<p><strong>ಬೆಂಗಳೂರು: </strong>ವಂಚನೆ ಪ್ರಕರಣದಲ್ಲಿ ದೂರು ನೀಡಿದ್ದ ಯುವತಿಗೆ ಕೊಡಿಗೇಹಳ್ಳಿ ಠಾಣೆ ಇನ್ಸ್ಪೆಕ್ಟರ್ ಎನ್.ರಾಜಣ್ಣ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ತನಿಖೆ ನಡೆಸಿದ್ದ ಈಶಾನ್ಯ ವಿಭಾಗದ ಡಿಸಿಪಿ ಬಿ.ಎಂ. ಲಕ್ಷ್ಮಿಪ್ರಸಾದ್ ಅವರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆ.</p>.<p>‘ಇನ್ಸ್ಪೆಕ್ಟರ್ ರಾಜಣ್ಣ ವಿರುದ್ಧ ಯುವತಿ ದೂರು ನೀಡಿದ್ದರು. ಎಸಿಪಿ ನೇತೃತ್ವದಲ್ಲಿ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಕೆಲ ಪುರಾವೆಗಳೂ ಸಿಕ್ಕಿವೆ. ಎಸಿಪಿ ವರದಿಯನ್ನು ಪರಿಶೀಲಿಸಿ ಕಮಿಷನರ್ ಅವರಿಗೆ ಸಲ್ಲಿಸಲಾಗಿದೆ. ಕಮಿಷನರ್ ಅವರೇ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಡಿಸಿಪಿ ಲಕ್ಷ್ಮಿಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead"><strong>ಏನಿದು ಪ್ರಕರಣ: </strong>‘ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆತ, ಯುವತಿ ಬಳಿ ₹ 15 ಲಕ್ಷ ಸಾಲ ಪಡೆದಿದ್ದ. ಅದನ್ನು ವಾಪಸು ಕೊಡದೇ ಸತಾಯಿಸುತ್ತಿದ್ದ. ಈ ಬಗ್ಗೆ ಯುವತಿ, ಕೊಡಿಗೇಹಳ್ಳಿ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರು ನೀಡಲು ಬಂದಿದ್ದ ವೇಳೆ ಯುವತಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ ಇನ್ಸ್ಪೆಕ್ಟರ್ ರಾಜಣ್ಣ ಸಂದೇಶ ಕಳುಹಿಸಲಾರಂಭಿಸಿದ್ದ. ‘ಭೇಟಿಯಾಗೋಣ ಬಾ’ ಎಂದು ಯುವತಿ ಯನ್ನು ಕರೆಯುತ್ತಿದ್ದ. ಪ್ರಕರಣದ ಪ್ರಗತಿ ತಿಳಿಯಲೆಂದು ಯುವತಿ, ಮಾರ್ಚ್ 24ರಂದು ಠಾಣೆಗೆ ಹೋಗಿದ್ದರು.’ ಎಂದು ತಿಳಿಸಿವೆ.</p>.<p>‘ಯುವತಿಯನ್ನು ತನ್ನ ಕೊಠಡಿಗೆ ಕರೆಸಿಕೊಂಡಿದ್ದ ಇನ್ಸ್ಪೆಕ್ಟರ್, ಡ್ರೈ ಫ್ರೂಟ್ಸ್ ಬಾಕ್ಸ್ ನೀಡಿದ್ದ. ಅಸಭ್ಯವಾಗಿ ವರ್ತಿಸಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಯುವತಿ, ಕೊಠಡಿಯಿಂದ ಹೊರಬಂದು ಠಾಣೆಯಲ್ಲಿದ್ದ ಮಹಿಳಾ ಸಬ್ ಇನ್ಸ್ಪೆಕ್ಟರ್ಗೆ ವಿಷಯ ತಿಳಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಕಿರುಕುಳದ ವಿಷಯವನ್ನು ಯಾರಿಗಾದರೂ ಹೇಳಿದರೆ ಮರ್ಯಾದೆ ಹೋಗುತ್ತದೆ. ಸುಮ್ಮನಿರು’ ಎಂದು ಸಬ್ ಇನ್ಸ್ಪೆಕ್ಟರ್ ಹೇಳಿದ್ದರು.<br />ಠಾಣೆಯಿಂದ ತೆರಳಿದ್ದ ಯುವತಿ, ಸಂಬಂಧಿಕರಿಗೆ ವಿಷಯ ತಿಳಿಸಿದ್ದರು. ಅವರ ಮೂಲಕವೇ ಡಿಸಿಪಿ ಭೇಟಿಯಾಗಿ ದೂರು ನೀಡಿದ್ದರು’ ಎಂದು ಮೂಲಗಳು ಹೇಳಿವೆ.</p>.<p class="Subhead"><strong>ದೂರು ನೀಡಿದ್ದ ಸಿಬ್ಬಂದಿ: </strong>‘ಠಾಣೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಚಟುವಟಿಕೆಗಳಿಗೆ ರಾಜಣ್ಣ ಕುಮ್ಮಕ್ಕು ನೀಡುತ್ತಿದ್ದಾರೆ. ದೂರುದಾರರು ಹಾಗೂ ಆರೋಪಿಗಳನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ಠಾಣೆ ಸಿಬ್ಬಂದಿಯೇ ಈ ಹಿಂದೆ ಡಿಸಿಪಿಗೆ ದೂರು ನೀಡಿದ್ದರು. ಕೆಲ ಸ್ಥಳೀಯ ನಿವಾಸಿಗಳು, ಲೋಕಾಯುಕ್ತಕ್ಕೂ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಂಚನೆ ಪ್ರಕರಣದಲ್ಲಿ ದೂರು ನೀಡಿದ್ದ ಯುವತಿಗೆ ಕೊಡಿಗೇಹಳ್ಳಿ ಠಾಣೆ ಇನ್ಸ್ಪೆಕ್ಟರ್ ಎನ್.