<p><strong>ಬೆಂಗಳೂರು</strong>: ಎರಡು ದಶಕದಲ್ಲಿ ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ. ವಾಹನ ದಟ್ಟಣೆ ಹೆಚ್ಚಾಗಿದೆ. ಭೂಮಿ ಬೆಲೆಯೂ ದುಪ್ಪಟ್ಟಾಗಿದೆ. ಹಾಗಾಗಿ ಸಮಸ್ಯೆಗಳು ಹೆಚ್ಚುತ್ತಿದೆ. ಕಳ್ಳತನ ತಡೆಗೆ ರಾತ್ರಿ ವೇಳೆ ಹೊಯ್ಸಳ ವಾಹನ ಗಸ್ತು ವ್ಯವಸ್ಥೆ ಹೆಚ್ಚಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.</p>.<p>ನಗರದ ಸಂಚಾರ ಪೊಲೀಸ್ ವತಿಯಿಂದ ಆರ್.ಕೆ. ಹೆಗಡೆ ನಗರದಲ್ಲಿ ಶನಿವಾರ ಆಯೋಜಿಸಿದ್ದ ತಿಂಗಳ ಸಂಚಾರ ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಅವರು ಪ್ರತಿಕ್ರಿಯಿಸಿದರು.</p>.<p>ಕಾರ್ಯನಿರ್ವಹಿಸದ ಸಿಗ್ನಲ್ ದೀಪಗಳು, ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳ ನಿಲುಗಡೆ, ರಾತ್ರಿ ವೇಳೆ ಹೊಯ್ಸಳ ವಾಹನ ಗಸ್ತು ಹೆಚ್ಚಳ, ವಾಹನ ದಟ್ಟಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.</p>.<p>ನಿವಾಸಿಗಳು ಹೊತ್ತು ತಂದಿದ್ದ ಸಮಸ್ಯೆಗಳನ್ನು ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ತಾಳ್ಮೆಯಿಂದ ಆಲಿಸಿದ ಪೊಲೀಸ್ ಅಧಿಕಾರಿಗಳು, ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಎಚ್ಬಿಆರ್ ಬಡಾವಣೆ ನಿವಾಸಿ ಜಸ್ಟೀನ್ ಬಾಬು, ‘ರಸ್ತೆ ಹಂಪ್ಸ್ಗಳ ಅವಶ್ಯಕತೆ ಇದೆ. ಯುವಕರ ಬೈಕ್ ರೇಸ್ಗೆ ಕಡಿವಾಣ ಹಾಕಬೇಕು. ಸಿಗ್ನಲ್ ಲೈಟ್ಗಳು ಕಾರ್ಯನಿರ್ವಹಿಸುತ್ತಿಲ್ಲ. ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವ ಕಾರಣ ಸಾರ್ವಜನಿಕರ ಓಡಾಡಕ್ಕೆ ತೊಂದರೆ ಆಗಿದೆ. ಕೂಡಲೇ ತೆರವು ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್, ‘ಹೆಣ್ಣೂರು ಸಿಗ್ನಲ್ ಬಳಿ ಸಿಗ್ನಲ್ ಲೈಟ್ ಅಳವಡಿಸಲಾಗುವುದು. ಫುಟ್ಪಾತ್ ಒತ್ತುವರಿ ತೆರವಿಗೆ ಬಿಬಿಎಂಪಿ ಅವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಬೈರತಿ ಕ್ರಾಸ್ ನಿವಾಸಿ ಲೋಬೊ ಮಾತನಾಡಿ, ನಗರದಲ್ಲಿ ಎರಡು ದಶಕದ ಹಿಂದೆ ಸಮಸ್ಯೆ ಇರಲಿಲ್ಲ. ಈಗ ರಸ್ತೆ ವಿಸ್ತರಣೆ ಮಾಡಿದರೂ ವಾಹನ ದಟ್ಟಣೆ ಕಡಿಮೆ ಆಗಿಲ್ಲ. ಬೆಳಿಗ್ಗೆ ರಸ್ತೆ ದಾಟಲು ಆಗಲು ಹರಸಾಹಸ ಪಡುವಂತಾಗಿದೆ. ರಸ್ತೆ ಬದಿ ಟೆಂಪೊ, ಲಾರಿ, ಕಾರುಗಳನ್ನು ನಿಲ್ಲಿಸಲಾಗುತ್ತಿದೆ. ವಾಹನ ಹಾಗೂ ಮನೆಗಳ ಕಳ್ಳತನವೂ ಹೆಚ್ಚುತ್ತಿದೆ ಎಂದು ದೂರಿದರು.