<p><strong>ಬೆಂಗಳೂರು:</strong> ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ ₹47.10 ಕೋಟಿ ಹಗರಣಕ್ಕೆ ಸಂಬಂಧಿಸಿ ನಿಯಮಿತದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಡಿ.ಎಸ್.ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದರು.</p>.<p>‘ಅಕ್ರಮದಲ್ಲಿ ವೀರಯ್ಯ ಅವರೂ ಶಾಮೀಲಾಗಿರುವುದಕ್ಕೆ ಕೆಲವು ಸಾಕ್ಷ್ಯಗಳು ಲಭಿಸಿದ್ದು ಬಂಧಿಸಲಾಗಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ. </p>.<p>‘ಮುಡಾ ನಿವೇಶನ ಅಕ್ರಮ ವಿರೋಧಿಸಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವೀರಯ್ಯ ಸಹ ಭಾಗವಹಿಸಲು ಹೊರಟಿದ್ದರು. ಆಗ ವೀರಯ್ಯ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನು ಕೋರಲಾಗುವುದು’ ಎಂದು ಪೊಲೀಸರು ಹೇಳಿದರು.</p>.<p>ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾಗಿದ್ದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಡಿಯುಟಿಟಿಎಲ್ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2021ರಿಂದ 2023ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ಅವರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟೆಂಬರ್ 23ರಂದು ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು.</p>.<p>‘ನಿಗಮದ 194ನೇ ನಿರ್ದೇಶಕ ಮಂಡಳಿ ಸಭೆಯನ್ನು 2021ರ ಅಕ್ಟೋಬರ್ನಲ್ಲಿ ನಡೆಸಲಾಗಿತ್ತು. ಈ ವೇಳೆ ಟ್ರಕ್ ಟರ್ಮಿನಲ್ಗಳ ನಿರ್ವಹಣೆ ಮಾಡಲು ₹10 ಕೋಟಿ ಮೊತ್ತದ ತುಂಡು ಗುತ್ತಿಗೆ ನೀಡಲು ಅನುಮೋದನೆ ಹೊರಡಿಸಲಾಗಿತ್ತು. ಇದಾದ ಬಳಿಕ ಕಾಮಗಾರಿ ನಡೆಸದೇ ₹47 ಕೋಟಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ವ್ಯವಸ್ಥಾಪಕ ನಿರ್ದೇಶಕರು ದೂರು ನೀಡಿದ್ದರು. ಈ ಕುರಿತು ತನಿಖೆಯಲ್ಲಿ ಲಭ್ಯವಾದ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<p>ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಡಿಯುಟಿಟಿಎಲ್ ಕಚೇರಿ, ಹಲವರ ಮನೆಗಳ ಮೇಲೆ ಇತ್ತೀಚೆಗೆ ಸಿಐಡಿ ದಾಳಿ ನಡೆಸಿ ದಾಖಲೆ ಸಂಗ್ರಹಿಸಿತ್ತು.</p>.<p><strong>ಮಾಜಿ ಎಂ.ಡಿಯನ್ನೂ ಬಂಧಿಸಿದ್ದ ಸಿಐಡಿ: </strong>ಇದೇ ಪ್ರಕರಣದಲ್ಲಿ ಡಿಡಿಯುಟಿಟಿಎಲ್ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್.ಶಂಕರಪ್ಪ ಅವರನ್ನೂ ಸಿಐಡಿ ಮೇ 27ರಂದು ಬಂಧಿಸಿತ್ತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾಗಿದ್ದ ಶಂಕರಪ್ಪ, ಈ ಹಿಂದೆ ಡಿಡಿಯುಟಿಟಿಎಲ್ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ ₹47.10 ಕೋಟಿ ಹಗರಣಕ್ಕೆ ಸಂಬಂಧಿಸಿ ನಿಯಮಿತದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಡಿ.ಎಸ್.ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದರು.</p>.<p>‘ಅಕ್ರಮದಲ್ಲಿ ವೀರಯ್ಯ ಅವರೂ ಶಾಮೀಲಾಗಿರುವುದಕ್ಕೆ ಕೆಲವು ಸಾಕ್ಷ್ಯಗಳು ಲಭಿಸಿದ್ದು ಬಂಧಿಸಲಾಗಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ. </p>.<p>‘ಮುಡಾ ನಿವೇಶನ ಅಕ್ರಮ ವಿರೋಧಿಸಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವೀರಯ್ಯ ಸಹ ಭಾಗವಹಿಸಲು ಹೊರಟಿದ್ದರು. ಆಗ ವೀರಯ್ಯ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನು ಕೋರಲಾಗುವುದು’ ಎಂದು ಪೊಲೀಸರು ಹೇಳಿದರು.</p>.<p>ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾಗಿದ್ದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಡಿಯುಟಿಟಿಎಲ್ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2021ರಿಂದ 2023ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ಅವರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟೆಂಬರ್ 23ರಂದು ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು.</p>.<p>‘ನಿಗಮದ 194ನೇ ನಿರ್ದೇಶಕ ಮಂಡಳಿ ಸಭೆಯನ್ನು 2021ರ ಅಕ್ಟೋಬರ್ನಲ್ಲಿ ನಡೆಸಲಾಗಿತ್ತು. ಈ ವೇಳೆ ಟ್ರಕ್ ಟರ್ಮಿನಲ್ಗಳ ನಿರ್ವಹಣೆ ಮಾಡಲು ₹10 ಕೋಟಿ ಮೊತ್ತದ ತುಂಡು ಗುತ್ತಿಗೆ ನೀಡಲು ಅನುಮೋದನೆ ಹೊರಡಿಸಲಾಗಿತ್ತು. ಇದಾದ ಬಳಿಕ ಕಾಮಗಾರಿ ನಡೆಸದೇ ₹47 ಕೋಟಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ವ್ಯವಸ್ಥಾಪಕ ನಿರ್ದೇಶಕರು ದೂರು ನೀಡಿದ್ದರು. ಈ ಕುರಿತು ತನಿಖೆಯಲ್ಲಿ ಲಭ್ಯವಾದ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<p>ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಡಿಯುಟಿಟಿಎಲ್ ಕಚೇರಿ, ಹಲವರ ಮನೆಗಳ ಮೇಲೆ ಇತ್ತೀಚೆಗೆ ಸಿಐಡಿ ದಾಳಿ ನಡೆಸಿ ದಾಖಲೆ ಸಂಗ್ರಹಿಸಿತ್ತು.</p>.<p><strong>ಮಾಜಿ ಎಂ.ಡಿಯನ್ನೂ ಬಂಧಿಸಿದ್ದ ಸಿಐಡಿ: </strong>ಇದೇ ಪ್ರಕರಣದಲ್ಲಿ ಡಿಡಿಯುಟಿಟಿಎಲ್ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್.ಶಂಕರಪ್ಪ ಅವರನ್ನೂ ಸಿಐಡಿ ಮೇ 27ರಂದು ಬಂಧಿಸಿತ್ತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾಗಿದ್ದ ಶಂಕರಪ್ಪ, ಈ ಹಿಂದೆ ಡಿಡಿಯುಟಿಟಿಎಲ್ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>