<p><strong>ಬೆಂಗಳೂರು</strong>: ಮನೆ ಇಲ್ಲದವರಿಗೆ ಸೂರನ್ನು ಕಲ್ಪಿಸುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿ ಯೋಜನೆಯಡಿ 2.90 ಲಕ್ಷ ಫಲಾನುಭವಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಶಾಸಕರು ಫಲಾನುಭವಿಗಳ ಪಟ್ಟಿಯನ್ನು ನಿಗದಿತ ಅವಧಿಯಲ್ಲಿ ನೀಡದಿದ್ದರೆ, ಕೇಂದ್ರದ ಅನುದಾನ ವಾಪಸ್ ಹೋಗಲಿದೆ.</p>.<p>ಈ ಬಗ್ಗೆ ಮಾಹಿತಿ ಪಡೆದ ವಸತಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್, ಗ್ರಾಮಸಭೆ ಹಾಗೂ ಶಾಸಕರ ಸಮಿತಿ ಈ ಫಲಾನುಭವಿಗಳನ್ನು ಅಂತಿಮಗೊಳಿಸಿ, ಪಟ್ಟಿಯನ್ನು ಒಂದು ವಾರದಲ್ಲಿ ಕಳುಹಿಸಿಕೊಡಲು ಸೂಚಿಸಿದ್ದಾರೆ.</p>.<p>ನಗರ ಮತ್ತು ಗ್ರಾಮೀಣ ಸೇರಿ ವಿವಿಧ ಯೋಜನೆಗಳಲ್ಲಿ ಒಟ್ಟು 2,90,878 ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ. ಅ ಬಗ್ಗೆಯೂ ಶಾಸಕರಿಗೆ ಮನವಿ ಮಾಡಲಾಗಿದೆ. ಫಲಾನುಭವಿಗಳ ಪಟ್ಟಿ ಬಂದ ಕೂಡಲೇ ಹಂಚಿಕೆ ಮಾಡಲಾಗುವುದು. ಇದೇ 20ರೊಳಗೆ ಹಂಚಿಕೆ ಮಾಡಲಿದ್ದರೆ, ಯೋಜನೆ ಕೇಂದ್ರಕ್ಕೆ ವಾಪಸ್ ಹೋಗಲಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ಪ್ರಧಾನಮಂತ್ರಿ ಗ್ರಾಮೀಣ ಅವಾಜ್ ಯೋಜನೆಯಡಿ ಗ್ರಾಮೀಣ ಭಾಗದ ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ಯೋಜನೆಯಡಿ ರಾಜ್ಯಕ್ಕೆ 1.41 ಲಕ್ಷ ಮನೆ ಹಂಚಿಕೆಯಾಗಿದೆ. ಇದುವರೆಗೂ 63 ಸಾವಿರ ಮನೆಗೆ ಫಲಾನುಭವಿಗಳ ಆಯ್ಕೆಯಾಗಿದೆ. 78 ಸಾವಿರ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ ಎಂದಿದ್ದಾರೆ.</p>.<p>ಗ್ರಾಮಸಭೆಗಳಿಗೆ ಈ ಕುರಿತು ಶಾಸಕರು ಸೂಚನೆ ನೀಡಿ ಒಂದು ವಾರದಲ್ಲಿ ಪಟ್ಟಿ ಅಂತಿಮಗೊಳಿಸಿದರೆ ಯೋಜನೆಯ ಲಾಭ ರಾಜ್ಯದ ವಸತಿ ರಹಿತರಿಗೆ ಸಿಗುತ್ತದೆ. ಆನ್ಲೈನ್ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗೆ 60ಃ40 ಅನುಪಾತದಲ್ಲಿ ಅನುದಾನ ನೀಡಲಿವೆ. ಸಾಮಾನ್ಯ ವರ್ಗಕ್ಕೆ ₹1.03 ಲಕ್ಷ, ಎಸ್ಸಿ–ಎಸ್ಟಿ ಸಮುದಾಯಕ್ಕೆ ₹1.25ಲಕ್ಷ ಸಬ್ಸಿಡಿ ಸಿಗಲಿದೆ. 