<p><strong>ಬೆಂಗಳೂರು</strong>: ‘ಒಳ ಮೀಸಲಾತಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ ಸೇರಿದಂತೆ ಬಲಗೈ ಸಮುದಾಯದ ಹಲವು ನಾಯಕರು ಅಸಹನೆ ತೋರುತ್ತಿದ್ದಾರೆ’ ಎಂದು ಮಾದಿಗ ಮಹಾಸಭಾ ಅಧ್ಯಕ್ಷ ಹನುಮಂತಪ್ಪ ದುರ್ಗ ಆರೋಪಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತ ಮುಖ್ಯಮಂತ್ರಿ ವಿಚಾರ ಬಂದಾಗ ಇದೇ ನಾಯಕರು ಜೊತೆ ಸೇರುತ್ತಿದ್ದಾರೆ. ಮಾದಿಗ ಸಮುದಾಯವನ್ನು ಕಡೆಗಣಿಸಿ ಬಹುಪಾಲು ಸೌಲಭ್ಯಗಳನ್ನು ಇದೇ ಸಮುದಾಯ ಪಡೆಯುತ್ತಿದೆ. ಒಳ ಮೀಸಲಾತಿ ಜಾರಿಗೆ ಬಾರದೇ ದಲಿತ ಮುಖ್ಯಮಂತ್ರಿ ಪದವಿ ದಲಿತರಿಗೆ ಬೇಕಾಗಿಲ್ಲ’ ಎಂದರು.</p>.<p>‘ಒಳ ಮೀಸಲಾತಿ ಜಾರಿ ಮಾಡುವುದಾಗಿ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ಆನಂತರ ಬದ್ಧತೆ ತೋರುತ್ತಿಲ್ಲ. ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ಸರ್ಕಾರ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ್ ಟಿ., ಶೋಷಿತ ಸಮಾಜದ ಅಧ್ಯಕ್ಷ ಬಿ. ರಾಜಪ್ಪ, ವಕೀಲರಾದ ಡಿ. ತಿಪ್ಪೇಸ್ವಾಮಿ, ಎಸ್.ದಯಾನಂದ, ಎಸ್.ಕೆ. ಸುರೇಶ್, ಎಲ್. ಸುರೇಶ್, ಮಾದಿಗ ದಂಡೋರ ಜಿಲ್ಲಾ ಘಟಕದ ಅಧ್ಯಕ್ಷ ಮೂರ್ತಿ ಸಿ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಒಳ ಮೀಸಲಾತಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ ಸೇರಿದಂತೆ ಬಲಗೈ ಸಮುದಾಯದ ಹಲವು ನಾಯಕರು ಅಸಹನೆ ತೋರುತ್ತಿದ್ದಾರೆ’ ಎಂದು ಮಾದಿಗ ಮಹಾಸಭಾ ಅಧ್ಯಕ್ಷ ಹನುಮಂತಪ್ಪ ದುರ್ಗ ಆರೋಪಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತ ಮುಖ್ಯಮಂತ್ರಿ ವಿಚಾರ ಬಂದಾಗ ಇದೇ ನಾಯಕರು ಜೊತೆ ಸೇರುತ್ತಿದ್ದಾರೆ. ಮಾದಿಗ ಸಮುದಾಯವನ್ನು ಕಡೆಗಣಿಸಿ ಬಹುಪಾಲು ಸೌಲಭ್ಯಗಳನ್ನು ಇದೇ ಸಮುದಾಯ ಪಡೆಯುತ್ತಿದೆ. ಒಳ ಮೀಸಲಾತಿ ಜಾರಿಗೆ ಬಾರದೇ ದಲಿತ ಮುಖ್ಯಮಂತ್ರಿ ಪದವಿ ದಲಿತರಿಗೆ ಬೇಕಾಗಿಲ್ಲ’ ಎಂದರು.</p>.<p>‘ಒಳ ಮೀಸಲಾತಿ ಜಾರಿ ಮಾಡುವುದಾಗಿ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ಆನಂತರ ಬದ್ಧತೆ ತೋರುತ್ತಿಲ್ಲ. ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ಸರ್ಕಾರ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ್ ಟಿ., ಶೋಷಿತ ಸಮಾಜದ ಅಧ್ಯಕ್ಷ ಬಿ. ರಾಜಪ್ಪ, ವಕೀಲರಾದ ಡಿ. ತಿಪ್ಪೇಸ್ವಾಮಿ, ಎಸ್.ದಯಾನಂದ, ಎಸ್.ಕೆ. ಸುರೇಶ್, ಎಲ್. ಸುರೇಶ್, ಮಾದಿಗ ದಂಡೋರ ಜಿಲ್ಲಾ ಘಟಕದ ಅಧ್ಯಕ್ಷ ಮೂರ್ತಿ ಸಿ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>