<p><strong>ಬೆಂಗಳೂರು</strong>: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ಆಯೋಜಿಸಿರುವ ಕೃಷಿ ಸಂತೆ ಮತ್ತು ಗಾಳಿಪಟ ಉತ್ಸವಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಶನಿವಾರ ಚಾಲನೆ ನೀಡಿದರು.</p>.<p>‘ಜಿಕೆವಿಕೆ ಆವರಣದಲ್ಲಿ ಜೂನ್ನಲ್ಲಿ ಆಯೋಜಿಸಿದ್ದ ಕೃಷಿ ಸಂತೆ ಯಶಸ್ವಿಯಾಗಿದ್ದು, 15 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಹೀಗಾಗಿ, ಪ್ರತಿ ತಿಂಗಳ ನಾಲ್ಕನೇ ಶನಿವಾರ ಈ ಸಂತೆ ಆಯೋಜಿಸುವಂತೆ ಕುಲಪತಿ ಅವರಿಗೆ ಸಲಹೆ ನೀಡಿದ್ದೆ. ಜನತೆಗೆ ಕಡಿಮೆ ದರದಲ್ಲಿ ತಾಜಾ ಕೃಷಿ ಉತ್ಪನ್ನಗಳನ್ನು ನೇರವಾಗಿ ತಲುಪಿಸಲು ಇದು ಉತ್ತಮ ವೇದಿಕೆಯಾಗಿದೆ’ ಎಂದು ಅವರು ಹೇಳಿದರು.</p>.<p>‘ಕೃಷಿ ಸಂತೆಯಲ್ಲಿ ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ಧಿ ಸಾಮಗ್ರಿಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣಾ ಜೈವಿಕ ಕೀಟನಾಶಕಗಳು, ಕರಕುಶಲ ವಸ್ತುಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉತ್ಪನ್ನಗಳು, ಅಣಬೆ ಮತ್ತು ಜೇನುಕೃಷಿ ಸೇರಿದಂತೆ ಹಲವಾರು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಇದೆ’ ಎಂದು ತಿಳಿಸಿದರು.</p>.<p>‘ನಮ್ಮ ಪರಂಪರೆಯ ಸಾಂಸ್ಕೃತಿಕ ಸ್ಪರ್ಧೆಯ ಪ್ರತೀಕವಾಗಿರುವ ಗಾಳಿಪಟ ಉತ್ಸವವನ್ನು 34 ವರ್ಷಗಳ ಹಿಂದೆ ಎಲ್.ಎನ್. ನಾಗೇಗೌಡ ಅವರು ಪ್ರಾರಂಭಿಸಿ, ಅದನ್ನು ರಾಜ್ಯಮಟ್ಟದ ಉತ್ಸವವನ್ನಾಗಿಸಿದ್ದರು. ಇಂತಹ ಸ್ಪರ್ಧೆ ಮತ್ತು ಉತ್ಸವಗಳ ಮೂಲಕ ಯುವಜನತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯ ಪರಿಚಯಿಸುತ್ತಿರುವುದು ಶ್ಲಾಘನೀಯ’ ಎಂದು ಅಭಿಪ್ರಾಯಪಟ್ಟರು.</p>.<p>ಗಾಳಿಪಟ ಉತ್ಸವದಲ್ಲಿ ಸ್ಥಳೀಯ 36 ಹಾಗೂ ರಾಜ್ಯಮಟ್ಟದ 12 ತಂಡಗಳು ಭಾಗವಹಿಸಿದ್ದವು.</p>.<p>ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ.ಸುರೇಶ, ವಿಶ್ವವಿದ್ಯಾಲಯದ ವ್ಯವಸ್ಥಾಪನ ಮಂಡಳಿ ಸದಸ್ಯರಾದ ಟಿ.ಕೆ. ಪ್ರಭಾಕರ ಶೆಟ್ಟಿ, ಎಚ್.ಎಲ್. ಹರೀಶ್, ಎಂ. ಚಂದ್ರೇಗೌಡ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಹಿ.