರಣ್ಯಪುರದ ಎಂ.ಡಿ.ಹನೀಫ್, ವಿಜಯನಗರದ ರಾಜಶೇಖರ್, ಉಲ್ಲಾಳದ ಮಹಮ್ಮದ್ ನದೀಮ್, ಸಂಜಯನಗರದ ಮೋಹನ್ ಶೆಟ್ಟಿ, ಗಣಪತಿ ಹಾಗೂ ಜಹೀರ್ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>ಜಿಲ್ಲಾ ನಿಯಂತ್ರಣ ಕೊಠಡಿ ವೈರ್ಲೆಸ್ ವಿಭಾಗದ ಇನ್ಸ್ಪೆಕ್ಟರ್ ಸಂತೋಷ್ಗೌಡ ದೂರು ನೀಡಿದ್ದು ದೂರು ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಜೂನ್ 6ರಂದು ನಗರದಲ್ಲಿರುವ ಕೇಂದ್ರ ವಲಯ ಪೊಲೀಸ್ ಕಚೇರಿ ಹಾಗೂ ಗ್ರಾಮಾಂತರ ಜಿಲ್ಲಾ ಪೊಲೀಸ್ ಕಚೇರಿ ಆವರಣಕ್ಕೆ ನುಗ್ಗಿದ್ದ ಇಬ್ಬರು ಆರೋಪಿಗಳು ವಿಡಿಯೊ ಚಿತ್ರೀಕರಣ ಮಾಡುತ್ತಿದ್ದರು. ಜತೆಗೆ, ಫೋಟೊ ತೆಗೆಯುತ್ತಿದ್ದರು. ಅವರನ್ನು ಪ್ರಶ್ನಿಸಿದಾಗ ನನ್ನನ್ನು ಬೆದರಿಸಿದರು. ಅಲ್ಲದೇ ಈ ಜಾಗದ ದಾಖಲೆ ಮೋಹನ್ಶೆಟ್ಟಿ ಹಾಗೂ ರಾಜಶೇಖರ್ ಬಳಿಯಿದೆ ಎಂದೂ ಹೇಳಿದ್ದರು. ಅವರನ್ನು ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಜಹೀರ್ ಅಹಮದ್ ಸೇರಿ ಹಲವರು ಸ್ವತ್ತಿನ ಜಿಪಿಎ ಮಾಡಿಸಿಕೊಂಡಿರುವುದಾಗಿ ಬಾಯ್ಬಿಟ್ಟಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ಧಾರೆ.</p>.<p>‘ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನು ಮಾರಾಟ ಮಾಡುವ ದುರುದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡಿರುವುದು ಗೊತ್ತಾಗಿದೆ. ಅಲ್ಲದೇ ಆರೋಪಿಗಳು ಕಚೇರಿ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದರು. ಪ್ರಕರಣ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>