<p><strong>ಬೆಂಗಳೂರು:</strong> ‘ಕರ್ನಾಟಕ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡುವುದರ ಮೂಲಕ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ₹6 ಸಾವಿರದಿಂದ ₹7 ಸಾವಿರ ಆದಾಯ ಹಂಚಿಕೆ ಮಾಡುತ್ತಿದೆ’ ಎಂದು ಪ್ರಾಧ್ಯಾಪಕ ಕೃಷ್ಣರಾಜ್ ಹೇಳಿದರು. </p>.<p>ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶದಲ್ಲಿ ಭಾನುವಾರ ನಡೆದ ‘ಆದಾಯದ ಅಸಮಾನತೆ ಮತ್ತು ಸಾರ್ವತ್ರಿಕ ಮೂಲ ಆದಾಯ’ ಎಂಬ ಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರದ ಪಂಚ ಗ್ಯಾರಂಟಿಗಳಿಂದ ಪ್ರತಿಯೊಬ್ಬರೂ ಕನಿಷ್ಠ ಆದಾಯ ಪಡೆಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ಮೂಲಕ ಕಾರ್ಪೊರೇಟ್ ಮತ್ತು ಕೈಗಾರಿಕಾ ವಲಯಗಳನ್ನು ಬೆಂಬಲಿಸುತ್ತಿದೆ. ಕೇಂದ್ರ ಸರ್ಕಾರದ ನೀತಿಗಳು ಕೈಗಾರಿಕೆ ಹಾಗೂ ಕಾರ್ಪೊರೇಟ್ ಕ್ಷೇತ್ರಗಳಿಗೆ ಪೂರಕವಾಗಿವೆ’ ಎಂದರು.</p>.<p>ಶಿಕ್ಷಣ ತಜ್ಞ, ಯುಜಿಸಿ ಮಾಜಿ ಅಧ್ಯಕ್ಷ ಸುಖದೇವ್ ಥೋರಟ್ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ತಜ್ಞ ಸಂತೋಷ್ ಮೆಹ್ರೋತ್ರಾ, ಕಾನೂನು ತಜ್ಞ ಬಾಬು ಮ್ಯಾಥ್ಯೂ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡುವುದರ ಮೂಲಕ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ₹6 ಸಾವಿರದಿಂದ ₹7 ಸಾವಿರ ಆದಾಯ ಹಂಚಿಕೆ ಮಾಡುತ್ತಿದೆ’ ಎಂದು ಪ್ರಾಧ್ಯಾಪಕ ಕೃಷ್ಣರಾಜ್ ಹೇಳಿದರು. </p>.<p>ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶದಲ್ಲಿ ಭಾನುವಾರ ನಡೆದ ‘ಆದಾಯದ ಅಸಮಾನತೆ ಮತ್ತು ಸಾರ್ವತ್ರಿಕ ಮೂಲ ಆದಾಯ’ ಎಂಬ ಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರದ ಪಂಚ ಗ್ಯಾರಂಟಿಗಳಿಂದ ಪ್ರತಿಯೊಬ್ಬರೂ ಕನಿಷ್ಠ ಆದಾಯ ಪಡೆಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ಮೂಲಕ ಕಾರ್ಪೊರೇಟ್ ಮತ್ತು ಕೈಗಾರಿಕಾ ವಲಯಗಳನ್ನು ಬೆಂಬಲಿಸುತ್ತಿದೆ. ಕೇಂದ್ರ ಸರ್ಕಾರದ ನೀತಿಗಳು ಕೈಗಾರಿಕೆ ಹಾಗೂ ಕಾರ್ಪೊರೇಟ್ ಕ್ಷೇತ್ರಗಳಿಗೆ ಪೂರಕವಾಗಿವೆ’ ಎಂದರು.</p>.<p>ಶಿಕ್ಷಣ ತಜ್ಞ, ಯುಜಿಸಿ ಮಾಜಿ ಅಧ್ಯಕ್ಷ ಸುಖದೇವ್ ಥೋರಟ್ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ತಜ್ಞ ಸಂತೋಷ್ ಮೆಹ್ರೋತ್ರಾ, ಕಾನೂನು ತಜ್ಞ ಬಾಬು ಮ್ಯಾಥ್ಯೂ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>