<p><strong>ಬೆಂಗಳೂರು</strong>: ‘ಜೆಡಿಎಸ್ ಪಕ್ಷ ಬಲ ಕಳೆದುಕೊಳ್ಳಲು ಅವಕಾಶ ನೀಡುವುದಿಲ್ಲ. ಪಕ್ಷದ ಸಂಘಟನೆಗೆ ಮತ್ತೆ ಶಕ್ತಿ ತುಂಬಲು ಸೆಪ್ಟೆಂಬರ್ 10ರಂದು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲಾಗುವುದು’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವನ್ನು ತುಳಿಯುತ್ತಿದ್ದಾರೆ. ಈಗ ಪಕ್ಷವನ್ನು ರಕ್ಷಿಸುವುದು ನನ್ನ ಗುರಿ. 91ರ ಇಳಿ ವಯಸ್ಸಿನಲ್ಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಈ ಹಂತದಲ್ಲಿ ಕಾರ್ಯಕರ್ತರು ನನ್ನ ಕೈ ಬಿಡಬೇಡಿ’ ಎಂದು ಭಾವುಕರಾಗಿ ಮನವಿ ಮಾಡಿದರು.</p>.<p>ಸೆ.10 ರ ಸಮಾವೇಶದಲ್ಲಿ 20,000ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾರ್ಯಕರ್ತರು ಸ್ವಂತ ಶಕ್ತಿಯಿಂದ ಬಂದು ಭಾಗವಹಿಸಬೇಕು. ಎಲ್ಲ ಜಿಲ್ಲೆಗಳ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದರು.</p>.<p>ಶಾಸಕ ಜಿ.ಟಿ. ದೇವೇಗೌಡರ ನೇತೃತ್ವದಲ್ಲಿ ‘ಕೋರ್ ಸಮಿತಿ’ ರಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಎದುರಿಸಲು ಈ ಸಮಿತಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ಎಚ್.ಡಿ. ಕುಮಾರಸ್ವಾಮಿ ಅವರೇ ಪಕ್ಷವನ್ನು ಮುನ್ನಡೆಸುತ್ತಾರೆ ಎಂದು ತಿಳಿಸಿದರು.</p>.<p><strong>ಯಾರೂ ಪಕ್ಷ ತೊರೆಯುವುದಿಲ್ಲ:</strong></p><p>‘ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ನ ರಾಜಕೀಯ ನನಗೆ ಚೆನ್ನಾಗಿ ಗೊತ್ತಿದೆ. ಜೆಡಿಎಸ್ನ ಯಾವ ಶಾಸಕರೂ ಪಕ್ಷ ತೊರೆಯುವುದಿಲ್ಲ. ಪಕ್ಷ ಬಿಡಲು ಮುಂದಾಗಿರುವ ನಮ್ಮ ಪಕ್ಷದ ಒಬ್ಬ ಶಾಸಕನ ಹೆಸರು ಹೇಳಿ. ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸಬೇಡಿ’ ಎಂದು ಪತ್ರಕರ್ತರನ್ನುದ್ದೇಶಿಸಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಜೆಡಿಎಸ್ ಪಕ್ಷ ಬಲ ಕಳೆದುಕೊಳ್ಳಲು ಅವಕಾಶ ನೀಡುವುದಿಲ್ಲ. ಪಕ್ಷದ ಸಂಘಟನೆಗೆ ಮತ್ತೆ ಶಕ್ತಿ ತುಂಬಲು ಸೆಪ್ಟೆಂಬರ್ 10ರಂದು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲಾಗುವುದು’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವನ್ನು ತುಳಿಯುತ್ತಿದ್ದಾರೆ. ಈಗ ಪಕ್ಷವನ್ನು ರಕ್ಷಿಸುವುದು ನನ್ನ ಗುರಿ. 91ರ ಇಳಿ ವಯಸ್ಸಿನಲ್ಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಈ ಹಂತದಲ್ಲಿ ಕಾರ್ಯಕರ್ತರು ನನ್ನ ಕೈ ಬಿಡಬೇಡಿ’ ಎಂದು ಭಾವುಕರಾಗಿ ಮನವಿ ಮಾಡಿದರು.</p>.<p>ಸೆ.10 ರ ಸಮಾವೇಶದಲ್ಲಿ 20,000ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾರ್ಯಕರ್ತರು ಸ್ವಂತ ಶಕ್ತಿಯಿಂದ ಬಂದು ಭಾಗವಹಿಸಬೇಕು. ಎಲ್ಲ ಜಿಲ್ಲೆಗಳ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದರು.</p>.<p>ಶಾಸಕ ಜಿ.ಟಿ. ದೇವೇಗೌಡರ ನೇತೃತ್ವದಲ್ಲಿ ‘ಕೋರ್ ಸಮಿತಿ’ ರಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಎದುರಿಸಲು ಈ ಸಮಿತಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ಎಚ್.ಡಿ. ಕುಮಾರಸ್ವಾಮಿ ಅವರೇ ಪಕ್ಷವನ್ನು ಮುನ್ನಡೆಸುತ್ತಾರೆ ಎಂದು ತಿಳಿಸಿದರು.</p>.<p><strong>ಯಾರೂ ಪಕ್ಷ ತೊರೆಯುವುದಿಲ್ಲ:</strong></p><p>‘ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ನ ರಾಜಕೀಯ ನನಗೆ ಚೆನ್ನಾಗಿ ಗೊತ್ತಿದೆ. ಜೆಡಿಎಸ್ನ ಯಾವ ಶಾಸಕರೂ ಪಕ್ಷ ತೊರೆಯುವುದಿಲ್ಲ. ಪಕ್ಷ ಬಿಡಲು ಮುಂದಾಗಿರುವ ನಮ್ಮ ಪಕ್ಷದ ಒಬ್ಬ ಶಾಸಕನ ಹೆಸರು ಹೇಳಿ. ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸಬೇಡಿ’ ಎಂದು ಪತ್ರಕರ್ತರನ್ನುದ್ದೇಶಿಸಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>