<p><strong>ಬೆಂಗಳೂರು:</strong> ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದ ಆರೋಪದಡಿ ಬಾಲಕ ಸೇರಿ ನಾಲ್ವರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. </p><p>‘ಸುಲಿಗೆಗೆ ಯತ್ನ ಹಾಗೂ ಹಲ್ಲೆ ಸಂಬಂಧ ಕಾರ್ಮಿಕ ಭೀಮರಾಯ ಅವರು ದೂರು ನೀಡಿದ್ದರು. ಆರೋಪಿಗಳಾದ ಹೊಸಕೆರೆಹಳ್ಳಿಯ ಮುತ್ತುರಾಜು (23), ಮಹೇಶ್ (18) ಹಾಗೂ ಹರೀಶ್ (19) ಸೇರಿ ನಾಲ್ವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p><p>‘ಹೊಸಕೆರೆಹಳ್ಳಿಯ ಸಪ್ತಗಿರಿ ಬಡಾವಣೆಯಲ್ಲಿ ವಾಸವಿದ್ದ ದೂರುದಾರ ಭೀಮರಾಯ, ಫೆ.1ರಂದು ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಆಟೊದಲ್ಲಿ ಬಂದಿದ್ದ ಆರೋಪಿಗಳು, ಭೀಮರಾಯ ಅವರನ್ನು ಅಡ್ಡಗಟ್ಟಿ ಹಣ ನೀಡುವಂತೆ ಪೀಡಿಸಿ, ಹಾಕಿ ಸ್ಟಿಕ್ನಿಂದ ಭೀಮರಾಯ ಅವರ ತಲೆ, ಕೈಗೆ ಹೊಡೆದು ಪರಾರಿಯಾಗಿದ್ದರು. ಗಾಯಗೊಂಡಿದ್ದ ದೂರುದಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದ ಆರೋಪದಡಿ ಬಾಲಕ ಸೇರಿ ನಾಲ್ವರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. </p><p>‘ಸುಲಿಗೆಗೆ ಯತ್ನ ಹಾಗೂ ಹಲ್ಲೆ ಸಂಬಂಧ ಕಾರ್ಮಿಕ ಭೀಮರಾಯ ಅವರು ದೂರು ನೀಡಿದ್ದರು. ಆರೋಪಿಗಳಾದ ಹೊಸಕೆರೆಹಳ್ಳಿಯ ಮುತ್ತುರಾಜು (23), ಮಹೇಶ್ (18) ಹಾಗೂ ಹರೀಶ್ (19) ಸೇರಿ ನಾಲ್ವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p><p>‘ಹೊಸಕೆರೆಹಳ್ಳಿಯ ಸಪ್ತಗಿರಿ ಬಡಾವಣೆಯಲ್ಲಿ ವಾಸವಿದ್ದ ದೂರುದಾರ ಭೀಮರಾಯ, ಫೆ.1ರಂದು ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಆಟೊದಲ್ಲಿ ಬಂದಿದ್ದ ಆರೋಪಿಗಳು, ಭೀಮರಾಯ ಅವರನ್ನು ಅಡ್ಡಗಟ್ಟಿ ಹಣ ನೀಡುವಂತೆ ಪೀಡಿಸಿ, ಹಾಕಿ ಸ್ಟಿಕ್ನಿಂದ ಭೀಮರಾಯ ಅವರ ತಲೆ, ಕೈಗೆ ಹೊಡೆದು ಪರಾರಿಯಾಗಿದ್ದರು. ಗಾಯಗೊಂಡಿದ್ದ ದೂರುದಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>