<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಗೃಹಸಚಿವ ಡಾ.ಜಿ. ಪರಮೇಶ್ವರ ಅವರು ವಿಫಲರಾಗಿದ್ದಾರೆ’ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಲಾಯಿತು.</p>.<p>‘ರಾಜ್ಯದಲ್ಲಿ ಅಕ್ರಮ ದಂಧೆಗಳು ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿವೆ. ಈ ದಂಧೆಗೆ ಪೊಲೀಸರ ಕೃಪಾ ಕಟಾಕ್ಷ ಇದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ತಕ್ಷಣವೇ ಸ್ಪಂದಿಸಲು ವಿಫಲರಾಗಿದ್ದಾರೆ. ಪ್ರಕರಣವು ಸಾರ್ವಜನಿಕವಾಗಿ ಮಾಧ್ಯಮದಲ್ಲಿ ವರದಿಯಾದ ನಂತರ ಪೊಲೀಸರು ಎಚ್ಚೆತ್ತು ತನಿಖೆ ಮಾಡಿದ್ದಾರೆ. ಈ ಪ್ರಕರಣವು ಸೇರಿದಂತೆ ರಾಜ್ಯದಲ್ಲಿ ನಿರಂತರವಾಗಿ ಹಲವು ಪ್ರಕರಣಗಳು ನಡೆಯುತ್ತಿವೆ. ಇವುಗಳನ್ನು ತಡೆಯಲು ಹಾಗೂ ಆರೋಪಿಗಳ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ಧಾರೆ’ ಎಂದು ಪ್ರತಿಭಟನಕಾರರು ಆಪಾದಿಸಿದರು.</p>.<p>ಕೆಆರ್ಎಸ್ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ ಮಾತನಾಡಿ, ‘ಪರಮೇಶ್ವರ ಅವರಿಗೆ ತಮ್ಮ ಇಲಾಖೆಯ ಮೇಲೆ ಹಿಡಿತವಿಲ್ಲ. ತಮಗೂ ಗೃಹ ಇಲಾಖೆಗೂ ಸಂಬಂಧವಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಆದ್ದರಿಂದ, ಅವರು ತಕ್ಷಣವೇ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ಮಾತನಾಡಿ, ‘ಕೆಆರ್ಎಸ್ ಪಕ್ಷವು ಧರ್ಮಸ್ಥಳದಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿತ್ತು. ರಾಜ್ಯದ ಎಲ್ಲಾ ಕಡೆಯಿಂದ ಆಕ್ರೋಶ ವ್ಯಕ್ತವಾಗಿತ್ತು. ಆದರೆ, ಇಲ್ಲಿಯವರೆಗೂ ಅದಕ್ಕೆ ಸಂಬಂಧಿಸಿದಂತೆ ಯಾವೊಂದು ಕ್ರಮವೂ ಆಗಿಲ್ಲ’ ಎಂದು ಹೇಳಿದರು.</p>.<p>ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್., ರಾಜ್ಯ ಕಾರ್ಯಾದರ್ಶಿಗಳಾದ ಮಂಜುನಾಥ ಎಸ್, ವಿ.ಅರ್.ಮರಾಠೆ, ಸೊಣ್ಣಪ್ಪಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಎಲ್.ಜೀವನ್, ಬಿ.ಜಿ.ಕುಂಬಾರ್, ಕೇಶವಮೂರ್ತಿ, ರಾಜ್ಯ ಯುವ ಘಟಕದ ರಾಜ್ಯ ಅಧ್ಯಕ್ಷರಾದ ಜನನಿ ವತ್ಸಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಗೃಹಸಚಿವ ಡಾ.ಜಿ. ಪರಮೇಶ್ವರ ಅವರು ವಿಫಲರಾಗಿದ್ದಾರೆ’ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಲಾಯಿತು.</p>.<p>‘ರಾಜ್ಯದಲ್ಲಿ ಅಕ್ರಮ ದಂಧೆಗಳು ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿವೆ. ಈ ದಂಧೆಗೆ ಪೊಲೀಸರ ಕೃಪಾ ಕಟಾಕ್ಷ ಇದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ತಕ್ಷಣವೇ ಸ್ಪಂದಿಸಲು ವಿಫಲರಾಗಿದ್ದಾರೆ. ಪ್ರಕರಣವು ಸಾರ್ವಜನಿಕವಾಗಿ ಮಾಧ್ಯಮದಲ್ಲಿ ವರದಿಯಾದ ನಂತರ ಪೊಲೀಸರು ಎಚ್ಚೆತ್ತು ತನಿಖೆ ಮಾಡಿದ್ದಾರೆ. ಈ ಪ್ರಕರಣವು ಸೇರಿದಂತೆ ರಾಜ್ಯದಲ್ಲಿ ನಿರಂತರವಾಗಿ ಹಲವು ಪ್ರಕರಣಗಳು ನಡೆಯುತ್ತಿವೆ. ಇವುಗಳನ್ನು ತಡೆಯಲು ಹಾಗೂ ಆರೋಪಿಗಳ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ಧಾರೆ’ ಎಂದು ಪ್ರತಿಭಟನಕಾರರು ಆಪಾದಿಸಿದರು.</p>.<p>ಕೆಆರ್ಎಸ್ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ ಮಾತನಾಡಿ, ‘ಪರಮೇಶ್ವರ ಅವರಿಗೆ ತಮ್ಮ ಇಲಾಖೆಯ ಮೇಲೆ ಹಿಡಿತವಿಲ್ಲ. ತಮಗೂ ಗೃಹ ಇಲಾಖೆಗೂ ಸಂಬಂಧವಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಆದ್ದರಿಂದ, ಅವರು ತಕ್ಷಣವೇ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ ಮಾತನಾಡಿ, ‘ಕೆಆರ್ಎಸ್ ಪಕ್ಷವು ಧರ್ಮಸ್ಥಳದಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿತ್ತು. ರಾಜ್ಯದ ಎಲ್ಲಾ ಕಡೆಯಿಂದ ಆಕ್ರೋಶ ವ್ಯಕ್ತವಾಗಿತ್ತು. ಆದರೆ, ಇಲ್ಲಿಯವರೆಗೂ ಅದಕ್ಕೆ ಸಂಬಂಧಿಸಿದಂತೆ ಯಾವೊಂದು ಕ್ರಮವೂ ಆಗಿಲ್ಲ’ ಎಂದು ಹೇಳಿದರು.</p>.<p>ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್., ರಾಜ್ಯ ಕಾರ್ಯಾದರ್ಶಿಗಳಾದ ಮಂಜುನಾಥ ಎಸ್, ವಿ.ಅರ್.ಮರಾಠೆ, ಸೊಣ್ಣಪ್ಪಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಎಲ್.ಜೀವನ್, ಬಿ.ಜಿ.ಕುಂಬಾರ್, ಕೇಶವಮೂರ್ತಿ, ರಾಜ್ಯ ಯುವ ಘಟಕದ ರಾಜ್ಯ ಅಧ್ಯಕ್ಷರಾದ ಜನನಿ ವತ್ಸಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>