ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಮಹಡಿಯಿಂದ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

Published : 5 ಅಕ್ಟೋಬರ್ 2024, 16:12 IST
Last Updated : 5 ಅಕ್ಟೋಬರ್ 2024, 16:12 IST
ಫಾಲೋ ಮಾಡಿ
Comments

ಬೆಂಗಳೂರು: ಚಂದ್ರಾಲೇಔಟ್‌ನ ಅಪಾರ್ಟ್‌ಮೆಂಟ್‌ನ ಮಹಡಿಯಿಂದ ಕಾಲು ಜಾರಿ ಬಿದ್ದು ಆರ್‌ಟಿಒ ಅಧಿಕಾರಿ ಪುತ್ರಿಯೊಬ್ಬರು ಮೃತಪಟ್ಟಿದ್ಧಾರೆ.

ಚಂದ್ರಾಲೇಔಟ್ 2ನೇ ಹಂತದ ನಿಶ್ಚಿತಾ(20) ಮೃತ ಯುವತಿ.

ನಿಶ್ಚಿತಾ ಅವರ ತಾಯಿ ಶೋಭಾ ಅವರು ಬೆಂಗಳೂರು ನಗರ ಜಿಲ್ಲೆಯ ಆರ್‌ಟಿಒ ಜಂಟಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

‘ಎಂಜಿನಿಯರಿಂಗ್ ಓದುತ್ತಿದ್ದ ನಿಶ್ಚಿತಾ ಅವರು ಶುಕ್ರವಾರ ಸಂಜೆ 4 ಗಂಟೆಯ ಸುಮಾರಿಗೆ ಗೆಳತಿಯರ ಜತೆಗೆ ಮನೆಯ ಮಹಡಿಗೆ ತೆರಳಿದ್ದರು. ಅಲ್ಲಿ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕೆಂಗೇರಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಪೊಲೀಸರು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT