<p><strong>ಬೆಂಗಳೂರು</strong>: ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್ವೊಂದಕ್ಕೆ ನುಗ್ಗಿದ್ದ ಮೂವರು ದುಷ್ಕರ್ಮಿಗಳು, ಮಾಲೀಕರು ಹಾಗೂ ಸಿಬ್ಬಂದಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಸುಲಿಗೆಗೆ ಯತ್ನಿಸಿ ಪರಾರಿಯಾಗಿದ್ದಾರೆ.</p>.<p>ಭಾನುವಾರ ರಾತ್ರಿ ನಡೆದಿರುವ ಆರೋಪಿಗಳ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಹೋಟೆಲ್ ಮಾಲೀಕ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.</p>.<p>‘ಕಮ್ಮನಹಳ್ಳಿಯಲ್ಲಿರುವ ಹೋಟೆಲ್ಗೆ ಮೂವರು ದುಷ್ಕರ್ಮಿಗಳು ನುಗ್ಗಿದ್ದರು. ಕೌಂಟರ್ನಲ್ಲಿದ್ದ ಮಾಲೀಕನ ಜೊತೆ ಸುಖಾಸುಮ್ಮನೇ ಜಗಳ ತೆಗೆದಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ ಚಾಕು ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ಸಿಬ್ಬಂದಿಯನ್ನೂ ಬೆದರಿಸಿ ಸುಲಿಗೆಗೆ ಯತ್ನಿಸಿದ್ದರು. ಜನರು ಸೇರುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>‘ದುಷ್ಕರ್ಮಿಗಳು ಹೋಟೆಲ್ಗೆ ಆಗಾಗ ಬಂದು ಬೆದರಿಕೆ ಹಾಕುತ್ತಿರುವ ಘಟನೆಗಳು ನಡೆಯುತ್ತಿರುವ ಬಗ್ಗೆ ಮಾಲೀಕರು ತಿಳಿಸಿದ್ದಾರೆ. ಹೋಟೆಲ್ನಲ್ಲಿ ನಡೆದಿರುವ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್ವೊಂದಕ್ಕೆ ನುಗ್ಗಿದ್ದ ಮೂವರು ದುಷ್ಕರ್ಮಿಗಳು, ಮಾಲೀಕರು ಹಾಗೂ ಸಿಬ್ಬಂದಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಸುಲಿಗೆಗೆ ಯತ್ನಿಸಿ ಪರಾರಿಯಾಗಿದ್ದಾರೆ.</p>.<p>ಭಾನುವಾರ ರಾತ್ರಿ ನಡೆದಿರುವ ಆರೋಪಿಗಳ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಹೋಟೆಲ್ ಮಾಲೀಕ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.</p>.<p>‘ಕಮ್ಮನಹಳ್ಳಿಯಲ್ಲಿರುವ ಹೋಟೆಲ್ಗೆ ಮೂವರು ದುಷ್ಕರ್ಮಿಗಳು ನುಗ್ಗಿದ್ದರು. ಕೌಂಟರ್ನಲ್ಲಿದ್ದ ಮಾಲೀಕನ ಜೊತೆ ಸುಖಾಸುಮ್ಮನೇ ಜಗಳ ತೆಗೆದಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ ಚಾಕು ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ಸಿಬ್ಬಂದಿಯನ್ನೂ ಬೆದರಿಸಿ ಸುಲಿಗೆಗೆ ಯತ್ನಿಸಿದ್ದರು. ಜನರು ಸೇರುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>‘ದುಷ್ಕರ್ಮಿಗಳು ಹೋಟೆಲ್ಗೆ ಆಗಾಗ ಬಂದು ಬೆದರಿಕೆ ಹಾಕುತ್ತಿರುವ ಘಟನೆಗಳು ನಡೆಯುತ್ತಿರುವ ಬಗ್ಗೆ ಮಾಲೀಕರು ತಿಳಿಸಿದ್ದಾರೆ. ಹೋಟೆಲ್ನಲ್ಲಿ ನಡೆದಿರುವ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>