ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೇ 31ರಂದು ನಾಲ್ವರು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿತ್ತು. ತನಿಖಾ ತಂಡವು ಈವರೆಗೆ 12 ಜನರನ್ನು ಬಂಧಿಸಿ, ₹ 34 ಕೋಟಿ ಮೌಲ್ಯದ ನಗದು, ಇತರ ಸ್ವತ್ತುಗಳನ್ನು ವಶಕ್ಕೆ ಪಡೆದಿದೆ. ಎಸ್ಐಟಿ ತನಿಖೆ ಸರಿಯಾದ ಹಾದಿಯಲ್ಲಿದೆ’ ಎಂದರು.