‘ಚುನಾವಣಾ ಪ್ರಚಾರಕ್ಕೆಂದು ಆಯೋಗ ₹ 25 ಲಕ್ಷ ನಿಗದಿಪಡಿಸಿತ್ತು. ಆದರೆ, ಮುನಿರತ್ನ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಾಗಿ ₹ 3.38 ಲಕ್ಷ ವ್ಯಯಿಸಿದ್ದಾರೆ. ಮತದಾರರಿಗೆ ಸೀರೆ, ಕುಕ್ಕರ್ ಹಂಚಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಆದ್ದರಿಂದ ಅವರ ಶಾಸಕ ಸ್ಥಾನ ಅಸಿಂಧುಗೊಳಿಸಬೇಕು. ಚುನಾವಣೆಯಲ್ಲಿ ಎರಡನೇ ಅತಿ ಹೆಚ್ಚು ಮತ ಗಳಿಸಿರುವ ಅಭ್ಯರ್ಥಿಯನ್ನು ಜಯಶಾಲಿಯಾಗಿ ಘೋಷಿಸಬೇಕು’ ಎಂದು ಕೋರಿದರು.