<p><strong>ಬೆಂಗಳೂರು</strong>: ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಅಪ್ಲಿಕೇಶನ್, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು, ನಿರ್ವಹಣೆ, ಮನೋವಿಜ್ಞಾನ, ಪ್ರದರ್ಶನ ಕಲೆಗಳು ಸೇರಿದಂತೆ ವಿವಿಧ ಕೋರ್ಸ್ಗಳನ್ನು ಭಾನುವಾರ ಉದ್ಘಾಟಿಸಲಾಯಿತು.</p>.<p>ಅಧ್ಯಕ್ಷತೆ ವಹಿಸಿದ್ದ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಆರ್.ದೊರೆಸ್ವಾಮಿ ಮಾತನಾಡಿ, ‘ಉದ್ಯೋಗದಲ್ಲಿ ಉತ್ತಮ ವೇತನವನ್ನು ಬಯಸುವುದು ಸಹಜ. ಅಷ್ಟಕ್ಕೇ ಸೀಮಿತಗೊಳ್ಳದೆ ಮೌಲ್ಯಗಳಿಗೂ ಒತ್ತು ನೀಡಬೇಕು. ಕ್ಯಾಂಪಸ್ನಲ್ಲಿ ಮೌಲ್ಯಾಧಾರಿತ ಶಿಕ್ಷಣ ದೊರೆಯುಂತಹ ವಾತಾವರಣ ನಿರ್ಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳು ಭಾರತದ ಸಂಸ್ಕೃತಿ, ಪರಂಪರೆ, ಸಂಪ್ರದಾಯಗಳನ್ನು ಅರ್ಥಮಾಡಿಕೊಳ್ಳಬೇಕು. ನೈತಿಕ ಮೌಲ್ಯಗಳ ಕೊರತೆಯಿಂದಾಗಿಯೇ ಅಪರಾಧಗಳ ಪ್ರಮಾಣ ಹೆಚ್ಚುತ್ತಿದೆ ಎಂದು ವಿಶ್ಲೇಷಿಸಿದರು.</p>.<p>ವಿದ್ಯಾರ್ಥಿಗಳು ಜ್ಞಾನದ ಜೊತೆಗೆ, ಯಶಸ್ಸಿನ ಬೆನ್ನು ಹತ್ತಬೇಕು. ಸ್ಪರ್ಧೆ ಮತ್ತು ಮಹತ್ವಾಕಾಂಕ್ಷೆಯ ಜೊತೆಗೆ ಸಹೋದರ ತತ್ವವನ್ನು ಕಾಪಾಡಿಕೊಳ್ಳಬೇಕು. ಘನತೆಯ ಬದುಕು ಮತ್ತು ಸಹ ನಾಗರಿಕರನ್ನು ಗೌರವಿಸುವ ಗುಣ ಇರಬೇಕು ಎಂದು ಸಲಹೆ ನೀಡಿದರು.</p>.<p>ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ ಶ್ರೇಯಸ್ ಹೊಸೂರ್ ಅತಿಥಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಅಪ್ಲಿಕೇಶನ್, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು, ನಿರ್ವಹಣೆ, ಮನೋವಿಜ್ಞಾನ, ಪ್ರದರ್ಶನ ಕಲೆಗಳು ಸೇರಿದಂತೆ ವಿವಿಧ ಕೋರ್ಸ್ಗಳನ್ನು ಭಾನುವಾರ ಉದ್ಘಾಟಿಸಲಾಯಿತು.</p>.<p>ಅಧ್ಯಕ್ಷತೆ ವಹಿಸಿದ್ದ ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಆರ್.ದೊರೆಸ್ವಾಮಿ ಮಾತನಾಡಿ, ‘ಉದ್ಯೋಗದಲ್ಲಿ ಉತ್ತಮ ವೇತನವನ್ನು ಬಯಸುವುದು ಸಹಜ. ಅಷ್ಟಕ್ಕೇ ಸೀಮಿತಗೊಳ್ಳದೆ ಮೌಲ್ಯಗಳಿಗೂ ಒತ್ತು ನೀಡಬೇಕು. ಕ್ಯಾಂಪಸ್ನಲ್ಲಿ ಮೌಲ್ಯಾಧಾರಿತ ಶಿಕ್ಷಣ ದೊರೆಯುಂತಹ ವಾತಾವರಣ ನಿರ್ಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳು ಭಾರತದ ಸಂಸ್ಕೃತಿ, ಪರಂಪರೆ, ಸಂಪ್ರದಾಯಗಳನ್ನು ಅರ್ಥಮಾಡಿಕೊಳ್ಳಬೇಕು. ನೈತಿಕ ಮೌಲ್ಯಗಳ ಕೊರತೆಯಿಂದಾಗಿಯೇ ಅಪರಾಧಗಳ ಪ್ರಮಾಣ ಹೆಚ್ಚುತ್ತಿದೆ ಎಂದು ವಿಶ್ಲೇಷಿಸಿದರು.</p>.<p>ವಿದ್ಯಾರ್ಥಿಗಳು ಜ್ಞಾನದ ಜೊತೆಗೆ, ಯಶಸ್ಸಿನ ಬೆನ್ನು ಹತ್ತಬೇಕು. ಸ್ಪರ್ಧೆ ಮತ್ತು ಮಹತ್ವಾಕಾಂಕ್ಷೆಯ ಜೊತೆಗೆ ಸಹೋದರ ತತ್ವವನ್ನು ಕಾಪಾಡಿಕೊಳ್ಳಬೇಕು. ಘನತೆಯ ಬದುಕು ಮತ್ತು ಸಹ ನಾಗರಿಕರನ್ನು ಗೌರವಿಸುವ ಗುಣ ಇರಬೇಕು ಎಂದು ಸಲಹೆ ನೀಡಿದರು.</p>.<p>ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ ಶ್ರೇಯಸ್ ಹೊಸೂರ್ ಅತಿಥಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>