</p>.<p>‘ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಂತು ಸಾಕಷ್ಟು ಸಮಸ್ಯೆಯಾಗಿದೆ. ಬಿಬಿಎಂಪಿ ಸಿಬ್ಬಂದಿ ನಮ್ಮ ಕರೆ ಸ್ವೀಕರಿಸುತ್ತಿಲ್ಲ. ನಗರ ಪೊಲೀಸ್ ಕಮಿಷನರ್ ಅವರೇ ಬಿಬಿಎಂಪಿಗೆ ಕರೆ ಮಾಡಿ ವಿಷಯ ತಿಳಿಸಿ ಸಮಸ್ಯೆ ಬಗೆಹರಿಸಬೇಕು’ ನಿವಾಸಿಯೊಬ್ಬರು ಆಗ್ರಹಿಸಿದರು.</p>.<p>ಸಂಚಾರ ವಿಭಾಗದ ಡಿಸಿಪಿ ಸಿರಿ ಗೌರಿ, ಕಾನೂನು ಮತ್ತು ವ್ಯವಸ್ಥೆ ಈಶಾನ್ಯ ವಿಭಾಗದ ಡಿಸಿಪಿ ಸಚಿತ್ ಹಾಜರಿದ್ದರು.</p>.<blockquote>ಸಮಸ್ಯೆಗಳಿಗೆ ಶೀಘ್ರ ಪರಿಹಾರ ಭರವಸೆ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಮನವಿ ವಾಹನಗಳ ಕಳ್ಳತನಕ್ಕೂ ಕಡಿವಾಣಕ್ಕೆ ಮೊರೆ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎರಡು ದಶಕದಲ್ಲಿ ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ. ವಾಹನ ದಟ್ಟಣೆ ಹೆಚ್ಚಾಗಿದೆ. ಭೂಮಿ ಬೆಲೆಯೂ ದುಪ್ಪಟ್ಟಾಗಿದೆ. ಹಾಗಾಗಿ ಸಮಸ್ಯೆಗಳು ಹೆಚ್ಚುತ್ತಿದೆ. ಕಳ್ಳತನ ತಡೆಗೆ ರಾತ್ರಿ ವೇಳೆ ಹೊಯ್ಸಳ ವಾಹನ ಗಸ್ತು ವ್ಯವಸ್ಥೆ ಹೆಚ್ಚಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.</p>.<p>ನಗರದ ಸಂಚಾರ ಪೊಲೀಸ್ ವತಿಯಿಂದ ಆರ್.ಕೆ. ಹೆಗಡೆ ನಗರದಲ್ಲಿ ಶನಿವಾರ ಆಯೋಜಿಸಿದ್ದ ತಿಂಗಳ ಸಂಚಾರ ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಅವರು ಪ್ರತಿಕ್ರಿಯಿಸಿದರು.</p>.<p>ಕಾರ್ಯನಿರ್ವಹಿಸದ ಸಿಗ್ನಲ್ ದೀಪಗಳು, ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳ ನಿಲುಗಡೆ, ರಾತ್ರಿ ವೇಳೆ ಹೊಯ್ಸಳ ವಾಹನ ಗಸ್ತು ಹೆಚ್ಚಳ, ವಾಹನ ದಟ್ಟಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.</p>.