ಚಿ. ಬೋರಲಿಂಗಯ್ಯ, ಪರಿಷತ್ತಿನ ಟ್ರಸ್ಟಿ ಆದಿತ್ಯ ನಂಜರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ಆಯೋಜಿಸಿರುವ ಕೃಷಿ ಸಂತೆ ಮತ್ತು ಗಾಳಿಪಟ ಉತ್ಸವಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಶನಿವಾರ ಚಾಲನೆ ನೀಡಿದರು.</p>.<p>‘ಜಿಕೆವಿಕೆ ಆವರಣದಲ್ಲಿ ಜೂನ್ನಲ್ಲಿ ಆಯೋಜಿಸಿದ್ದ ಕೃಷಿ ಸಂತೆ ಯಶಸ್ವಿಯಾಗಿದ್ದು, 15 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಹೀಗಾಗಿ, ಪ್ರತಿ ತಿಂಗಳ ನಾಲ್ಕನೇ ಶನಿವಾರ ಈ ಸಂತೆ ಆಯೋಜಿಸುವಂತೆ ಕುಲಪತಿ ಅವರಿಗೆ ಸಲಹೆ ನೀಡಿದ್ದೆ. ಜನತೆಗೆ ಕಡಿಮೆ ದರದಲ್ಲಿ ತಾಜಾ ಕೃಷಿ ಉತ್ಪನ್ನಗಳನ್ನು ನೇರವಾಗಿ ತಲುಪಿಸಲು ಇದು ಉತ್ತಮ ವೇದಿಕೆಯಾಗಿದೆ’ ಎಂದು ಅವರು ಹೇಳಿದರು.</p>.<p>‘ಕೃಷಿ ಸಂತೆಯಲ್ಲಿ ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ಧಿ ಸಾಮಗ್ರಿಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣಾ ಜೈವಿಕ ಕೀಟನಾಶಕಗಳು, ಕರಕುಶಲ ವಸ್ತುಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉತ್ಪನ್ನಗಳು, ಅಣಬೆ ಮತ್ತು ಜೇನುಕೃಷಿ ಸೇರಿದಂತೆ ಹಲವಾರು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಇದೆ’ ಎಂದು ತಿಳಿಸಿದರು.</p>.<p>‘ನಮ್ಮ ಪರಂಪರೆಯ ಸಾಂಸ್ಕೃತಿಕ ಸ್ಪರ್ಧೆಯ ಪ್ರತೀಕವಾಗಿರುವ ಗಾಳಿಪಟ ಉತ್ಸವವನ್ನು 34 ವರ್ಷಗಳ ಹಿಂದೆ ಎಲ್.ಎನ್. ನಾಗೇಗೌಡ ಅವರು ಪ್ರಾರಂಭಿಸಿ, ಅದನ್ನು ರಾಜ್ಯಮಟ್ಟದ ಉತ್ಸವವನ್ನಾಗಿಸಿದ್ದರು. ಇಂತಹ ಸ್ಪರ್ಧೆ ಮತ್ತು ಉತ್ಸವಗಳ ಮೂಲಕ ಯುವಜನತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯ ಪರಿಚಯಿಸುತ್ತಿರುವುದು ಶ್ಲಾಘನೀಯ’ ಎಂದು ಅಭಿಪ್ರಾಯಪಟ್ಟರು.</p>.<p>ಗಾಳಿಪಟ ಉತ್ಸವದಲ್ಲಿ ಸ್ಥಳೀಯ 36 ಹಾಗೂ ರಾಜ್ಯಮಟ್ಟದ 12 ತಂಡಗಳು ಭಾಗವಹಿಸಿದ್ದವು.</p>.<p>ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ.ಸುರೇಶ, ವಿಶ್ವವಿದ್ಯಾಲಯದ ವ್ಯವಸ್ಥಾಪನ ಮಂಡಳಿ ಸದಸ್ಯರಾದ ಟಿ.ಕೆ. ಪ್ರಭಾಕರ ಶೆಟ್ಟಿ, ಎಚ್.ಎಲ್. ಹರೀಶ್, ಎಂ. ಚಂದ್ರೇಗೌಡ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಹಿ.ಚಿ. ಬೋರಲಿಂಗಯ್ಯ, ಪರಿಷತ್ತಿನ ಟ್ರಸ್ಟಿ ಆದಿತ್ಯ ನಂಜರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>