<p><strong>ಕೆ.ಆರ್.ಪುರ:</strong> ರಾಮಮೂರ್ತಿನಗರ ವಾರ್ಡಿನ ಹಲವು ಬಡಾವಣೆಗಳಲ್ಲಿ ಬಿಬಿಎಂಪಿ ಸರಿಯಾದ ರೀತಿಯಲ್ಲಿ ಕಸ ನಿರ್ವಹಣೆ ಮಾಡದೇ ಇರುವುದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಬೀಳುತ್ತಿದೆ. ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ಹರಡುವ ಭೀತಿ ಎದುರಾಗಿದೆ.</p>.<p>ರಾಮಮೂರ್ತಿನಗರ, ಎನ್.ಆರ್.ಐ ಬಡಾವಣೆ, ಕಲ್ಕೆರೆ, ಕನಕನಗರ, ಶಾಂತಿ ಬಡಾವಣೆ, ಕೌದೇನಹಳ್ಳಿ, ಕಲ್ಕೆರೆ ಮುಖ್ಯರಸ್ತೆ ಮುಂತಾದೆಡೆಗಳಲ್ಲಿ ಕಸ ವಿಲೇವಾರಿಯನ್ನು ಬಿಬಿಎಂಪಿ ಮಾಡದೇ ಇರುವುದರಿಂದ ಈ ಸಮಸ್ಯೆ ಉಂಟಾಗಿದೆ.</p>.<p>ಬಿಬಿಎಂಪಿಯವರು ಕಸ ಒಯ್ಯಲು ಬಾರದೇ ಇರುವುದರಿಂದ ಜನರು ರಸ್ತೆ ಮೇಲೆಯೇ ಕಸ ಬಿಸಾಡಿ ಹೋಗುತ್ತಿದ್ದಾರೆ. ಜಾನುವಾರುಗಳು ಮತ್ತು ಬೀದಿನಾಯಿಗಳು ಆಹಾರ ಹುಡುಕಲು ಬಂದು ಕಸವನ್ನು ರಸ್ತೆಗೆ ಚೆಲ್ಲುತ್ತಿವೆ. </p>.<p>‘ರಾಮಮೂರ್ತಿನಗರದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಕೆಲದಿನಗಳಿಂದ ಬಿಬಿಎಂಪಿ ಕಸ ವಿಲೇವಾರಿ ಮಾಡುತ್ತಿಲ್ಲ. ಮಹದೇವಪುರ ವಲಯದಲ್ಲಿ ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದೆ’ ಎಂದು ಶಾಂತಿ ಬಡಾವಣೆ ನಿವಾಸಿ ಶಿವಕುಮಾರ್ ತಿಳಿಸಿದರು.</p>.<p>‘ಕಸ ಸರಿಯಾಗಿ ವಿಲೇವಾರಿಯಾಗುತ್ತಿಲ್ಲ. ಮಳೆಗಾಲದಲ್ಲಿ ಕಸ ಕೊಳೆಯುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೊಳ್ಳೆಗಳ ನಿಯಂತ್ರಣ ಮಾಡುವ ಔಷಧ ಸಿಂಪಡಿವ ಕೆಲಸವನ್ನೂ ಬಿಬಿಎಂಪಿ ಮಾಡಿಲ್ಲ. ಜನರು ಕಾಯಿಲೆ ಬಿದ್ದು, ಆಸ್ಪತ್ರೆಗೆ ಹೋಗುವುದು ಹೆಚ್ಚಾಗಿದೆ’ ಎಂದು ಬಿಬಿಎಂಪಿ ಮಾಜಿ ಸದಸ್ಯ ಕಲ್ಕೆರೆ ಶ್ರೀನಿವಾಸ್ ದೂರಿದರು.</p>.