<p><strong>ಬೆಂಗಳೂರು:</strong> ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಜರತ್ ಹಮೀದ್ ಷಾ ಹಾಗೂ ಹಜರತ್ ಶಾ ಖಾದ್ರಿ ವಕ್ಫ್ ಬೋರ್ಡ್ಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಪದಾಧಿಕಾರಿಗಳು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪದಡಿ ನಾಲ್ವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸಂಸ್ಥೆಯ ಅಧ್ಯಕ್ಷರೂ ಆಗಿರುವ ನಿವೃತ್ತ ಡಿಸಿಪಿ ಜಿ.ಎ.ಬಾವಾ, ಜಂಟಿ ಕಾರ್ಯದರ್ಶಿ ಸೈಯದ್ ರಶೀದ್ ಅಹ್ಮದ್, ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಜಿಯಾವುಲ್ಲಾ ಷರೀಫ್, ಉಪಾಧ್ಯಕ್ಷ ಜಾವೀದ್ ಪಾಟೇಲ್ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಸಾಮಾಜಿಕ ಕಾರ್ಯಕರ್ತ ಅಲ್ಲಾ ಪಾಷಾ ಎಂಬುವವರು ದೂರು ನೀಡಿದ್ದು, ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಕಬ್ಬನ್ಪೇಟೆ ರಸ್ತೆಯಲ್ಲಿ ಈ ವಕ್ಫ್ ಬೋರ್ಡ್ಕ ಚೇರಿಯಿದೆ. ಸಂಸ್ಥೆಯ ಅಧೀನದಲ್ಲಿ 128 ವಾಣಿಜ್ಯ ಮಳಿಗೆಗಳು, ಸಹಕಾರಿ ಬ್ಯಾಂಕ್ ಹಾಗೂ ಕಾಲೇಜು ಕಟ್ಟಡ, ಪಾರ್ಕಿಂಗ್ ಸ್ಥಳವಿದೆ. ಪ್ರತಿವರ್ಷ ₹1 ಕೋಟಿಗೂ ಅಧಿಕ ವರಮಾನವಿದೆ. ವಕ್ಫ್ ಬೋರ್ಡ್ ಈ ವರಮಾನದಲ್ಲಿ ಶೇ 7ರಷ್ಟನ್ನು ಸರ್ಕಾರಕ್ಕೆ ಸಂದಾಯ ಮಾಡಬೇಕು. ಆದಾಯವನ್ನು ಜಿ.ಎ.ಬಾವಾ, ರಶೀದ್ ಅಹ್ಮದ್ ಸೇರಿ ಹಲವರು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಜರತ್ ಹಮೀದ್ ಷಾ ಹಾಗೂ ಹಜರತ್ ಶಾ ಖಾದ್ರಿ ವಕ್ಫ್ ಬೋರ್ಡ್ಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಪದಾಧಿಕಾರಿಗಳು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪದಡಿ ನಾಲ್ವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸಂಸ್ಥೆಯ ಅಧ್ಯಕ್ಷರೂ ಆಗಿರುವ ನಿವೃತ್ತ ಡಿಸಿಪಿ ಜಿ.ಎ.ಬಾವಾ, ಜಂಟಿ ಕಾರ್ಯದರ್ಶಿ ಸೈಯದ್ ರಶೀದ್ ಅಹ್ಮದ್, ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಜಿಯಾವುಲ್ಲಾ ಷರೀಫ್, ಉಪಾಧ್ಯಕ್ಷ ಜಾವೀದ್ ಪಾಟೇಲ್ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಸಾಮಾಜಿಕ ಕಾರ್ಯಕರ್ತ ಅಲ್ಲಾ ಪಾಷಾ ಎಂಬುವವರು ದೂರು ನೀಡಿದ್ದು, ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಕಬ್ಬನ್ಪೇಟೆ ರಸ್ತೆಯಲ್ಲಿ ಈ ವಕ್ಫ್ ಬೋರ್ಡ್ಕ ಚೇರಿಯಿದೆ. ಸಂಸ್ಥೆಯ ಅಧೀನದಲ್ಲಿ 128 ವಾಣಿಜ್ಯ ಮಳಿಗೆಗಳು, ಸಹಕಾರಿ ಬ್ಯಾಂಕ್ ಹಾಗೂ ಕಾಲೇಜು ಕಟ್ಟಡ, ಪಾರ್ಕಿಂಗ್ ಸ್ಥಳವಿದೆ. ಪ್ರತಿವರ್ಷ ₹1 ಕೋಟಿಗೂ ಅಧಿಕ ವರಮಾನವಿದೆ. ವಕ್ಫ್ ಬೋರ್ಡ್ ಈ ವರಮಾನದಲ್ಲಿ ಶೇ 7ರಷ್ಟನ್ನು ಸರ್ಕಾರಕ್ಕೆ ಸಂದಾಯ ಮಾಡಬೇಕು. ಆದಾಯವನ್ನು ಜಿ.ಎ.ಬಾವಾ, ರಶೀದ್ ಅಹ್ಮದ್ ಸೇರಿ ಹಲವರು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>