<p><strong>ಬೆಂಗಳೂರು</strong>: ‘ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ರೋಗಿಗೆ ನಿಖರ ಚಿಕಿತ್ಸೆ ಒದಗಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸಹಕಾರಿ. ಆದ್ದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ಈ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ತಿಳಿಸಿದರು.</p><p>ಕಾವೇರಿ ಆಸ್ಪತ್ರೆಯು ನಗರದಲ್ಲಿ ಬುಧವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಜೀವನಶೈಲಿ ರೋಗಗಳ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.</p><p>‘ದೇಶದಲ್ಲಿನ ಎಲ್ಲರಿಗೂ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಬೇಕಿದೆ. ಸರ್ಕಾರಿ ವ್ಯವಸ್ಥೆಯಡಿ ಇದು ಸಾಧ್ಯವಾಗದಿದ್ದರಿಂದ ಖಾಸಗಿ ಆಸ್ಪತ್ರೆಗಳು ಈ ಕೊರತೆ ನೀಗಿಸುತ್ತಿವೆ. ಈಗ ಕಾವೇರಿ ಆಸ್ಪತ್ರೆಯು ಎಐ ಆಧಾರಿತ ಚಿಕಿತ್ಸಾ ವಿಭಾಗ ಪ್ರಾರಂಭ ಮಾಡಿರುವುದು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p><p>ಕಾವೇರಿ ಸಮೂಹ ಆಸ್ಪತ್ರೆಯ ಸಂಸ್ಥಾಪಕ ಡಾ.ಎಸ್. ಚಂದ್ರಕುಮಾರ್ ಮಾತನಾಡಿ, ‘ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಇತ್ತೀಚಿನ ವರದಿ ಪ್ರಕಾರ, ದೇಶದಲ್ಲಿ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ದೀರ್ಘಕಾಲೀನ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ. ಶೇ 60ಕ್ಕಿಂತ ಹೆಚ್ಚು ಮರಣಗಳು ಈ ಕಾಯಿಲೆಗಳಿಂದ ವರದಿಯಾಗುತ್ತಿವೆ. ವೈದ್ಯಕೀಯ ಸೇವಾ ವ್ಯವಸ್ಥೆಯ ಲಭ್ಯತೆಯ ಕೊರತೆಯೇ ಇದಕ್ಕೆ ಕಾರಣ. ಆದ್ದರಿಂದ ಜನರಿಗೆ ಜೀವನಶೈಲಿ ಆಧಾರಿತ ಕಾಯಿಲೆಗಳ ತಪಾಸಣೆ ಮತ್ತು ಚಿಕಿತ್ಸೆಯ ಕುರಿತು ಅರಿವಿನ ಅಗತ್ಯವಿದೆ’ ಎಂದು ಹೇಳಿದರು.</p><p>ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ರಾಜಕುಮಾರ್ ಚನ್ನಬಸವಯ್ಯ ಮಾತನಾಡಿ, ‘ಎಐ ಆಧಾರಿತ ನೂತನ ವಿಭಾಗದಲ್ಲಿ ಜೀವನಶೈಲಿ ಆಧಾರದ ಮೇಲೆ ಆರಂಭಿಕ ಹಂತದಲ್ಲೇ ಸಮಗ್ರ ರೋಗ ಪತ್ತೆ ಮತ್ತು ಚಿಕಿತ್ಸೆ ಒದಗಿಸಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ರೋಗಿಗೆ ನಿಖರ ಚಿಕಿತ್ಸೆ ಒದಗಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸಹಕಾರಿ. ಆದ್ದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ಈ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ತಿಳಿಸಿದರು.</p><p>ಕಾವೇರಿ ಆಸ್ಪತ್ರೆಯು ನಗರದಲ್ಲಿ ಬುಧವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಜೀವನಶೈಲಿ ರೋಗಗಳ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.</p><p>‘ದೇಶದಲ್ಲಿನ ಎಲ್ಲರಿಗೂ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಬೇಕಿದೆ. ಸರ್ಕಾರಿ ವ್ಯವಸ್ಥೆಯಡಿ ಇದು ಸಾಧ್ಯವಾಗದಿದ್ದರಿಂದ ಖಾಸಗಿ ಆಸ್ಪತ್ರೆಗಳು ಈ ಕೊರತೆ ನೀಗಿಸುತ್ತಿವೆ. ಈಗ ಕಾವೇರಿ ಆಸ್ಪತ್ರೆಯು ಎಐ ಆಧಾರಿತ ಚಿಕಿತ್ಸಾ ವಿಭಾಗ ಪ್ರಾರಂಭ ಮಾಡಿರುವುದು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p><p>ಕಾವೇರಿ ಸಮೂಹ ಆಸ್ಪತ್ರೆಯ ಸಂಸ್ಥಾಪಕ ಡಾ.ಎಸ್. ಚಂದ್ರಕುಮಾರ್ ಮಾತನಾಡಿ, ‘ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಇತ್ತೀಚಿನ ವರದಿ ಪ್ರಕಾರ, ದೇಶದಲ್ಲಿ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ದೀರ್ಘಕಾಲೀನ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ. ಶೇ 60ಕ್ಕಿಂತ ಹೆಚ್ಚು ಮರಣಗಳು ಈ ಕಾಯಿಲೆಗಳಿಂದ ವರದಿಯಾಗುತ್ತಿವೆ. ವೈದ್ಯಕೀಯ ಸೇವಾ ವ್ಯವಸ್ಥೆಯ ಲಭ್ಯತೆಯ ಕೊರತೆಯೇ ಇದಕ್ಕೆ ಕಾರಣ. ಆದ್ದರಿಂದ ಜನರಿಗೆ ಜೀವನಶೈಲಿ ಆಧಾರಿತ ಕಾಯಿಲೆಗಳ ತಪಾಸಣೆ ಮತ್ತು ಚಿಕಿತ್ಸೆಯ ಕುರಿತು ಅರಿವಿನ ಅಗತ್ಯವಿದೆ’ ಎಂದು ಹೇಳಿದರು.</p><p>ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ರಾಜಕುಮಾರ್ ಚನ್ನಬಸವಯ್ಯ ಮಾತನಾಡಿ, ‘ಎಐ ಆಧಾರಿತ ನೂತನ ವಿಭಾಗದಲ್ಲಿ ಜೀವನಶೈಲಿ ಆಧಾರದ ಮೇಲೆ ಆರಂಭಿಕ ಹಂತದಲ್ಲೇ ಸಮಗ್ರ ರೋಗ ಪತ್ತೆ ಮತ್ತು ಚಿಕಿತ್ಸೆ ಒದಗಿಸಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>