<p><strong>ಬೆಂಗಳೂರು</strong>: ಶೈಕ್ಷಣಿಕ ಉದ್ದೇಶಕ್ಕೆ ಬಳಸುವ ನಿವೇಶನಗಳು ಅಥವಾ ಕಟ್ಟಡಗಳ ಮೇಲೆ ತೆರಿಗೆ ವಿಧಿಸುವ ಬಿಬಿಎಂಪಿ ಕ್ರಮವನ್ನು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ (ಕೃಪಾ) ಖಂಡಿಸಿದೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ಕರ್ನಾಟಕ ಮುನ್ಸಿಪಲ್ ಕಾಯ್ದೆ, ಬಿಬಿಎಂಪಿ ಕಾಯ್ದೆಯ ಪ್ರಕಾರ ಚಾರಿಟಬಲ್ ಟ್ರಸ್ಟ್ ಅಡಿಯಲ್ಲಿ ಸ್ಥಾಪಿಸಿರುವ ಶಾಲೆಗಳ ಕಟ್ಟಡ ಹಾಗೂ ಖಾಲಿ ನಿವೇಶನಗಳಿಗೆ ಯಾವುದೇ ರೀತಿಯ ತೆರಿಗೆ (ಆದಾಯ ತೆರಿಗೆ, ಸೇವಾ ತೆರಿಗೆ, ಸೆಸ್ ಅಥವಾ ಬಿಬಿಎಂಪಿ ತೆರಿಗೆ) ವಿಧಿಸುವಂತಿಲ್ಲ. ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಶಾಲೆಗಳ ಖಾಲಿ ನಿವೇಶನ ಹಾಗೂ ಕಟ್ಟಡಗಳ ಮೇಲೆ ತೆರಿಗೆ ವಿಧಿಸುವಂತೆ ಜುಲೈ 19ರಂದು ಆದೇಶಿಸಿ, ತೆರಿಗೆ ವಸೂಲಿ ಮಾಡಲಾಗುತ್ತಿದೆ’ ಎಂದು ದೂರಿದರು.</p>.<p>‘ಬಿಬಿಎಂಪಿ ಕಾನೂನುಬಾಹಿರವಾಗಿ ತೆರಿಗೆ ವಿಧಿಸುತ್ತಿರುವ ಕ್ರಮವನ್ನು ನಾವು ಖಂಡಿಸುತ್ತೇವೆ. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಶಾಲಾ–ಕಾಲೇಜುಗಳಿಂದ ಸಂಗ್ರಹಿಸಿರುವ ತೆರಿಗೆಯನ್ನು ಹಿಂದಿರುಗಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಹೋರಾಟ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶೈಕ್ಷಣಿಕ ಉದ್ದೇಶಕ್ಕೆ ಬಳಸುವ ನಿವೇಶನಗಳು ಅಥವಾ ಕಟ್ಟಡಗಳ ಮೇಲೆ ತೆರಿಗೆ ವಿಧಿಸುವ ಬಿಬಿಎಂಪಿ ಕ್ರಮವನ್ನು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ (ಕೃಪಾ) ಖಂಡಿಸಿದೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ಕರ್ನಾಟಕ ಮುನ್ಸಿಪಲ್ ಕಾಯ್ದೆ, ಬಿಬಿಎಂಪಿ ಕಾಯ್ದೆಯ ಪ್ರಕಾರ ಚಾರಿಟಬಲ್ ಟ್ರಸ್ಟ್ ಅಡಿಯಲ್ಲಿ ಸ್ಥಾಪಿಸಿರುವ ಶಾಲೆಗಳ ಕಟ್ಟಡ ಹಾಗೂ ಖಾಲಿ ನಿವೇಶನಗಳಿಗೆ ಯಾವುದೇ ರೀತಿಯ ತೆರಿಗೆ (ಆದಾಯ ತೆರಿಗೆ, ಸೇವಾ ತೆರಿಗೆ, ಸೆಸ್ ಅಥವಾ ಬಿಬಿಎಂಪಿ ತೆರಿಗೆ) ವಿಧಿಸುವಂತಿಲ್ಲ. ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಶಾಲೆಗಳ ಖಾಲಿ ನಿವೇಶನ ಹಾಗೂ ಕಟ್ಟಡಗಳ ಮೇಲೆ ತೆರಿಗೆ ವಿಧಿಸುವಂತೆ ಜುಲೈ 19ರಂದು ಆದೇಶಿಸಿ, ತೆರಿಗೆ ವಸೂಲಿ ಮಾಡಲಾಗುತ್ತಿದೆ’ ಎಂದು ದೂರಿದರು.</p>.<p>‘ಬಿಬಿಎಂಪಿ ಕಾನೂನುಬಾಹಿರವಾಗಿ ತೆರಿಗೆ ವಿಧಿಸುತ್ತಿರುವ ಕ್ರಮವನ್ನು ನಾವು ಖಂಡಿಸುತ್ತೇವೆ. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಶಾಲಾ–ಕಾಲೇಜುಗಳಿಂದ ಸಂಗ್ರಹಿಸಿರುವ ತೆರಿಗೆಯನ್ನು ಹಿಂದಿರುಗಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಹೋರಾಟ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>