<p><strong>ಬೆಂಗಳೂರು</strong>: ‘ಎಸ್ಸಿ–ಎಸ್ಟಿ ಅಲೆಮಾರಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೇ ಅನ್ಯಾಯ ಮಾಡಲಾಗಿದೆ. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸಮುದಾಯದವರನ್ನು ಗುರುತಿಸಿ ನಾಮನಿರ್ದೇಶನ ಮಾಡಬೇಕು’ ಎಂದು ಎಸ್.ಸಿ– ಎಸ್.ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆದರ್ಶ್ ಯಲ್ಲಪ್ಪ, ‘ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಘಟಕಗಳನ್ನು ರಚಿಸಬೇಕು. ರಾಜ್ಯದಲ್ಲಿ ಅವಕಾಶ ವಂಚಿತ ಎಸ್.ಸಿಗೆ ಸೇರಿದ 51 ಹಾಗೂ ಎಸ್.ಟಿಗೆ 23 ಅಲೆಮಾರಿ ಜಾತಿಗಳಿದ್ದು, 25 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಈ ಸಮುದಾಯಗಳು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿವೆ’ ಎಂದರು.</p>.<p>‘ರಾಜ್ಯದಲ್ಲಿ ನಮ್ಮ ಸಮುದಾಯದವರಿಗೆ ರಾಜಕೀಯ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸಮುದಾಯದಲ್ಲಿ ಸಂಘಟಕರು, ವಿದ್ವಾಂಸರು, ತಜ್ಞರು, ಅನುಭವಿಗಳು ಇದ್ದರೂ ಸಹ, ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆ ಆಗಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.</p>.<p>‘ಇತ್ತೀಚೆಗೆ ಎಸ್.ಸಿ ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಆದರೆ, ಸಮರ್ಪಕ ಅನುದಾನ ನೀಡದೇ ವಂಚಿಸಲಾಗಿದೆ. ಅಲೆಮಾರಿಗಳ ಹೆಸರಿನಲ್ಲಿ ಅಲೆಮಾರಿ ಸಮುದಾಯಕ್ಕೆ ಸೇರದ ವ್ಯಕ್ತಿಗಳು ನಮ್ಮ ಅವಕಾಶಗಳನ್ನು ಕಬಳಿಸಲು ಹೊಂಚು ಹಾಕುತ್ತಿರುವುದು ಖಂಡನೀಯ’ ಎಂದರು. </p>.<p>ಒಕ್ಕೂಟದ ಕಾರ್ಯಾಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎಸ್ಸಿ–ಎಸ್ಟಿ ಅಲೆಮಾರಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೇ ಅನ್ಯಾಯ ಮಾಡಲಾಗಿದೆ. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸಮುದಾಯದವರನ್ನು ಗುರುತಿಸಿ ನಾಮನಿರ್ದೇಶನ ಮಾಡಬೇಕು’ ಎಂದು ಎಸ್.ಸಿ– ಎಸ್.ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆದರ್ಶ್ ಯಲ್ಲಪ್ಪ, ‘ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಘಟಕಗಳನ್ನು ರಚಿಸಬೇಕು. ರಾಜ್ಯದಲ್ಲಿ ಅವಕಾಶ ವಂಚಿತ ಎಸ್.ಸಿಗೆ ಸೇರಿದ 51 ಹಾಗೂ ಎಸ್.ಟಿಗೆ 23 ಅಲೆಮಾರಿ ಜಾತಿಗಳಿದ್ದು, 25 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಈ ಸಮುದಾಯಗಳು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿವೆ’ ಎಂದರು.</p>.<p>‘ರಾಜ್ಯದಲ್ಲಿ ನಮ್ಮ ಸಮುದಾಯದವರಿಗೆ ರಾಜಕೀಯ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸಮುದಾಯದಲ್ಲಿ ಸಂಘಟಕರು, ವಿದ್ವಾಂಸರು, ತಜ್ಞರು, ಅನುಭವಿಗಳು ಇದ್ದರೂ ಸಹ, ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆ ಆಗಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.</p>.<p>‘ಇತ್ತೀಚೆಗೆ ಎಸ್.ಸಿ ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಆದರೆ, ಸಮರ್ಪಕ ಅನುದಾನ ನೀಡದೇ ವಂಚಿಸಲಾಗಿದೆ. ಅಲೆಮಾರಿಗಳ ಹೆಸರಿನಲ್ಲಿ ಅಲೆಮಾರಿ ಸಮುದಾಯಕ್ಕೆ ಸೇರದ ವ್ಯಕ್ತಿಗಳು ನಮ್ಮ ಅವಕಾಶಗಳನ್ನು ಕಬಳಿಸಲು ಹೊಂಚು ಹಾಕುತ್ತಿರುವುದು ಖಂಡನೀಯ’ ಎಂದರು. </p>.<p>ಒಕ್ಕೂಟದ ಕಾರ್ಯಾಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>