<p><strong>ಯಲಹಂಕ</strong><strong>: </strong><strong>ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ</strong><strong>, </strong><strong>ನಿಂದನೆ, ಅಗೌರವ ತೋರಿದವರ ವಿರುದ್ಧ ಕ್ರಮಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಲಾಗಿದೆ</strong><strong>. </strong><strong>ನಕಲಿ ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು</strong><strong>.</strong></p>.<p><strong>ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ನವರತ್ನ ಅಗ್ರಹಾರ ಬಳಿ ಆಯೋಜಿಸಿದ್ದ ಬೆಂಗಳೂರು ಸರ್ಜಿಕಲ್ ಸೊಸೈಟಿಯ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಸಾಧಕ ವೈದ್ಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</strong></p>.<p><strong>ಬೆಂಗಳೂರಿನ ಸರ್ಜಿಕಲ್ ಸೊಸೈಟಿಗೆ 50 ವರ್ಷ ತುಂಬಿರುವುದು ದೊಡ್ಡ ಸಾಧನೆಯಾಗಿದೆ</strong><strong>. </strong><strong>ಸೊಸೈಟಿಯ ಕಚೇರಿಗಾಗಿ ಜಾಗ ನೀಡುವಂತೆ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. </strong><strong>ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು</strong><strong>.</strong></p>.<p><strong>ಬೆಂಗಳೂರು ಸರ್ಜಿಕಲ್ ಸೊಸೈಟಿಯ ಅಧ್ಯಕ್ಷ ಡಾ. ರಾಜಶೇಖರ್ ಸಿ.ಜಾಕಾ, ಮುಖ್ಯಮಂತ್ರಿಯವರ ಗೌರವ ವೈದ್ಯಕೀಯ ಸಲಹೆಗಾರ ಡಾ</strong><strong>. </strong><strong>ರವಿಕುಮಾರ್</strong><strong>, </strong><strong>ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ</strong><strong>.</strong><strong>ಎಂ</strong><strong>.</strong><strong>ಕೆ</strong><strong>.</strong><strong>ರಮೇಶ್</strong><strong>, </strong><strong>ಬೆಂಗಳೂರು ಸರ್ಜಿಕಲ್ ಸೊಸೈಟಿಯ ಕಾರ್ಯದರ್ಶಿ ಡಾ</strong><strong>.</strong><strong>ಮುನಿರೆಡ್ಡಿ </strong><strong>ಎಂ</strong><strong>.</strong><strong>ವಿ. ಉಪಸ್ಥಿತರಿದ್ದರು</strong><strong>.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong><strong>: </strong><strong>ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ</strong><strong>, </strong><strong>ನಿಂದನೆ, ಅಗೌರವ ತೋರಿದವರ ವಿರುದ್ಧ ಕ್ರಮಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಲಾಗಿದೆ</strong><strong>. </strong><strong>ನಕಲಿ ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು</strong><strong>.</strong></p>.<p><strong>ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ನವರತ್ನ ಅಗ್ರಹಾರ ಬಳಿ ಆಯೋಜಿಸಿದ್ದ ಬೆಂಗಳೂರು ಸರ್ಜಿಕಲ್ ಸೊಸೈಟಿಯ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಸಾಧಕ ವೈದ್ಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</strong></p>.<p><strong>ಬೆಂಗಳೂರಿನ ಸರ್ಜಿಕಲ್ ಸೊಸೈಟಿಗೆ 50 ವರ್ಷ ತುಂಬಿರುವುದು ದೊಡ್ಡ ಸಾಧನೆಯಾಗಿದೆ</strong><strong>. </strong><strong>ಸೊಸೈಟಿಯ ಕಚೇರಿಗಾಗಿ ಜಾಗ ನೀಡುವಂತೆ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. </strong><strong>ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು</strong><strong>.</strong></p>.<p><strong>ಬೆಂಗಳೂರು ಸರ್ಜಿಕಲ್ ಸೊಸೈಟಿಯ ಅಧ್ಯಕ್ಷ ಡಾ. ರಾಜಶೇಖರ್ ಸಿ.ಜಾಕಾ, ಮುಖ್ಯಮಂತ್ರಿಯವರ ಗೌರವ ವೈದ್ಯಕೀಯ ಸಲಹೆಗಾರ ಡಾ</strong><strong>. </strong><strong>ರವಿಕುಮಾರ್</strong><strong>, </strong><strong>ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ</strong><strong>.</strong><strong>ಎಂ</strong><strong>.</strong><strong>ಕೆ</strong><strong>.</strong><strong>ರಮೇಶ್</strong><strong>, </strong><strong>ಬೆಂಗಳೂರು ಸರ್ಜಿಕಲ್ ಸೊಸೈಟಿಯ ಕಾರ್ಯದರ್ಶಿ ಡಾ</strong><strong>.</strong><strong>ಮುನಿರೆಡ್ಡಿ </strong><strong>ಎಂ</strong><strong>.</strong><strong>ವಿ. ಉಪಸ್ಥಿತರಿದ್ದರು</strong><strong>.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>