150ರಿಂದ 700 ಚದರಡಿವರೆಗೆ ವೈಯಕ್ತಿಕ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮನೆ ಇಲ್ಲದವರಿಗೆ ಸೂರನ್ನು ಕಲ್ಪಿಸುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿ ಯೋಜನೆಯಡಿ 2.90 ಲಕ್ಷ ಫಲಾನುಭವಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಶಾಸಕರು ಫಲಾನುಭವಿಗಳ ಪಟ್ಟಿಯನ್ನು ನಿಗದಿತ ಅವಧಿಯಲ್ಲಿ ನೀಡದಿದ್ದರೆ, ಕೇಂದ್ರದ ಅನುದಾನ ವಾಪಸ್ ಹೋಗಲಿದೆ.</p>.<p>ಈ ಬಗ್ಗೆ ಮಾಹಿತಿ ಪಡೆದ ವಸತಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್, ಗ್ರಾಮಸಭೆ ಹಾಗೂ ಶಾಸಕರ ಸಮಿತಿ ಈ ಫಲಾನುಭವಿಗಳನ್ನು ಅಂತಿಮಗೊಳಿಸಿ, ಪಟ್ಟಿಯನ್ನು ಒಂದು ವಾರದಲ್ಲಿ ಕಳುಹಿಸಿಕೊಡಲು ಸೂಚಿಸಿದ್ದಾರೆ.</p>.<p>ನಗರ ಮತ್ತು ಗ್ರಾಮೀಣ ಸೇರಿ ವಿವಿಧ ಯೋಜನೆಗಳಲ್ಲಿ ಒಟ್ಟು 2,90,878 ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ. ಅ ಬಗ್ಗೆಯೂ ಶಾಸಕರಿಗೆ ಮನವಿ ಮಾಡಲಾಗಿದೆ. ಫಲಾನುಭವಿಗಳ ಪಟ್ಟಿ ಬಂದ ಕೂಡಲೇ ಹಂಚಿಕೆ ಮಾಡಲಾಗುವುದು. ಇದೇ 20ರೊಳಗೆ ಹಂಚಿಕೆ ಮಾಡಲಿದ್ದರೆ, ಯೋಜನೆ ಕೇಂದ್ರಕ್ಕೆ ವಾಪಸ್ ಹೋಗಲಿದೆ ಎಂದು ಸಚಿವರು ತಿಳಿಸಿದ್ದಾರೆ.</p>.<p>ಪ್ರಧಾನಮಂತ್ರಿ ಗ್ರಾಮೀಣ ಅವಾಜ್ ಯೋಜನೆಯಡಿ ಗ್ರಾಮೀಣ ಭಾಗದ ವಸತಿ ರಹಿತರಿಗೆ ಮನೆ ಕಟ್ಟಿಸಿಕೊಡುವ ಯೋಜನೆಯಡಿ ರಾಜ್ಯಕ್ಕೆ 1.41 ಲಕ್ಷ ಮನೆ ಹಂಚಿಕೆಯಾಗಿದೆ. ಇದುವರೆಗೂ 63 ಸಾವಿರ ಮನೆಗೆ ಫಲಾನುಭವಿಗಳ ಆಯ್ಕೆಯಾಗಿದೆ. 78 ಸಾವಿರ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಮಾಡಬೇಕಾಗಿದೆ ಎಂದಿದ್ದಾರೆ.</p>.<p>ಗ್ರಾಮಸಭೆಗಳಿಗೆ ಈ ಕುರಿತು ಶಾಸಕರು ಸೂಚನೆ ನೀಡಿ ಒಂದು ವಾರದಲ್ಲಿ ಪಟ್ಟಿ ಅಂತಿಮಗೊಳಿಸಿದರೆ ಯೋಜನೆಯ ಲಾಭ ರಾಜ್ಯದ ವಸತಿ ರಹಿತರಿಗೆ ಸಿಗುತ್ತದೆ. ಆನ್ಲೈನ್ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗೆ 60ಃ40 ಅನುಪಾತದಲ್ಲಿ ಅನುದಾನ ನೀಡಲಿವೆ. ಸಾಮಾನ್ಯ ವರ್ಗಕ್ಕೆ ₹1.03 ಲಕ್ಷ, ಎಸ್ಸಿ–ಎಸ್ಟಿ ಸಮುದಾಯಕ್ಕೆ ₹1.25ಲಕ್ಷ ಸಬ್ಸಿಡಿ ಸಿಗಲಿದೆ. 150ರಿಂದ 700 ಚದರಡಿವರೆಗೆ ವೈಯಕ್ತಿಕ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>