<p><strong>ಬೆಂಗಳೂರು</strong>: ‘ನನ್ನಂತಹ ಅನೇಕರಿಗೆ ಜಗತ್ತಿನ ಶ್ರೇಷ್ಠ ಕೃತಿಗಳನ್ನು ಓದಲು ಪ್ರೋತ್ಸಾಹಿಸಿದವರು ಕಿ.ರಂ.ನಾಗರಾಜ ಮತ್ತು ಪಿ.ಲಂಕೇಶ್ ಅವರು. ಮಾತ್ರವಲ್ಲ, ನಾವು ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ತಪ್ಪು ಮಾಡಿದಾಗ ಅದನ್ನು ಗಮನಿಸಿ ತಿದ್ದುತ್ತಿದ್ದರು’ ಎಂದು ಸಂಸ್ಕೃತಿ ಚಿಂತಕ ಶೂದ್ರ ಶ್ರೀನಿವಾಸ್ ಹೇಳಿದರು.</p>.<p>ನಗರದ ಕನ್ನಡ ಭವನದಲ್ಲಿ ಭಾನುವಾರ ಸಂಸ ಥಿಯೇಟರ್ ಮತ್ತು ಕರ್ನಾಟಕ ಲೇಖಕಿಯರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆ.ಎನ್.ವಿಜಯಲಕ್ಷ್ಮಿ ಅನುವಾದ ಕಾವ್ಯ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ’ ಅವರು ಮಾತನಾಡಿದರು.</p>.<p>‘ನಮಗೆ ಕಿ.ರಂ. ಮತ್ತು ಲಂಕೇಶ್ ಎರಡು ವಿಶ್ವವಿದ್ಯಾಲಯಗಳಿದ್ದಂತೆ. ವಾರದಲ್ಲಿ ನಾಲ್ಕು ದಿನಗಳಾದರೂ ಇವರ ಮನೆಗಳಲ್ಲಿ ಹಲವು ವಿಷಯಗಳ ಕುರಿತು ಚರ್ಚೆ, ಸಂವಾದಗಳು ನಡೆಯುತ್ತಿದ್ದವು’ ಎಂದು ಸ್ಮರಿಸಿದರು.</p>.<p>‘ಕಿ.ರಂ. ಅವರ ಪತ್ನಿ ಕೆ.ಎನ್.ವಿಜಯಲಕ್ಷ್ಮಿ ಅವರು ಸ್ವಲ್ಪ ತಡವಾಗಿ ಅನುವಾದ ಕ್ಷೇತ್ರವನ್ನು ಪ್ರವೇಶಿಸಿದರು. ನಂತರದಲ್ಲಿ ಹಲವು ನಾಟಕಗಳು, ಕವಿತೆಗಳನ್ನು ಅನುವಾದಿಸಿ ಪ್ರಕಟಿಸಿದ್ದಾರೆ’ ಎಂದು ಅವರು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಮಲರ್ವಿಳಿ ಕೆ. ಅವರಿಗೆ ‘2024ನೇ ಸಾಲಿನ ಕೆ.ಎನ್.ವಿಜಯಲಕ್ಷ್ಮಿ ಅನುವಾದ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ.</p>.<p>ಕಿ.ರಂ. ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರಿಯರಾದ ಕೆ.ಎನ್. ಸಹನ, ಕೆ.ಎನ್. ಚಂದನ, ಕೆ.ಎನ್. ಕವನ ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನನ್ನಂತಹ ಅನೇಕರಿಗೆ ಜಗತ್ತಿನ ಶ್ರೇಷ್ಠ ಕೃತಿಗಳನ್ನು ಓದಲು ಪ್ರೋತ್ಸಾಹಿಸಿದವರು ಕಿ.ರಂ.ನಾಗರಾಜ ಮತ್ತು ಪಿ.ಲಂಕೇಶ್ ಅವರು. ಮಾತ್ರವಲ್ಲ, ನಾವು ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ತಪ್ಪು ಮಾಡಿದಾಗ ಅದನ್ನು ಗಮನಿಸಿ ತಿದ್ದುತ್ತಿದ್ದರು’ ಎಂದು ಸಂಸ್ಕೃತಿ ಚಿಂತಕ ಶೂದ್ರ ಶ್ರೀನಿವಾಸ್ ಹೇಳಿದರು.</p>.<p>ನಗರದ ಕನ್ನಡ ಭವನದಲ್ಲಿ ಭಾನುವಾರ ಸಂಸ ಥಿಯೇಟರ್ ಮತ್ತು ಕರ್ನಾಟಕ ಲೇಖಕಿಯರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆ.ಎನ್.ವಿಜಯಲಕ್ಷ್ಮಿ ಅನುವಾದ ಕಾವ್ಯ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ’ ಅವರು ಮಾತನಾಡಿದರು.</p>.<p>‘ನಮಗೆ ಕಿ.ರಂ. ಮತ್ತು ಲಂಕೇಶ್ ಎರಡು ವಿಶ್ವವಿದ್ಯಾಲಯಗಳಿದ್ದಂತೆ. ವಾರದಲ್ಲಿ ನಾಲ್ಕು ದಿನಗಳಾದರೂ ಇವರ ಮನೆಗಳಲ್ಲಿ ಹಲವು ವಿಷಯಗಳ ಕುರಿತು ಚರ್ಚೆ, ಸಂವಾದಗಳು ನಡೆಯುತ್ತಿದ್ದವು’ ಎಂದು ಸ್ಮರಿಸಿದರು.</p>.<p>‘ಕಿ.ರಂ. ಅವರ ಪತ್ನಿ ಕೆ.ಎನ್.ವಿಜಯಲಕ್ಷ್ಮಿ ಅವರು ಸ್ವಲ್ಪ ತಡವಾಗಿ ಅನುವಾದ ಕ್ಷೇತ್ರವನ್ನು ಪ್ರವೇಶಿಸಿದರು. ನಂತರದಲ್ಲಿ ಹಲವು ನಾಟಕಗಳು, ಕವಿತೆಗಳನ್ನು ಅನುವಾದಿಸಿ ಪ್ರಕಟಿಸಿದ್ದಾರೆ’ ಎಂದು ಅವರು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಮಲರ್ವಿಳಿ ಕೆ. ಅವರಿಗೆ ‘2024ನೇ ಸಾಲಿನ ಕೆ.ಎನ್.ವಿಜಯಲಕ್ಷ್ಮಿ ಅನುವಾದ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ.</p>.<p>ಕಿ.ರಂ. ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರಿಯರಾದ ಕೆ.ಎನ್. ಸಹನ, ಕೆ.ಎನ್. ಚಂದನ, ಕೆ.ಎನ್. ಕವನ ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>