<p>‘ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಔಷಧ ಬೇಕಾದಷ್ಟು ಸಂಗ್ರಹವಿದ್ದರೂ, ‘ಇಲ್ಲ’ ಎಂದು ಉತ್ತರಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ರಾಮಮೂರ್ತಿನಗರ ವಾರ್ಡಿನ ಹಲವು ಬಡಾವಣೆಗಳಲ್ಲಿ ಬಿಬಿಎಂಪಿ ಸರಿಯಾದ ರೀತಿಯಲ್ಲಿ ಕಸ ನಿರ್ವಹಣೆ ಮಾಡದೇ ಇರುವುದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಬೀಳುತ್ತಿದೆ. ಸೊಳ್ಳೆಗಳು ಉತ್ಪತ್ತಿಯಾಗಿ ರೋಗ ಹರಡುವ ಭೀತಿ ಎದುರಾಗಿದೆ.</p>.<p>ರಾಮಮೂರ್ತಿನಗರ, ಎನ್.ಆರ್.ಐ ಬಡಾವಣೆ, ಕಲ್ಕೆರೆ, ಕನಕನಗರ, ಶಾಂತಿ ಬಡಾವಣೆ, ಕೌದೇನಹಳ್ಳಿ, ಕಲ್ಕೆರೆ ಮುಖ್ಯರಸ್ತೆ ಮುಂತಾದೆಡೆಗಳಲ್ಲಿ ಕಸ ವಿಲೇವಾರಿಯನ್ನು ಬಿಬಿಎಂಪಿ ಮಾಡದೇ ಇರುವುದರಿಂದ ಈ ಸಮಸ್ಯೆ ಉಂಟಾಗಿದೆ.</p>.<p>ಬಿಬಿಎಂಪಿಯವರು ಕಸ ಒಯ್ಯಲು ಬಾರದೇ ಇರುವುದರಿಂದ ಜನರು ರಸ್ತೆ ಮೇಲೆಯೇ ಕಸ ಬಿಸಾಡಿ ಹೋಗುತ್ತಿದ್ದಾರೆ. ಜಾನುವಾರುಗಳು ಮತ್ತು ಬೀದಿನಾಯಿಗಳು ಆಹಾರ ಹುಡುಕಲು ಬಂದು ಕಸವನ್ನು ರಸ್ತೆಗೆ ಚೆಲ್ಲುತ್ತಿವೆ. </p>.<p>‘ರಾಮಮೂರ್ತಿನಗರದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಕೆಲದಿನಗಳಿಂದ ಬಿಬಿಎಂಪಿ ಕಸ ವಿಲೇವಾರಿ ಮಾಡುತ್ತಿಲ್ಲ. ಮಹದೇವಪುರ ವಲಯದಲ್ಲಿ ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದೆ’ ಎಂದು ಶಾಂತಿ ಬಡಾವಣೆ ನಿವಾಸಿ ಶಿವಕುಮಾರ್ ತಿಳಿಸಿದರು.</p>.<p>‘ಕಸ ಸರಿಯಾಗಿ ವಿಲೇವಾರಿಯಾಗುತ್ತಿಲ್ಲ. ಮಳೆಗಾಲದಲ್ಲಿ ಕಸ ಕೊಳೆಯುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೊಳ್ಳೆಗಳ ನಿಯಂತ್ರಣ ಮಾಡುವ ಔಷಧ ಸಿಂಪಡಿವ ಕೆಲಸವನ್ನೂ ಬಿಬಿಎಂಪಿ ಮಾಡಿಲ್ಲ. ಜನರು ಕಾಯಿಲೆ ಬಿದ್ದು, ಆಸ್ಪತ್ರೆಗೆ ಹೋಗುವುದು ಹೆಚ್ಚಾಗಿದೆ’ ಎಂದು ಬಿಬಿಎಂಪಿ ಮಾಜಿ ಸದಸ್ಯ ಕಲ್ಕೆರೆ ಶ್ರೀನಿವಾಸ್ ದೂರಿದರು.</p>.<p>‘ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಔಷಧ ಬೇಕಾದಷ್ಟು ಸಂಗ್ರಹವಿದ್ದರೂ, ‘ಇಲ್ಲ’ ಎಂದು ಉತ್ತರಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>