<p>ನಿವಾಸಿಗಳು ಹೊತ್ತು ತಂದಿದ್ದ ಸಮಸ್ಯೆಗಳನ್ನು ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ತಾಳ್ಮೆಯಿಂದ ಆಲಿಸಿದ ಪೊಲೀಸ್ ಅಧಿಕಾರಿಗಳು, ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಎಚ್ಬಿಆರ್ ಬಡಾವಣೆ ನಿವಾಸಿ ಜಸ್ಟೀನ್ ಬಾಬು, ‘ರಸ್ತೆ ಹಂಪ್ಸ್ಗಳ ಅವಶ್ಯಕತೆ ಇದೆ. ಯುವಕರ ಬೈಕ್ ರೇಸ್ಗೆ ಕಡಿವಾಣ ಹಾಕಬೇಕು. ಸಿಗ್ನಲ್ ಲೈಟ್ಗಳು ಕಾರ್ಯನಿರ್ವಹಿಸುತ್ತಿಲ್ಲ. ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವ ಕಾರಣ ಸಾರ್ವಜನಿಕರ ಓಡಾಡಕ್ಕೆ ತೊಂದರೆ ಆಗಿದೆ. ಕೂಡಲೇ ತೆರವು ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್, ‘ಹೆಣ್ಣೂರು ಸಿಗ್ನಲ್ ಬಳಿ ಸಿಗ್ನಲ್ ಲೈಟ್ ಅಳವಡಿಸಲಾಗುವುದು. ಫುಟ್ಪಾತ್ ಒತ್ತುವರಿ ತೆರವಿಗೆ ಬಿಬಿಎಂಪಿ ಅವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಬೈರತಿ ಕ್ರಾಸ್ ನಿವಾಸಿ ಲೋಬೊ ಮಾತನಾಡಿ, ನಗರದಲ್ಲಿ ಎರಡು ದಶಕದ ಹಿಂದೆ ಸಮಸ್ಯೆ ಇರಲಿಲ್ಲ. ಈಗ ರಸ್ತೆ ವಿಸ್ತರಣೆ ಮಾಡಿದರೂ ವಾಹನ ದಟ್ಟಣೆ ಕಡಿಮೆ ಆಗಿಲ್ಲ. ಬೆಳಿಗ್ಗೆ ರಸ್ತೆ ದಾಟಲು ಆಗಲು ಹರಸಾಹಸ ಪಡುವಂತಾಗಿದೆ. ರಸ್ತೆ ಬದಿ ಟೆಂಪೊ, ಲಾರಿ, ಕಾರುಗಳನ್ನು ನಿಲ್ಲಿಸಲಾಗುತ್ತಿದೆ. ವಾಹನ ಹಾಗೂ ಮನೆಗಳ ಕಳ್ಳತನವೂ ಹೆಚ್ಚುತ್ತಿದೆ ಎಂದು ದೂರಿದರು.</p>.<p>‘ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಂತು ಸಾಕಷ್ಟು ಸಮಸ್ಯೆಯಾಗಿದೆ. ಬಿಬಿಎಂಪಿ ಸಿಬ್ಬಂದಿ ನಮ್ಮ ಕರೆ ಸ್ವೀಕರಿಸುತ್ತಿಲ್ಲ. ನಗರ ಪೊಲೀಸ್ ಕಮಿಷನರ್ ಅವರೇ ಬಿಬಿಎಂಪಿಗೆ ಕರೆ ಮಾಡಿ ವಿಷಯ ತಿಳಿಸಿ ಸಮಸ್ಯೆ ಬಗೆಹರಿಸಬೇಕು’ ನಿವಾಸಿಯೊಬ್ಬರು ಆಗ್ರಹಿಸಿದರು.</p>.<p>ಸಂಚಾರ ವಿಭಾಗದ ಡಿಸಿಪಿ ಸಿರಿ ಗೌರಿ, ಕಾನೂನು ಮತ್ತು ವ್ಯವಸ್ಥೆ ಈಶಾನ್ಯ ವಿಭಾಗದ ಡಿಸಿಪಿ ಸಚಿತ್ ಹಾಜರಿದ್ದರು.</p>.<blockquote>ಸಮಸ್ಯೆಗಳಿಗೆ ಶೀಘ್ರ ಪರಿಹಾರ ಭರವಸೆ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಮನವಿ ವಾಹನಗಳ ಕಳ್ಳತನಕ್ಕೂ ಕಡಿವಾಣಕ್ಕೆ ಮೊರೆ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>