ರಾಜಣ್ಣ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ತನಿಖೆ ನಡೆಸಿದ್ದ ಈಶಾನ್ಯ ವಿಭಾಗದ ಡಿಸಿಪಿ ಬಿ.ಎಂ. ಲಕ್ಷ್ಮಿಪ್ರಸಾದ್ ಅವರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆ.</p>.<p>‘ಇನ್ಸ್ಪೆಕ್ಟರ್ ರಾಜಣ್ಣ ವಿರುದ್ಧ ಯುವತಿ ದೂರು ನೀಡಿದ್ದರು. ಎಸಿಪಿ ನೇತೃತ್ವದಲ್ಲಿ ಪ್ರಾಥಮಿಕ ತನಿಖೆ ನಡೆಸಲಾಗಿದೆ. ಕೆಲ ಪುರಾವೆಗಳೂ ಸಿಕ್ಕಿವೆ. ಎಸಿಪಿ ವರದಿಯನ್ನು ಪರಿಶೀಲಿಸಿ ಕಮಿಷನರ್ ಅವರಿಗೆ ಸಲ್ಲಿಸಲಾಗಿದೆ. ಕಮಿಷನರ್ ಅವರೇ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಡಿಸಿಪಿ ಲಕ್ಷ್ಮಿಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Subhead"><strong>ಏನಿದು ಪ್ರಕರಣ: </strong>‘ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆತ, ಯುವತಿ ಬಳಿ ₹ 15 ಲಕ್ಷ ಸಾಲ ಪಡೆದಿದ್ದ. ಅದನ್ನು ವಾಪಸು ಕೊಡದೇ ಸತಾಯಿಸುತ್ತಿದ್ದ. ಈ ಬಗ್ಗೆ ಯುವತಿ, ಕೊಡಿಗೇಹಳ್ಳಿ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ದೂರು ನೀಡಲು ಬಂದಿದ್ದ ವೇಳೆ ಯುವತಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ ಇನ್ಸ್ಪೆಕ್ಟರ್ ರಾಜಣ್ಣ ಸಂದೇಶ ಕಳುಹಿಸಲಾರಂಭಿಸಿದ್ದ. ‘ಭೇಟಿಯಾಗೋಣ ಬಾ’ ಎಂದು ಯುವತಿ ಯನ್ನು ಕರೆಯುತ್ತಿದ್ದ. ಪ್ರಕರಣದ ಪ್ರಗತಿ ತಿಳಿಯಲೆಂದು ಯುವತಿ, ಮಾರ್ಚ್ 24ರಂದು ಠಾಣೆಗೆ ಹೋಗಿದ್ದರು.’ ಎಂದು ತಿಳಿಸಿವೆ.</p>.<p>‘ಯುವತಿಯನ್ನು ತನ್ನ ಕೊಠಡಿಗೆ ಕರೆಸಿಕೊಂಡಿದ್ದ ಇನ್ಸ್ಪೆಕ್ಟರ್, ಡ್ರೈ ಫ್ರೂಟ್ಸ್ ಬಾಕ್ಸ್ ನೀಡಿದ್ದ. ಅಸಭ್ಯವಾಗಿ ವರ್ತಿಸಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಯುವತಿ, ಕೊಠಡಿಯಿಂದ ಹೊರಬಂದು ಠಾಣೆಯಲ್ಲಿದ್ದ ಮಹಿಳಾ ಸಬ್ ಇನ್ಸ್ಪೆಕ್ಟರ್ಗೆ ವಿಷಯ ತಿಳಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಕಿರುಕುಳದ ವಿಷಯವನ್ನು ಯಾರಿಗಾದರೂ ಹೇಳಿದರೆ ಮರ್ಯಾದೆ ಹೋಗುತ್ತದೆ. ಸುಮ್ಮನಿರು’ ಎಂದು ಸಬ್ ಇನ್ಸ್ಪೆಕ್ಟರ್ ಹೇಳಿದ್ದರು.<br />ಠಾಣೆಯಿಂದ ತೆರಳಿದ್ದ ಯುವತಿ, ಸಂಬಂಧಿಕರಿಗೆ ವಿಷಯ ತಿಳಿಸಿದ್ದರು. ಅವರ ಮೂಲಕವೇ ಡಿಸಿಪಿ ಭೇಟಿಯಾಗಿ ದೂರು ನೀಡಿದ್ದರು’ ಎಂದು ಮೂಲಗಳು ಹೇಳಿವೆ.</p>.<p class="Subhead"><strong>ದೂರು ನೀಡಿದ್ದ ಸಿಬ್ಬಂದಿ: </strong>‘ಠಾಣೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಚಟುವಟಿಕೆಗಳಿಗೆ ರಾಜಣ್ಣ ಕುಮ್ಮಕ್ಕು ನೀಡುತ್ತಿದ್ದಾರೆ. ದೂರುದಾರರು ಹಾಗೂ ಆರೋಪಿಗಳನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ಠಾಣೆ ಸಿಬ್ಬಂದಿಯೇ ಈ ಹಿಂದೆ ಡಿಸಿಪಿಗೆ ದೂರು ನೀಡಿದ್ದರು. ಕೆಲ ಸ್ಥಳೀಯ ನಿವಾಸಿಗಳು, ಲೋಕಾಯುಕ್ತಕ್ಕೂ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>